Homeಮುಖಪುಟ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಕೈಲಾಸ ಎಂಬ ಹಿಂದೂ ರಾಷ್ಟ್ರವನ್ನು ಕಟ್ಟಿಕೊಂಡಿದ್ದಾಗಿ ಹೇಳಿಕೊಂಡಿದ್ದ ವಿವಾದಾತ್ಮಕ ವ್ಯಕ್ತಿ ನಿತ್ಯಾನಂದ, ಇದೀಗ ತನ್ನ ದೇಶದ ರಿಸರ್ವ್ ಬ್ಯಾಂಕಿನ ಕರೆನ್ಸಿಯನ್ನು ಬಿಡುಗಡೆ ಮಾಡಿದ್ದಾರೆ.

ಗಣೇಶ ಚತುರ್ಥಿಯಂದು ರಿಸರ್ವ್ ಬ್ಯಾಂಕ್ ಆಫ್ ಕೈಲಾಸದ ಕರೆನ್ಸಿಯನ್ನು ಬಿಡುಗಡೆಗೊಳಿಸುವುದಾಗಿ ನಿತ್ಯಾನಂದ ವಾರಗಳ ಹಿಂದೆ ಹೇಳಿಕೊಂಡಿದ್ದರು. ಇದೀಗ ಇಂದು ನೋಟನ್ನು ಬಿಡುಗಡೆ ಮಾಡಲಾಗಿದೆ ಎಂದು ಫೇಸ್ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮಹಿಳೆಯರ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಹುಡುಕಾಟ ನಡೆಸುತ್ತಿದೆ. ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇವೆ. ನಿತ್ಯಾನಂದ ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.


ಕೈಲಾಸ ಎಂಬುದು ಸ್ವತಂತ್ಯ್ರ ದೇಶವಾಗಿದ್ದು, ಇಲ್ಲಿಗೆ ನಾನೇ ಪ್ರಧಾನಿ. ಇಲ್ಲಿ ಪೊಲೀಸ್ ಕೋರ್ಟ್ ವ್ಯವಸ್ಥೆ ಇರಲಿದೆ. ಇಲ್ಲಿಗೆ ಆಗಮಿಸುವ ಭಕ್ತರಿಗೆ ಶಿಕ್ಷಣ ಮತ್ತು ವೈದ್ಯಕೀಯ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿಕೊಂಡಿದ್ದರು.

ಇಂದು ಕರೆನ್ಸಿ ಬಿಡುಗಡೆ ಮಾಡಿ ಫೇಸ್ಬುಕ್ನಲ್ಲಿ ಬರಹವೊಂದನ್ನು ಪ್ರಕಟಿಸಿರುವ ನಿತ್ಯಾನಂದ, “ಕೈಲಾಸದ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ಕೈಲಾಸದ ರಿಸರ್ವ್ ಬ್ಯಾಂಕ್‌ಅನ್ನು ಗಣಪತಿ, ಪರಮಾಶಿವ ಮತ್ತು ಗುರುಗಳ ಪಾದಕ್ಕೆ ಸಮರ್ಪಿಸುತ್ತಿದ್ದೇವೆ. ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶ, ಜಗತ್ಗುರು ಮಹಾಸನ್ನೀಧನಂ ಅವರ ದೈವಿಕ ಪವಿತ್ರ ಭಗವಾನ್ ನಿತ್ಯಾನಂದ ಪರಮಾಶಿವಂ!

On the auspicious occasion of Ganesha Chaturti in KAILASA, the Reserve Bank of KAILASA offers at the feet of Ganapati,…

Posted by KAILASA's HDH Nithyananda Paramashivam on Friday, August 21, 2020

ಕೈಲಾಸಾ ಮತ್ತು ಅದರ ಸನ್ಯಾಸಿಗಳ ತಂಡವು 100 ಕ್ಕೂ ಹೆಚ್ಚು ಪುಸ್ತಕ, 360 ಲೇಖನಗಳು ಮತ್ತು ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಹಿಂದೂ ಆರ್ಥಿಕ ನೀತಿಗಳ ಬಗ್ಗೆ ವ್ಯಾಪಕ ಸಂಶೋಧನೆ ಮತ್ತು ಅಧ್ಯಯನವನ್ನು ಮಾಡಿದೆ. ಅಲ್ಲದೆ, ಕೈಲಾಸಾದ ಕರೆನ್ಸಿಗಳನ್ನು ಆಚರಣಾತ್ಮಕವಾಗಿ ಇಂದು ಬಿಡುಗಡೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.


ಓದಿ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...