Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...