Homeಮುಖಪುಟಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

ಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

- Advertisement -
- Advertisement -

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳ ಮೀಸಲಾತಿಯಲ್ಲಿ ಅಸ್ತಿತ್ವದಲ್ಲಿರುವ 50% ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ತರಬೇಕು ಎಂದು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಶುಕ್ರವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್, ಮೀಸಲಾತಿ ಆಂದೋಲನ ನಡೆಸುತ್ತಿರುವ ಮರಾಠರಿಗೆ ಮೀಸಲಾತಿ ನೀಡುವಾಗ, ಇತರ ಸಮುದಾಯಗಳಿಗೆ ಇರುವಂತಹ ಮಿತಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಮೀಸಲಾತಿಯ 50% ಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಸ್ತುತ, ಮೀಸಲಾತಿಯ ಮಿತಿ 50% ಆಗಿದ್ದು, ಆದರೆ ತಮಿಳುನಾಡಿನಲ್ಲಿ 78% ಮೀಸಲಾತಿಯಿದೆ. ಅವರಿಗೆ ಅದು ಸಾಧ್ಯವಾಗುವುದಾದರೆ ಮಹಾರಾಷ್ಟ್ರದಲ್ಲಿ 75% ದಷ್ಟು ಮೀಸಲಾತಿ ಏಕೆ ಸಾಧ್ಯವಿಲ್ಲ” ಎಂದು ಶರದ್‌ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವೆ ಮುಂದಾಳತ್ವ ವಹಿಸಿ ಮೀಸಲಾತಿಯ ಮಿತಿ ಹೆಚ್ಚಿಸಲು ಸಂವಿಧಾನಿಕ ತಿದ್ದುಪಡಿ ತರಬೇಕು ಎಂದು ಅವರು ಹೇಳಿದ್ದು, ಈ ತಿದ್ದುಪಡಿಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಮಹಾರಾಷ್ಟ್ರ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರ ನಡುವೆ ಸೀಟು ಹಂಚಿಕೆ ಮಾತುಕತೆ ಮುಂದಿನ ವಾರ ಮುಂದುವರಿಯಲಿದೆ ಎಂದು ಹೇಳಿದ್ದಾರೆ. “ಮಾತುಕತೆಗಳನ್ನು ಆದಷ್ಟು ಬೇಗ ಮುಗಿಸಲು ನಾನು ನಾಯಕರಿಗೆ ಸಲಹೆ ನೀಡುತ್ತೇನೆ. ಇದರಿಂದ ನಾವು ಬದಲಾವಣೆಯನ್ನು ಬಯಸುತ್ತಿರುವ ಜನರ ಬಳಿಗೆ ಬೇಗನೆ ಹೋಗಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಎಂವಿಎ ಮೈತ್ರಿ ಪಕ್ಷವಾದ ಎನ್‌ಸಿಪಿ (ಎಸ್‌ಪಿ), ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಡಿ ಉತ್ತಮ ಫಲಿತಾಂಶ ಕಂಡುಕೊಂಡಿತ್ತು. ರಾಜ್ಯದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಈ ಮೈತ್ರಿ ಗೆದ್ದಿವೆ. ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ.ಮೀಸಲಾತಿಯ 50% ಮಿತಿ

ಸರ್ಕಾರದಲ್ಲಿ ಬದಲಾವಣೆ ಆಗಬೇಕು ಎಂದು ಜನರು ಸಕಾರಾತ್ಮಕ ಮಾತನಾಡುತ್ತಿದ್ದಾರೆ. ಎಂವಿಎ ಮೈತ್ರಿ ಅವರ ಭಾವನೆಗಳನ್ನು ಗೌರವಿಸಬೇಕು ಎಂದು ಶರದ್ ಹೇಳಿದ್ದಾರೆ. ಮರಾಠಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನ ನೀಡುವ ನಿರ್ಧಾರವನ್ನು ಸ್ವಾಗತಿಸಿರುವ ಅವರು, ಇದಕ್ಕಾಗಿ ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಆದಾಗ್ಯೂ, ಮರಾಠಿ ಕಲಿಯಲು ಆಯ್ಕೆ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ಮತ್ತು ರಾಜ್ಯದಲ್ಲಿ ಮರಾಠಿ ಭಾಷಾ ಶಾಲೆಗಳನ್ನು ಮುಚ್ಚುವ ಬಗ್ಗೆ ಮಹಾರಾಷ್ಟ್ರ ಸರ್ಕಾರವು ಕಾಳಜಿ ವಹಿಸಬೇಕು ಎಂದು ಪವಾರ್ ಹೇಳಿದ್ದಾರೆ. ಈ ಅಂಶಗಳ ಕುರಿತು ಚರ್ಚೆಗಳ ಅಗತ್ಯವಿದ್ದು, ಸಮಸ್ಯೆ ಪರಿಹಾರಕ್ಕೆ ಮಾರ್ಗೋಪಾಯ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಬದ್ಲಾಪುರ್ ಪ್ರಕರಣದಂತಹ ಘಟನೆಗಳ ಬಗ್ಗೆ ಮಹಾರಾಷ್ಟ್ರದಲ್ಲಿ ಆಕ್ರೋಶವಿದೆ. ಈ ಘಟನೆಯಲ್ಲಿ ಅರೋಪಿಯಾಗಿದ್ದ ಗುತ್ತಿಗೆ ಸ್ವೀಪರ್ ಅನ್ನು ಪೊಲೀಸರು ಶೂಟೌಟ್‌ ಮಾಡಿ ಹತ್ಯೆ ಮಾಡಿದ್ದರು. ಆರೋಪಿಯು ಶಾಲೆಯ ಆವರಣದಲ್ಲಿ ಇಬ್ಬರು ಶಿಶುವಿಹಾರದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅರೋಪಿಸಲಾಗಿತ್ತು. “ಮಹಿಳೆಯರಿಗೆ ಆರ್ಥಿಕ ನೆರವು ನೀಡಿದರೂ ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಜನರು ಭಾವಿಸುತ್ತಿದ್ದಾರೆ” ಎಂದು ಶರದ್ ಹೇಳಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...