Homeಮುಖಪುಟ"ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯುತ್ತದೆ" : ವಿವಾದ ಸ್ವರೂಪ ಪಡೆದ...

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯುತ್ತದೆ” : ವಿವಾದ ಸ್ವರೂಪ ಪಡೆದ ಐಎಎಸ್ ಅಧಿಕಾರಿಯ ಹೇಳಿಕೆ

- Advertisement -
- Advertisement -

ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೌಕರರ ಸಂಘ ಎಜೆಎಕೆಎಸ್ ಪ್ರಾಂತೀಯ ಅಧ್ಯಕ್ಷ ಹಾಗೂ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ.

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವಳು ಅವನೊಂದಿಗೆ ಸಂಬಂಧ ಹೊಂದಲು ಅನುಮತಿಸುವವರೆಗೆ ಮೀಸಲಾತಿ ಮುಂದುವರಿಯುತ್ತದೆ” ಎಂದು ಭಾನುವಾರ (ನ.23) ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

View this post on Instagram

A post shared by Mews.in (@mewsinsta)

ಈ ಹೇಳಿಕೆಯ ವಿಡಿಯೋ ಸೋಮವಾರ (ನ.24) ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬ್ರಾಹ್ಮಣ ಸಂಘಟನೆಗಳು, ಐಎಎಸ್ ಅಧಿಕಾರಿಯ ಹೇಳಿಕೆ ‘ಅಸಭ್ಯ, ಜಾತಿವಾದಿ ಮತ್ತು ಬ್ರಾಹ್ಮಣ ಹೆಣ್ಣುಮಕ್ಕಳಿಗೆ ಅತ್ಯಂತ ಅವಮಾನಕರ” ಎಂದು ಟೀಕಿಸಿವೆ. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

“ಬ್ರಾಹ್ಮಣ ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ಅಸಭ್ಯ ಹೇಳಿಕೆ ನೀಡಿರುವ ಅಧಿಕಾರಿಯ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ಇಡೀ ಬ್ರಾಹ್ಮಣ ಸಮಾಜವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಅಖಿಲ ಭಾರತ ಬ್ರಾಹ್ಮಣ ಸಮಾಜದ ರಾಜ್ಯಾಧ್ಯಕ್ಷ ಪುಷ್ಪೇಂದ್ರ ಮಿಶ್ರಾ ಹೇಳಿದ್ದಾರೆ.

ಐಎಎಸ್ ಅಧಿಕಾರಿಯ ಹೇಳಿಕೆ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸುತ್ತದೆ. ಈ ಕಾರಣಕ್ಕೆ ಅವರ ವಿರುದ್ಧ ಕಠಿಣ ಕ್ರಮ ಇನ್ನಷ್ಟು ಮುಖ್ಯವಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಮಧ್ಯಪ್ರದೇಶ ಸಚಿವಾಲಯ ಸೇವಾ ಅಧಿಕಾರಿಗಳು-ನೌಕರರ ಸಂಘದ ನಾಯಕ, ಸುಧೀರ್ ನಾಯಕ್ ಐಎಎಸ್ ಅಧಿಕಾರಿಯ ಹೇಳಿಕೆಯನ್ನು ‘ಸಾಮಾನ್ಯ ವರ್ಗದ ಜನರಿಗೆ ಅತ್ಯಂತ ಆಕ್ಷೇಪಾರ್ಹ ಮತ್ತು ಅವಮಾನಕರ’ ಎಂದು ಕರೆದಿದ್ದು, ನಾಗರಿಕ ಸೇವಾ (ನಡತೆ) ನಿಯಮಗಳ ಅಡಿಯಲ್ಲಿ ವರ್ಮಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ವರ್ಮಾ ಅವರು ಮಧ್ಯಪ್ರದೇಶ ಸರ್ಕಾರದ ಒಬ್ಬ ಅಧಿಕಾರಿ. ಅವರಿಗೆ ವಿವಾದಗಳು ಹೊಸತಲ್ಲ. 2021-22ರಲ್ಲಿ ವರ್ಮಾ ವಿರುದ್ದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಆ ಕೇಸ್‌ನಿಂದ ತಪ್ಪಿಸಿಕೊಳ್ಳಲು ವರ್ಮಾ ನಕಲಿ ನ್ಯಾಯಾಲಯದ ಆದೇಶಗಳನ್ನು ರಚಿಸಿದ್ದರು. ಅದಕ್ಕೆ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಸಹಿ ಹಾಕಿ ಕೇಸ್ ಗೆದ್ದಂತೆ ಬಿಂಬಿಸಿದ್ದರು. ಯಾವ ನ್ಯಾಯಾಧೀಶರ ಹೆಸರಿನಲ್ಲಿ ಸಹಿ ಹಾಕಲಾಗಿತ್ತೋ, ಆ ನ್ಯಾಯಾಧೀಶರೇ ಗಮನಿಸಿ, “ಇದು ನನ್ನ ಸಹಿ ಅಲ್ಲ, ನಾನು ಇಂಥ ಆದೇಶ ಕೊಟ್ಟಿಲ್ಲ” ಎಂದು ಪೊಲೀಸ್ ದೂರು ದಾಖಲಿಸಿದ್ದರು. ಅಂತಿಮವಾಗಿ ಪೊಲೀಸರು ವರ್ಮಾ ಅವರನ್ನು ಬಂಧಿಸಿದ್ದರು.

ಪ್ರಸ್ತುತ ಐಎಎಸ್ ಅಧಿಕಾರಿಯಾಗಿರುವ ವರ್ಮಾ, ರಾಜ್ಯ ಆಡಳಿತ ಕೇಡರ್‌ನಿಂದ ಭಾರತೀಯ ಆಡಳಿತ ಸೇವೆ (ಐಎಎಸ್) ಗೆ ಬಡ್ತಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದೂ ಹೇಳಲಾಗ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...