Homeಮುಖಪುಟ"ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ": ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

- Advertisement -
- Advertisement -

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಡಾಯಗಾರರನ್ನು “ದುರಾಸೆಯ ಸ್ವಾರ್ಥಿ ದೇಶದ್ರೋಹಿಗಳು” ಎಂದು ಕರೆದಿರುವ ಅವರು, “ಧೈರ್ಯವಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿ ಗೆದ್ದು ತೋರಿಸಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ.

ಲೋಕಸಭೆ ಚುನಾವಣೆಯ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಸಂಸದೀಯ ಪಕ್ಷ ಇಬ್ಬಾಗವಾಗುವ ಮುನ್ಸೂಚನೆ ಸಿಗುತ್ತಿದ್ದಂತೆ ಕೃಷ್ಣನಗರ ಸಂಸದೆ ಮಹುವಾ ಮೊಯಿತ್ರಾ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. 

“2024ರಲ್ಲಿ ಈ ಸಂಸದರು ಗೆದ್ದಿರುವುದು ಟಿಎಂಸಿ ಟಿಕೆಟ್ ಮೇಲೆ. ಇಲ್ಲಿನ ಜನಾದೇಶ ಎನ್‌ಡಿಎ ಪರವಾಗಿ ಇರಲಿಲ್ಲ. ಹಳದಿ ಬಣ್ಣದ ಪ್ಯಾಂಟ್ ಧರಿಸಿರುವ ಎಲ್ಲಾ ದುರಾಸೆಯ ಸ್ವಾರ್ಥಿ ದೇಶದ್ರೋಹಿಗಳು ದಯವಿಟ್ಟು ಈಗಲೇ ಬಿಜೆಪಿಗೆ ಸೇರಬಹುದು. ಮೊದಲು ನಿಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಮತ್ತು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ. ನೀವು ಎಂತಹ ದೊಡ್ಡ ನಾಯಕರು ಎಂಬುದನ್ನು ನಾವೂ ನೋಡುತ್ತೇವೆ” ಎಂದು ಮಹುವಾ ಮೊಯಿತ್ರಾ ಗುಡುಗಿದ್ದಾರೆ.

ಪಕ್ಷಾಂತರ ನಿಷೇಧ ಕಾನೂನು ಮತ್ತು ‘ಮ್ಯಾಜಿಕ್ ನಂಬರ್’ ಸವಾಲು

ಸುಮಾರು 20 ಟಿಎಂಸಿ ಲೋಕಸಭಾ ಸದಸ್ಯರು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಲು ಸಜ್ಜಾಗಿದ್ದು, ಈ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ಟಿಎಂಸಿ ಬಂಡಾಯ ಸಂಸದ ಕಾಕೋಲಿ ಘೋಷ್ ದಸ್ತಿದಾರ್ ಹೇಳಿಕೆ ನೀಡಿದ್ದರು. ಅಲ್ಲದೆ, ಸುದ್ದಿ ಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡುವಾಗ ಹೆಬ್ಬೆರಳು ಎತ್ತುವ (Thumbs Up) ಎಮೋಜಿ ಮೂಲಕ ಈ ಬೆಳವಣಿಗೆಯನ್ನು ದೃಢಪಡಿಸಿದ್ದರು.

ಆದರೆ, ಈ ಆರೋಪಗಳನ್ನು ತಳ್ಳಿಹಾಕಿರುವ ಮಹುವಾ ಮೊಯಿತ್ರಾ, ಬಂಡುಕೋರರ ಬಳಿ ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ಅಗತ್ಯವಿರುವ ಸಂಖ್ಯಾಬಲವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

“ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಅನರ್ಹತೆಯಿಂದ ತಪ್ಪಿಸಿಕೊಳ್ಳಲು, ಬಂಡಾಯ ಬಣಕ್ಕೆ ಒಟ್ಟು ಸಂಸದರ ಪೈಕಿ ಕನಿಷ್ಠ ಮೂರನೇ ಎರಡರಷ್ಟು (2/3) ಸದಸ್ಯರ ಬೆಂಬಲ ಬೇಕಾಗುತ್ತದೆ. ಸದ್ಯ ಲೋಕಸಭೆಯಲ್ಲಿ ಟಿಎಂಸಿ 28 ಸಂಸದರನ್ನು ಹೊಂದಿದ್ದು, ಕಾನೂನಾತ್ಮಕವಾಗಿ ಒಡೆಯಲು ಭಿನ್ನಮತೀಯರಿಗೆ 19 ಸದಸ್ಯರ ಬೆಂಬಲ ಅತ್ಯಗತ್ಯ. ಆದರೆ ಅವರ ಬಳಿ 19 ಸಂಸದರಿಲ್ಲ!” ಎಂದು ಮೊಯಿತ್ರಾ ಸವಾಲು ಹಾಕಿದ್ದಾರೆ.

ಯೂಸುಫ್ ಪಠಾಣ್ ವಿರುದ್ಧವೂ ಆಕ್ರೋಶ

ಇದೇ ವೇಳೆ ಟಿಎಂಸಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರ ನಿಲುವನ್ನೂ ಮಹುವಾ ಪ್ರಶ್ನಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಪಠಾಣ್ ದೆಹಲಿಗೆ ಧಾವಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿರುವ ಅವರು, “ಸ್ವಲ್ಪ ಧೈರ್ಯವಿರಲಿ. ನೀವು ಭಾರತ ದೇಶಕ್ಕಾಗಿ ಆಡಿದವರು. ನಮ್ಮ ಜಿಲ್ಲೆಯ ಜನ ನಿಮಗೆ ಭಾರಿ ಬಹುಮತದಿಂದ ಮತ ಹಾಕಿದ್ದಾರೆ. ಸ್ವಲ್ಪ ನಾಚಿಕೆ ಮತ್ತು ಬೆನ್ನೆಲುಬು ಇರಲಿ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಭಿನ್ನಮತದ ನಡುವೆಯೇ, ಇತ್ತೀಚೆಗೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸುಖೇಂದು ಶೇಖರ್ ರೇ ಸೇರಿದಂತೆ ಟಿಎಂಸಿಯ ಭಿನ್ನಮತೀಯ ನಾಯಕರ ಗುಂಪು, ಕೇಂದ್ರ ಸಚಿವ ಹಾಗೂ ಬಿಜೆಪಿಯ ಬಂಗಾಳ ಚುನಾವಣಾ ಉಸ್ತುವಾರಿ ಭೂಪೇಂದ್ರ ಯಾದವ್ ಅವರ ನಿವಾಸದಲ್ಲಿ ಸಭೆ ನಡೆಸಿದೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ದೆಹಲಿಯಲ್ಲಿ ಇಂಡಿಯಾ (INDIA) ಒಕ್ಕೂಟದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾಗವಹಿಸಿದ್ದ ದಿನವೇ ಈ ಬೆಳವಣಿಗೆ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸದ್ಯ ಎದುರಿಸುತ್ತಿರುವ ಆಂತರಿಕ ಬಿಕ್ಕಟ್ಟಿಗೆ ಕೇವಲ ತತ್ಕಾಲದ ರಾಜಕೀಯ ಲಾಭ ಕಾರಣವಲ್ಲ; ಇದರ ಹಿಂದೆ ಇತ್ತೀಚಿನ ಚುನಾವಣಾ ಫಲಿತಾಂಶಗಳು ಮತ್ತು ಪಕ್ಷದ ಆಂತರಿಕ ನಾಯಕತ್ವದ ಸಂಘರ್ಷ ಅಡಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡದ ಕೆಲವು ಕ್ಷೇತ್ರಗಳಲ್ಲಿ ಪಕ್ಷದೊಳಗೆ ಅಸಮಾಧಾನ ಹೊಗೆಯಾಡುತ್ತಿತ್ತು. ಚುನಾವಣೋತ್ತರ ಹಿಂಸಾಚಾರದ ಆರೋಪಗಳು, ಕೇಂದ್ರ ಸಂಸ್ಥೆಗಳಾದ ಇಡಿ (ED) ಮತ್ತು ಸಿಬಿಐ (CBI) ನಡೆಸುತ್ತಿರುವ ತನಿಖೆಗಳು ಟಿಎಂಸಿಯ ಹಲವು ಹಿರಿಯ ನಾಯಕರನ್ನು ಆತಂಕಕ್ಕೆ ತಳ್ಳಿವೆ. ಬಿಜೆಪಿಯು ಈ ನಾಯಕರ ಅಸಮಾಧಾನವನ್ನು ಬಳಸಿಕೊಂಡು ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಆಘಾತ ನೀಡಲು ಸತತವಾಗಿ ಯತ್ನಿಸುತ್ತಿದೆ. ಇದರ ಭಾಗವಾಗಿಯೇ ಈಗ ಸಂಸದರನ್ನು ಸೆಳೆಯುವ ತಂತ್ರಗಾರಿಕೆ ನಡೆದಿದೆ.

ಟಿಎಂಸಿ ಪಕ್ಷದೊಳಗೆ ದೀರ್ಘಕಾಲದಿಂದ “ಹಳಬರು ವರ್ಸಸ್ ಹೊಸಬರು” ಎಂಬ ಶೀತಲ ಸಮರ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ಅವರ ಸೋದರ ಅಳಿಯ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ಮತ್ತು ಪಕ್ಷದ ಮೇಲಿನ ಹಿಡಿತ, ಸುಖೇಂದು ಶೇಖರ್ ರೇ ಮತ್ತು ಕಾಕೋಲಿ ಘೋಷ್ ದಸ್ತಿದಾರ್ ಅವರಂತಹ ಹಿರಿಯ ನಾಯಕರಿಗೆ ಅಸಮಾಧಾನ ತಂದಿದೆ. ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂಬ ಭಾವನೆ ಹಿರಿಯರಲ್ಲಿ ಮೂಡಿರುವುದು ಈ ಬಂಡಾಯಕ್ಕೆ ಮುಖ್ಯ ಮುನ್ನಲೆಯಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸದ್ಯಕ್ಕೆ ಯಾವುದೇ ಕಾರಣಕ್ಕೂ ಬಿಜೆಪಿಯ ದಬ್ಬಾಳಿಕೆಗೆ ಮಣಿಯುವುದಿಲ್ಲ ಎಂಬ ಕಠಿಣ ನಿಲುವು ತಳೆದಿದ್ದಾರೆ. ದೆಹಲಿಯಲ್ಲಿ ‘ಇಂಡಿಯಾ’ ಒಕ್ಕೂಟದ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ, ತಾವು ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದೇವೆ ಎಂಬ ಸಂದೇಶ ನೀಡುತ್ತಿದ್ದಾರೆ. 

ಪಕ್ಷದೊಳಗಿನ ಭಿನ್ನಮತವನ್ನು ಶಮನಗೊಳಿಸಲು ಅವರು ಒಂದು ಕಡೆ ಸಂಧಾನದ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಪಕ್ಷಾಂತರ ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ (ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ) ಜರುಗಿಸಲು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಬಂಡಾಯಗಾರರು ‘ಮ್ಯಾಜಿಕ್ ನಂಬರ್ 19’ ತಲುಪದಂತೆ ತಡೆಯುವುದೇ ಮಮತಾ ಬ್ಯಾನರ್ಜಿ ಅವರ ಸದ್ಯದ ಮೊದಲ ತಂತ್ರವಾಗಿದೆ ಎಂಬ ಚರ್ಚೆ ಬಂಗಾಳದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...