Homeಮುಖಪುಟವಿಡಿಯೋ| ಜಯರಾಜ್, ಬೆನಿಕ್ಸ್ ಹತ್ಯೆ: ಪೊಲೀಸರ ಬಂಧನಕ್ಕೆ ಪಟಾಕಿ ಸಿಡಿಸಿದ ಸಾಥಾನ್ಕುಳಂ ನಿವಾಸಿಗಳು..

ವಿಡಿಯೋ| ಜಯರಾಜ್, ಬೆನಿಕ್ಸ್ ಹತ್ಯೆ: ಪೊಲೀಸರ ಬಂಧನಕ್ಕೆ ಪಟಾಕಿ ಸಿಡಿಸಿದ ಸಾಥಾನ್ಕುಳಂ ನಿವಾಸಿಗಳು..

- Advertisement -
- Advertisement -

ತಮಿಳುನಾಡು ಪೊಲೀಸ್ ದೌರ್ಜನ್ಯಕ್ಕೆ ಮೃತಪಟ್ಟ ಜಯರಾಜ್ ಮತ್ತು ಬೆನಿಕ್ಸ್ ಪ್ರಕರಣದಲ್ಲಿ ಆರೋಪಿಗಳಾದ ನಾಲ್ವರು ಪೊಲೀಸರನ್ನು ಬಂಧಿಸುತ್ತಲೇ ಸಾಥಾನ್ಕುಳಂ ನಿವಾಸಿಗಳು ಪಟಾಕಿ ಸಿಡಿಸಿ ಸಮಾಧಾನ ವ್ಯಕ್ತಪಡಿಸಿರುವ ಘಟನೆ ಜರುಗಿದೆ.

ಸಬ್ ಇನ್ಸ್‌ಪೆಕ್ಟರ್‌ಗಳಾದ ರಘು ಗಣೇಶ್ ಮತ್ತು ಬಾಲಕೃಷ್ಣನ್ ಮತ್ತು ಕಾನ್‌ಸ್ಟೆಬಲ್‌ಗಳಾದ ಮುರುಗನ್ ಮತ್ತು ಮುತ್ತುರಾಜ್ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ತಮಿಳುನಾಡಿನ ಸಿಐಡಿ (ಅಪರಾಧ ತನಿಖಾ ಇಲಾಖೆ) ಯ ಅಪರಾಧ ಶಾಖೆ ಬಂಧಿಸಿದೆ.

ವಿಷಯ ತಿಳಿಯುತ್ತಲೇ ಸಾಥಾನ್ಕುಳಂ ನಿವಾಸಿಗಳು ಪಟಾಕಿ ಸಿಡಿಸಿ ಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನಿಗಧಿಗಿಂತ ಹದಿನೈದು ನಿಮಿಷ ಹೆಚ್ಚು ಕಾಲ ಅಂಗಡಿ ತೆಗೆದಿದ್ದ ಕ್ಷುಲಕ ಕಾರಣಕ್ಕಾಗಿ ಪೊಲೀಸರು ಅವರ ಮೇಲೆ ಕ್ರೂರ ದೌರ್ಜನ್ಯ ಎಸಗಿದ್ದರು ಎಂದು ದಾಖಲೆಗಳು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯನ್ನು ದೇಶಾದ್ಯಂತದ ಜನರು ಖಂಡಿಸಿದ್ದು, ಪೊಲೀಸ್‌ ನಡವಳಿಕೆಗಳಲ್ಲಿ ತೀವ್ರ ಬದಲಾವಣೆಗೆ ಆಗ್ರಹಿಸಿದ್ದರು. ಈ ಪ್ರಕರಣವನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ಸಿಬಿಐಗೆ ಹಸ್ತಾಂತರಿಸಿದ್ದಾರೆ.

ಪೊಲೀಸರು ಈ ಹಿಂದೆ ಅನುಮಾನಾಸ್ಪದ ಸಾವಿನ ಪ್ರಕರಣಗಳನ್ನು ಮಾತ್ರ ದಾಖಲಿಸಿದ್ದರು. ಮದ್ರಾಸ್ ನ್ಯಾಯಾಲಯವು ಕೊಲೆ ಪ್ರಕರಣ ದಾಖಲಿಸುವಂತೆ ಆದೇಶಿಸಿ, ಸಿಬಿಐ-ಸಿಐಡಿಗೆ ಈ ಪ್ರಕರಣ ವರ್ಗಾಹಿಸುವಂತೆ ತಾಕೀತು ಮಾಡಿತ್ತು.

ಜೂನ್ 19 ರಂದು ಸಾಥಾನ್ಕುಳಂ ಪೊಲೀಸ್ ಠಾಣೆಯಲ್ಲಿ ಇಬ್ಬರನ್ನು ಬಂಧಿಸಿ ಹಿಂಸಿಸಲಾಯಿತು ಎಂದು ಹೇಳಲಾದ ಘಟನೆಗಳ ಬಗ್ಗೆ ಮುಖ್ಯ ಮಾಹಿತಿ ಒದಗಿಸಬಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇದರಿಂದ ನ್ಯಾಯಾಲಯವು ಮ್ಯಾಜಿಸ್ಟ್ರೇಟ್ ಅವರ ವಿಚಾರಣೆಗೆ ಅಡ್ಡಿಯುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮೂವರು ಪೊಲೀಸರ ವಿರುದ್ಧ ತಿರಸ್ಕಾರ ಕ್ರಮ ಕೈಗೊಂಡಿತ್ತು.


ಮತ್ತಷ್ಟು ಸುದ್ದಿಗಳು

ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...