Homeಕರ್ನಾಟಕಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಕೊರೊನಾದಿಂದ ದೇವರೆ ಕಾಪಾಡಬೇಕು ಎಂಬ ಆರೋಗ್ಯ ಸಚಿವರ ಹೇಳಿಕೆಯನ್ಗು ಕಾಂಗ್ರೆಸ್, ಆಮ್ಆದ್ಮಿ ಸೇರಿದಂತೆ ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿದೆ.

- Advertisement -
- Advertisement -

ಕೊರೊನಾದಿಂದ ನಮ್ಮನ್ನು ದೇವರೆ ಕಾಪಾಡಬೇಕು ಎಂದಿರುವ ರಾಜ್ಯ ಆರೋಗ್ಯ ಸಚಿವರಾದ ಶ್ರೀರಾಮುಲು ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಕೊರೊನಾದಿಂದ ಜನರನ್ನು ಕಾಪಾಡಲು ಸಾಧ್ಯವಾಗದಿದ್ದರೆ ರಾಜಿನಾಮೆ ನೀಡಿ ಎಂದು ತಿರುಗೇಟು ನೀಡಿದ್ದಾರೆ.

’ವಿಶ್ವದಲ್ಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ, ನಮ್ಮಲ್ಲೂ ಕೂಡ ಮುಂದಿನ ಎರಡು ತಿಂಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ, ಅಗಸ್ಟ್ ಮತ್ತು ಸೆಪ್ಟಂಬರ್ ನಲ್ಲಿ ಪೀಕ್ ಮುಟ್ಟುವ ಸಾಧ್ಯತೆ ಇದೆ, ಇದರಿಂದ ದೇವರೇ ನಮ್ಮನ್ನು ಕಾಪಾಡಬೇಕು’ ಎಂದು ಶ್ರೀರಾಮುಲು ನಿನ್ನೆ ಹೇಳಿದ್ದರು.

ರಾಮುಲು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್‌, “ಶ್ರೀರಾಮುಲು ಅವರ ಹೇಳಿಕೆಯಿಂದ ಇಡೀ ರಾಜ್ಯ ತಲ್ಲಣಗೊಂಡಿದೆ. ಅಧಿಕಾರಕ್ಕಾಗಿ ಬಹಳ ಶ್ರಮ ವಹಿಸಿ ಸರ್ಕಾರ ರಚನೆ ಮಾಡಿದ್ದಾರೆ. ಈಗ ಕೋವಿಡ್ ವಿಚಾರದಲ್ಲಿ ನಾವು ಏನು ಮಾಡಲಿಕ್ಕೆ ಆಗುವುದಿಲ್ಲ ದೇವರೇ ಕಾಪಾಡಬೇಕು ಅಂತಾ ಮುಖ್ಯಮಂತ್ರಿಗಳ ತಂಡ ಹೇಳುತ್ತಿದೆ. ಇದು ಕೇವಲ ಶ್ರೀರಾಮುಲು ಅವರ ಹೇಳಿಕೆಯಲ್ಲ. ಅವರು ಸರ್ಕಾರದ ಧ್ವನಿಯಾಗಿ ಈ ಮಾತನ್ನು ಹೇಳಿದ್ದಾರೆ. ಈ ಹೇಳಿಕೆ ನೀಡಿದ ಮರುಕ್ಷಣದಿಂದಲೇ ಬಿಜೆಪಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಕೊರೋನಾ ವಿಚಾರದಲ್ಲಿ ಜನರನ್ನು ದೇವರು ಕಾಪಾಡಬೇಕಾದರೆ, ನೀವು ಯಾಕೆ ಅಧಿಕಾರದಲ್ಲಿ ಇರಬೇಕು. ಜನರನ್ನು ನಿಮ್ಮಿಂದ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀರಾಮುಲು ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಲಿ: ಆಮ್‌ಆದ್ಮಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ

”ಆರೋಗ್ಯ ಸಚಿವರಾಗಿ ಧೈರ್ಯವನ್ನು ನೀಡುವ ಬದಲಾಗಿ ಈ ರೀತಿಯ ಬೇಜವಾಬ್ದಾರಿ ಹೇಳಿಕೆಯಿಂದ ರಾಜ್ಯದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಇಂತಹ ಆರೋಗ್ಯ ಸಂದಿಗ್ಧತೆಯನ್ನು ನಿಭಾಯಿಸುವಲ್ಲಿ ಸ್ವತಃ ಆರೋಗ್ಯ ಸಚಿವರೇ ಸಂಪೂರ್ಣ ಸೋತು ಕೈಚೆಲ್ಲಿರುವ ಲಕ್ಷಣಗಳು ಗೋಚರಿಸುತ್ತಿವೆ” ಎಂದು ಆಮ್‌ಆದ್ಮಿ ರಾಜ್ಯ ಸಂಚಾಲಕ ಪೃತ್ವಿ ರೆಡ್ಡಿ ಹೇಳಿದ್ದಾರೆ.

ಅಲ್ಲದೆ ಆ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದ ಜನತೆಯ ಸಂಪೂರ್ಣ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಆರೋಗ್ಯ ಸಚಿವ ಶ್ರೀರಾಮುಲು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.


ಓದಿ: ಕಾಂಗ್ರೆಸ್‍ಗೆ ಇತಿಹಾಸವಿದೆ, ಬಿಜೆಪಿಗಿಲ್ಲ; ಹಾಗಾಗಿ ಅವರು ಸುಳ್ಳನ್ನ ಆಶ್ರಯಿಸಿದ್ದಾರೆ; ಡಿಕೆ ಶಿವಕುಮಾರ್‌‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...