Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...