Homeಮುಖಪುಟ"ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯುತ್ತದೆ" : ವಿವಾದ ಸ್ವರೂಪ ಪಡೆದ...

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯುತ್ತದೆ” : ವಿವಾದ ಸ್ವರೂಪ ಪಡೆದ ಐಎಎಸ್ ಅಧಿಕಾರಿಯ ಹೇಳಿಕೆ

- Advertisement -
- Advertisement -

ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೌಕರರ ಸಂಘ ಎಜೆಎಕೆಎಸ್ ಪ್ರಾಂತೀಯ ಅಧ್ಯಕ್ಷ ಹಾಗೂ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ.

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವಳು ಅವನೊಂದಿಗೆ ಸಂಬಂಧ ಹೊಂದಲು ಅನುಮತಿಸುವವರೆಗೆ ಮೀಸಲಾತಿ ಮುಂದುವರಿಯುತ್ತದೆ” ಎಂದು ಭಾನುವಾರ (ನ.23) ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

View this post on Instagram

A post shared by Mews.in (@mewsinsta)

ಈ ಹೇಳಿಕೆಯ ವಿಡಿಯೋ ಸೋಮವಾರ (ನ.24) ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬ್ರಾಹ್ಮಣ ಸಂಘಟನೆಗಳು, ಐಎಎಸ್ ಅಧಿಕಾರಿಯ ಹೇಳಿಕೆ ‘ಅಸಭ್ಯ, ಜಾತಿವಾದಿ ಮತ್ತು ಬ್ರಾಹ್ಮಣ ಹೆಣ್ಣುಮಕ್ಕಳಿಗೆ ಅತ್ಯಂತ ಅವಮಾನಕರ” ಎಂದು ಟೀಕಿಸಿವೆ. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

“ಬ್ರಾಹ್ಮಣ ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ಅಸಭ್ಯ ಹೇಳಿಕೆ ನೀಡಿರುವ ಅಧಿಕಾರಿಯ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ಇಡೀ ಬ್ರಾಹ್ಮಣ ಸಮಾಜವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಅಖಿಲ ಭಾರತ ಬ್ರಾಹ್ಮಣ ಸಮಾಜದ ರಾಜ್ಯಾಧ್ಯಕ್ಷ ಪುಷ್ಪೇಂದ್ರ ಮಿಶ್ರಾ ಹೇಳಿದ್ದಾರೆ.

ಐಎಎಸ್ ಅಧಿಕಾರಿಯ ಹೇಳಿಕೆ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸುತ್ತದೆ. ಈ ಕಾರಣಕ್ಕೆ ಅವರ ವಿರುದ್ಧ ಕಠಿಣ ಕ್ರಮ ಇನ್ನಷ್ಟು ಮುಖ್ಯವಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಮಧ್ಯಪ್ರದೇಶ ಸಚಿವಾಲಯ ಸೇವಾ ಅಧಿಕಾರಿಗಳು-ನೌಕರರ ಸಂಘದ ನಾಯಕ, ಸುಧೀರ್ ನಾಯಕ್ ಐಎಎಸ್ ಅಧಿಕಾರಿಯ ಹೇಳಿಕೆಯನ್ನು ‘ಸಾಮಾನ್ಯ ವರ್ಗದ ಜನರಿಗೆ ಅತ್ಯಂತ ಆಕ್ಷೇಪಾರ್ಹ ಮತ್ತು ಅವಮಾನಕರ’ ಎಂದು ಕರೆದಿದ್ದು, ನಾಗರಿಕ ಸೇವಾ (ನಡತೆ) ನಿಯಮಗಳ ಅಡಿಯಲ್ಲಿ ವರ್ಮಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ವರ್ಮಾ ಅವರು ಮಧ್ಯಪ್ರದೇಶ ಸರ್ಕಾರದ ಒಬ್ಬ ಅಧಿಕಾರಿ. ಅವರಿಗೆ ವಿವಾದಗಳು ಹೊಸತಲ್ಲ. 2021-22ರಲ್ಲಿ ವರ್ಮಾ ವಿರುದ್ದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಆ ಕೇಸ್‌ನಿಂದ ತಪ್ಪಿಸಿಕೊಳ್ಳಲು ವರ್ಮಾ ನಕಲಿ ನ್ಯಾಯಾಲಯದ ಆದೇಶಗಳನ್ನು ರಚಿಸಿದ್ದರು. ಅದಕ್ಕೆ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಸಹಿ ಹಾಕಿ ಕೇಸ್ ಗೆದ್ದಂತೆ ಬಿಂಬಿಸಿದ್ದರು. ಯಾವ ನ್ಯಾಯಾಧೀಶರ ಹೆಸರಿನಲ್ಲಿ ಸಹಿ ಹಾಕಲಾಗಿತ್ತೋ, ಆ ನ್ಯಾಯಾಧೀಶರೇ ಗಮನಿಸಿ, “ಇದು ನನ್ನ ಸಹಿ ಅಲ್ಲ, ನಾನು ಇಂಥ ಆದೇಶ ಕೊಟ್ಟಿಲ್ಲ” ಎಂದು ಪೊಲೀಸ್ ದೂರು ದಾಖಲಿಸಿದ್ದರು. ಅಂತಿಮವಾಗಿ ಪೊಲೀಸರು ವರ್ಮಾ ಅವರನ್ನು ಬಂಧಿಸಿದ್ದರು.

ಪ್ರಸ್ತುತ ಐಎಎಸ್ ಅಧಿಕಾರಿಯಾಗಿರುವ ವರ್ಮಾ, ರಾಜ್ಯ ಆಡಳಿತ ಕೇಡರ್‌ನಿಂದ ಭಾರತೀಯ ಆಡಳಿತ ಸೇವೆ (ಐಎಎಸ್) ಗೆ ಬಡ್ತಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದೂ ಹೇಳಲಾಗ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...