Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...