Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...