Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...