Homeಮುಖಪುಟ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಕೈಲಾಸ ಎಂಬ ಹಿಂದೂ ರಾಷ್ಟ್ರವನ್ನು ಕಟ್ಟಿಕೊಂಡಿದ್ದಾಗಿ ಹೇಳಿಕೊಂಡಿದ್ದ ವಿವಾದಾತ್ಮಕ ವ್ಯಕ್ತಿ ನಿತ್ಯಾನಂದ, ಇದೀಗ ತನ್ನ ದೇಶದ ರಿಸರ್ವ್ ಬ್ಯಾಂಕಿನ ಕರೆನ್ಸಿಯನ್ನು ಬಿಡುಗಡೆ ಮಾಡಿದ್ದಾರೆ.

ಗಣೇಶ ಚತುರ್ಥಿಯಂದು ರಿಸರ್ವ್ ಬ್ಯಾಂಕ್ ಆಫ್ ಕೈಲಾಸದ ಕರೆನ್ಸಿಯನ್ನು ಬಿಡುಗಡೆಗೊಳಿಸುವುದಾಗಿ ನಿತ್ಯಾನಂದ ವಾರಗಳ ಹಿಂದೆ ಹೇಳಿಕೊಂಡಿದ್ದರು. ಇದೀಗ ಇಂದು ನೋಟನ್ನು ಬಿಡುಗಡೆ ಮಾಡಲಾಗಿದೆ ಎಂದು ಫೇಸ್ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮಹಿಳೆಯರ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಹುಡುಕಾಟ ನಡೆಸುತ್ತಿದೆ. ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇವೆ. ನಿತ್ಯಾನಂದ ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.


ಕೈಲಾಸ ಎಂಬುದು ಸ್ವತಂತ್ಯ್ರ ದೇಶವಾಗಿದ್ದು, ಇಲ್ಲಿಗೆ ನಾನೇ ಪ್ರಧಾನಿ. ಇಲ್ಲಿ ಪೊಲೀಸ್ ಕೋರ್ಟ್ ವ್ಯವಸ್ಥೆ ಇರಲಿದೆ. ಇಲ್ಲಿಗೆ ಆಗಮಿಸುವ ಭಕ್ತರಿಗೆ ಶಿಕ್ಷಣ ಮತ್ತು ವೈದ್ಯಕೀಯ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿಕೊಂಡಿದ್ದರು.

ಇಂದು ಕರೆನ್ಸಿ ಬಿಡುಗಡೆ ಮಾಡಿ ಫೇಸ್ಬುಕ್ನಲ್ಲಿ ಬರಹವೊಂದನ್ನು ಪ್ರಕಟಿಸಿರುವ ನಿತ್ಯಾನಂದ, “ಕೈಲಾಸದ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ಕೈಲಾಸದ ರಿಸರ್ವ್ ಬ್ಯಾಂಕ್‌ಅನ್ನು ಗಣಪತಿ, ಪರಮಾಶಿವ ಮತ್ತು ಗುರುಗಳ ಪಾದಕ್ಕೆ ಸಮರ್ಪಿಸುತ್ತಿದ್ದೇವೆ. ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶ, ಜಗತ್ಗುರು ಮಹಾಸನ್ನೀಧನಂ ಅವರ ದೈವಿಕ ಪವಿತ್ರ ಭಗವಾನ್ ನಿತ್ಯಾನಂದ ಪರಮಾಶಿವಂ!

On the auspicious occasion of Ganesha Chaturti in KAILASA, the Reserve Bank of KAILASA offers at the feet of Ganapati,…

Posted by KAILASA's HDH Nithyananda Paramashivam on Friday, August 21, 2020

ಕೈಲಾಸಾ ಮತ್ತು ಅದರ ಸನ್ಯಾಸಿಗಳ ತಂಡವು 100 ಕ್ಕೂ ಹೆಚ್ಚು ಪುಸ್ತಕ, 360 ಲೇಖನಗಳು ಮತ್ತು ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಹಿಂದೂ ಆರ್ಥಿಕ ನೀತಿಗಳ ಬಗ್ಗೆ ವ್ಯಾಪಕ ಸಂಶೋಧನೆ ಮತ್ತು ಅಧ್ಯಯನವನ್ನು ಮಾಡಿದೆ. ಅಲ್ಲದೆ, ಕೈಲಾಸಾದ ಕರೆನ್ಸಿಗಳನ್ನು ಆಚರಣಾತ್ಮಕವಾಗಿ ಇಂದು ಬಿಡುಗಡೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.


ಓದಿ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...