Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...