Homeಮುಖಪುಟಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಮೀಸಲಾತಿ | ರಾಜ್ಯಸಭೆಯಲ್ಲಿ ಗದ್ದಲ; ಕಲಾಪ ಮುಂದೂಡಿಕೆ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಮೀಸಲಾತಿ | ರಾಜ್ಯಸಭೆಯಲ್ಲಿ ಗದ್ದಲ; ಕಲಾಪ ಮುಂದೂಡಿಕೆ

- Advertisement -
- Advertisement -

ಕರ್ನಾಟಕದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ವಿಷಯದ ಬಗ್ಗೆ ರಾಜ್ಯಸಭೆಯಲ್ಲಿ ಆಡಳಿತರೂಢ ಮತ್ತು ವಿಪಕ್ಷಗಳ ನಡುವೆ ತೀವ್ರ ಗದ್ದಲ ಏರ್ಪಟ್ಟಿದ್ದು ಸೋಮವಾರ ರಾಜ್ಯಸಭೆಯ ಕಲಾಪವನ್ನು ಯಾವುದೇ ಕಲಾಪ ನಡೆಸದೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿ ಸಂಸದರು ಗದ್ದಲ ಸೃಷ್ಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಶಕ್ತಿ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಕರ್ನಾಟಕದಲ್ಲಿ ಮುಸ್ಲಿಮರಿಗೆ

ಈ ವಿಚಾರದ ಬಗ್ಗೆ ಆಡಳಿತ ಪಕ್ಷದವರು ಘೋಷಣೆ ಕೂಗುತ್ತಿದ್ದಂತೆ ಸಭಾಪತಿ ಜಗದೀಪ್ ಧನಖರ್ ಅವರು ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಿದ್ದಾರೆ. ಸದನವು ಸಭೆ ಸೇರುತ್ತಿದ್ದಂತೆಯೇ ಬಿಜೆಪಿ ಸಂಸದರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಧನಖರ್ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಲು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಅವಕಾಶ ನೀಡಿದರು.

ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಲು ಪಕ್ಷವು ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಹೇಳಿದ್ದಾರೆ ಎಂದು ರಿಜಿಜು ಹೇಳಿದರು. ಅವರು ‘ನಾಯಕ’ನ ಹೆಸರನ್ನು ಹೆಸರಿಸದಿದ್ದರೂ, ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

“ಈ ಹೇಳಿಕೆಯನ್ನು ನಾವು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದು ಕಿರಣ್ ರಿಜಿಜು ಹೇಳಿದ್ದು, ಈ ಹೇಳಿಕೆಯು ಪಕ್ಷದ ಯಾವುದೊ ಒಬ್ಬ ಸಾಮಾನ್ಯ ನಾಯಕರಿಂದ ಬಂದಿದ್ದಲ್ಲ, ಬದಲಾಗಿ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯಿಂದ ಬಂದಿದೆ ಎಂದು ಹೇಳಿದ್ದಾರೆ. ಇದು “ಅತ್ಯಂತ ಗಂಭೀರ” ಎಂದು ಹೇಳಿದ ಅವರು, ಧರ್ಮಾಧಾರಿತ ಮೀಸಲಾತಿ ಒದಗಿಸಲು ಸಂವಿಧಾನವನ್ನು ಬದಲಾಯಿಸುವುದನ್ನು “ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಸಂವಿಧಾನದ ಪುಸ್ತಕವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ ಆದರೆ ಅದನ್ನು ದುರ್ಬಲಗೊಳಿಸಲು ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ವೇಳೆ ಧನಖರ್ ಅವರು ಬಿಜೆಪಿ ಏನು ಬಯಸುತ್ತದೆ ಎಂದು ಕೇಳಿದ್ದು, ಇದಕ್ಕೆ ಉತ್ತರಿಸಿದ ಸಚಿವ ಕಿರಣ್, ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ಏಕೆ ಬದಲಾಯಿಸಲು ಬಯಸುತ್ತದೆ ಎಂದು ಸದನ ಮತ್ತು ರಾಷ್ಟ್ರಕ್ಕೆ ತಿಳಿಸಬೇಕು ಎಂದು ಹೇಳಿದ್ದಾರೆ.

ಸದನದ ನಾಯಕ ಮತ್ತು ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ಕಾಂಗ್ರೆಸ್ ಸಂವಿಧಾನವನ್ನು ತುಂಡು ತುಂಡಾಗಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂಬೇಡ್ಕರ್ ಭಾರತೀಯ ಸಂವಿಧಾನವನ್ನು ರಚಿಸುವಾಗ “ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದಿಲ್ಲ… ಅದು ಭಾರತದ ಸಂವಿಧಾನದ ಅಂಗೀಕೃತ ತತ್ವ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ, ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಸ್ಲಿಮರಿಗೆ

ಈ ವೇಳೆ ಧನಕರ್ ಅವರು, ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರಿಗೆ ಸಾರ್ವಜನಿಕ ಗುತ್ತಿಗೆಗಳಲ್ಲಿ ಶೇಕಡಾ 4 ರಷ್ಟು ಮೀಸಲಾತಿಯನ್ನು ಒದಗಿಸಿರುವ ಬಗ್ಗೆ ಅವರು ಖರ್ಗೆ ಅವರಿಂದ ಹೇಳಿಕೆಯನ್ನು ಕೋರಿದರು. ಜೊತೆಗೆ, ಕರ್ನಾಟಕದ ಸಚಿವರ ಹೇಳಿಕೆಗಳನ್ನು ದೃಢೀಕರಿಸುವಂತೆ ಅವರು ಕೇಂದ್ರ ಸಚಿವ ಕಿರಣ್ ಅವರನ್ನು ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ ಅವರು, “ಅಂಬೇಡ್ಕರ್ ಒದಗಿಸಿದ ಸಂವಿಧಾನವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಜನರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದವರು ನಾವು (ಮತ್ತು) ಇವರು ಭಾರತ್ ತೋಡೋ (ಭಾರತವನ್ನು ಮುರಿಯುವುದರಲ್ಲಿ) ನಲ್ಲಿ ನಂಬಿಕೆ ಇಟ್ಟವರು” ಎಂದು ಅವರು ಬಿಜೆಪಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ನಂತರ ಅವರು ಮತ್ತಷ್ಟು ಮಾತನಾಡಲು ಪ್ರಯತ್ನಿಸಿದರಾದರೂ, ಬಿಜೆಪಿ ಸಂಸದರ ಘೋಷಣೆಗಳ ಕಾರಣಕ್ಕೆ ಅವರ ಭಾಷಣಕ್ಕೆ ಪದೇ ಪದೇ ಅಡ್ಡಿಯಾಯಿತು. ಈ ವೇಳೆ ಸಭಾಪತಿ ಧನಖರ್ ಅವರು ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಿದಾಗಿ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...