Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...