Homeಮುಖಪುಟಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

ಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

- Advertisement -
- Advertisement -

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳ ಮೀಸಲಾತಿಯಲ್ಲಿ ಅಸ್ತಿತ್ವದಲ್ಲಿರುವ 50% ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ತರಬೇಕು ಎಂದು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಶುಕ್ರವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್, ಮೀಸಲಾತಿ ಆಂದೋಲನ ನಡೆಸುತ್ತಿರುವ ಮರಾಠರಿಗೆ ಮೀಸಲಾತಿ ನೀಡುವಾಗ, ಇತರ ಸಮುದಾಯಗಳಿಗೆ ಇರುವಂತಹ ಮಿತಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಮೀಸಲಾತಿಯ 50% ಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಸ್ತುತ, ಮೀಸಲಾತಿಯ ಮಿತಿ 50% ಆಗಿದ್ದು, ಆದರೆ ತಮಿಳುನಾಡಿನಲ್ಲಿ 78% ಮೀಸಲಾತಿಯಿದೆ. ಅವರಿಗೆ ಅದು ಸಾಧ್ಯವಾಗುವುದಾದರೆ ಮಹಾರಾಷ್ಟ್ರದಲ್ಲಿ 75% ದಷ್ಟು ಮೀಸಲಾತಿ ಏಕೆ ಸಾಧ್ಯವಿಲ್ಲ” ಎಂದು ಶರದ್‌ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವೆ ಮುಂದಾಳತ್ವ ವಹಿಸಿ ಮೀಸಲಾತಿಯ ಮಿತಿ ಹೆಚ್ಚಿಸಲು ಸಂವಿಧಾನಿಕ ತಿದ್ದುಪಡಿ ತರಬೇಕು ಎಂದು ಅವರು ಹೇಳಿದ್ದು, ಈ ತಿದ್ದುಪಡಿಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಮಹಾರಾಷ್ಟ್ರ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರ ನಡುವೆ ಸೀಟು ಹಂಚಿಕೆ ಮಾತುಕತೆ ಮುಂದಿನ ವಾರ ಮುಂದುವರಿಯಲಿದೆ ಎಂದು ಹೇಳಿದ್ದಾರೆ. “ಮಾತುಕತೆಗಳನ್ನು ಆದಷ್ಟು ಬೇಗ ಮುಗಿಸಲು ನಾನು ನಾಯಕರಿಗೆ ಸಲಹೆ ನೀಡುತ್ತೇನೆ. ಇದರಿಂದ ನಾವು ಬದಲಾವಣೆಯನ್ನು ಬಯಸುತ್ತಿರುವ ಜನರ ಬಳಿಗೆ ಬೇಗನೆ ಹೋಗಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಎಂವಿಎ ಮೈತ್ರಿ ಪಕ್ಷವಾದ ಎನ್‌ಸಿಪಿ (ಎಸ್‌ಪಿ), ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಡಿ ಉತ್ತಮ ಫಲಿತಾಂಶ ಕಂಡುಕೊಂಡಿತ್ತು. ರಾಜ್ಯದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಈ ಮೈತ್ರಿ ಗೆದ್ದಿವೆ. ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ.ಮೀಸಲಾತಿಯ 50% ಮಿತಿ

ಸರ್ಕಾರದಲ್ಲಿ ಬದಲಾವಣೆ ಆಗಬೇಕು ಎಂದು ಜನರು ಸಕಾರಾತ್ಮಕ ಮಾತನಾಡುತ್ತಿದ್ದಾರೆ. ಎಂವಿಎ ಮೈತ್ರಿ ಅವರ ಭಾವನೆಗಳನ್ನು ಗೌರವಿಸಬೇಕು ಎಂದು ಶರದ್ ಹೇಳಿದ್ದಾರೆ. ಮರಾಠಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನ ನೀಡುವ ನಿರ್ಧಾರವನ್ನು ಸ್ವಾಗತಿಸಿರುವ ಅವರು, ಇದಕ್ಕಾಗಿ ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಆದಾಗ್ಯೂ, ಮರಾಠಿ ಕಲಿಯಲು ಆಯ್ಕೆ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ಮತ್ತು ರಾಜ್ಯದಲ್ಲಿ ಮರಾಠಿ ಭಾಷಾ ಶಾಲೆಗಳನ್ನು ಮುಚ್ಚುವ ಬಗ್ಗೆ ಮಹಾರಾಷ್ಟ್ರ ಸರ್ಕಾರವು ಕಾಳಜಿ ವಹಿಸಬೇಕು ಎಂದು ಪವಾರ್ ಹೇಳಿದ್ದಾರೆ. ಈ ಅಂಶಗಳ ಕುರಿತು ಚರ್ಚೆಗಳ ಅಗತ್ಯವಿದ್ದು, ಸಮಸ್ಯೆ ಪರಿಹಾರಕ್ಕೆ ಮಾರ್ಗೋಪಾಯ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಬದ್ಲಾಪುರ್ ಪ್ರಕರಣದಂತಹ ಘಟನೆಗಳ ಬಗ್ಗೆ ಮಹಾರಾಷ್ಟ್ರದಲ್ಲಿ ಆಕ್ರೋಶವಿದೆ. ಈ ಘಟನೆಯಲ್ಲಿ ಅರೋಪಿಯಾಗಿದ್ದ ಗುತ್ತಿಗೆ ಸ್ವೀಪರ್ ಅನ್ನು ಪೊಲೀಸರು ಶೂಟೌಟ್‌ ಮಾಡಿ ಹತ್ಯೆ ಮಾಡಿದ್ದರು. ಆರೋಪಿಯು ಶಾಲೆಯ ಆವರಣದಲ್ಲಿ ಇಬ್ಬರು ಶಿಶುವಿಹಾರದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅರೋಪಿಸಲಾಗಿತ್ತು. “ಮಹಿಳೆಯರಿಗೆ ಆರ್ಥಿಕ ನೆರವು ನೀಡಿದರೂ ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಜನರು ಭಾವಿಸುತ್ತಿದ್ದಾರೆ” ಎಂದು ಶರದ್ ಹೇಳಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...