Homeಮುಖಪುಟಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

ಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

- Advertisement -
- Advertisement -

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಇತ್ತಿಚೆಗೆ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಇತ್ತ ಪಕ್ಷದ ಸದಸ್ಯರು ಸಾಲು ಸಾಲು ರಾಜೀನಾಮೆ ಸಲ್ಲಿಸುತ್ತಿದ್ದು, ಸದಸ್ಯರು ತಮ್ಮ ಆಲೋಚನೆಗಳನ್ನು ತನಗೆ ಕಳುಹಿಸುವಂತೆ ಕಮಲ್ ಹಾಸನ್  ಕೇಳಿಕೊಂಡಿದ್ದಾರೆ.

ಕೊಯಮತ್ತೂರು (ದಕ್ಷಿಣ) ಕ್ಷೇತ್ರದಿಂದ ಸ್ಫರ್ಧಿಸಿದ್ದ ಎಂಎನ್‌ಎಂ ಸಂಸ್ಥಾಪಕ ಕಮಲ್ ಹಾಸನ್ ಅಲ್ಲಿ ಸೋಲನುಭವಿಸಿದ್ದರು. ಸಂಘಟನೆಯಲ್ಲಿ “ಪ್ರಜಾಪ್ರಭುತ್ವ” ಕೊರತೆಯಿದೆ ಎಂದು ಆರೋಪಿಸಿ ಪಕ್ಷದ ಉಪಾಧ್ಯಕ್ಷ ಆರ್.ಮಹೇಂದ್ರನ್ ಹುದ್ದೆ ತ್ಯಜಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಮಹೇಂದ್ರನ್ ಅವರನ್ನು ಅನುಸರಿಸಿ, ಇತರ ಆರು ಮಂದಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ. ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ತಮ್ಮ ಆಲೋಚನೆಗಳನ್ನು ನನಗೆ ಮೇಲ್ ಮಾಡಿ ತಿಳಿಸುವಂತೆ ಪಕ್ಷದ ಸದಸ್ಯರಲ್ಲಿ ಕಮಲ್ ಹಾಸನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಸದಸ್ಯರ ರಾಜೀನಾಮೆ ಹಿನ್ನೆಲೆ ಪಕ್ಷದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗೀನ ಪರಿಸ್ಥಿತಿ ಮತ್ತು ಉದ್ದೇಶಿತ ಪಿತೂರಿಗಳಿಗೆ ಅನುಗುಣವಾಗಿ ನಮ್ಮ ಗುರಿಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಒತ್ತಿ ಹೇಳಿದ್ದಾರೆ.

ಕೊಯಮತ್ತೂರಿನ ಸಿಂಗನಲ್ಲೂರ್ ಕ್ಷೇತ್ರದಿಂದ ಸ್ಪರ್ಧಿಸಿದ ಮಹೇಂದ್ರನ್, ಪಕ್ಷದಲ್ಲಿರುವ ಕೆಲವು ಸಲಹೆಗಾರರನ್ನು ದೂಷಿಸಿದ್ದಾರೆ. ಜೊತೆಗೆ ಕಮಲ್ ಹಸನ್ ಅವರು ಪಕ್ಷವನ್ನು ನಡೆಸುವ ವಿಧಾನವು ಸರಿಯಿಲ್ಲ ಎಂದು ಆರೋಪಿಸಿದ್ದಾರೆ.

“ತಮಿಳುನಾಡಿಗೆ ಬದಲಾವಣೆ ತರುವ ಉದ್ದೇಶದಿಂದ ನಮ್ಮ ಪಕ್ಷವು ಏಪ್ರಿಲ್ 6 ರಂದು ನಡೆದ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದೆ.  ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

“ಕ್ಷೇತ್ರದಲ್ಲಿ ಶತ್ರುಗಳ ಜೊತೆಗೆ ಪಕ್ಷದಲ್ಲಿ ದ್ರೋಹಿಗಳು ಇದ್ದಾರೆ ಎಂದು ನಮಗೆ ತಿಳಿದಿದೆ. ಪಕ್ಷದಿಂದ ದ್ರೋಹಿಗಳನ್ನು ತೆಗೆಯಲು ಸರ್ವಾನುಮತದ ಕೋರಸ್ ಇತ್ತು. ಈ ಪಟ್ಟಿಯ ಮೊದಲ ಸಾಲಿನಲ್ಲಿ ಡಾ. ಆರ್.ಮಹೇಂದ್ರನ್ ಇದ್ದರು. ಮಹೇಂದ್ರನ್ ಅವರು ತಮ್ಮ ಅಪ್ರಾಮಾಣಿಕತೆ ಮತ್ತು ಅದಕ್ಷತೆಯನ್ನು ಮರೆಮಾಚಲು ಇತರರನ್ನು ದೂಷಿಸಲು ಮತ್ತು ಸಹಾನುಭೂತಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ನಟ ಕಮಲ್ ಹಾಸನ್‌ ಅವರ ಎಂಎನ್‌ಎಂ ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಲ್ಲಿ 154 ರಲ್ಲಿ ಸ್ಪರ್ಧಿಸಿತ್ತು. ಉಳಿದ 80 ಸ್ಥಾನಗಳಲ್ಲಿ ಎಂಎನ್‌ಎಂನ ಎರಡು ಮೈತ್ರಿ ಪಾಲುದಾರಾದ, ಆರ್.ಶರತ್‌ಕುಮಾರ್ ನೇತೃತ್ವದ ಎಐಎಸ್ಎಂಕೆ ಮತ್ತು ಟಿ.ಆರ್.ಪರಿವೇಂದ್ರ ಅವರ ಐಜೆಕೆ ತಲಾ 40 ಸ್ಥಾನಗಳಿಗೆ ಸ್ಪರ್ಧಿಸಿದ್ದವು.

ಸದ್ಯ ತಮಿಳುನಾಡಿನಲ್ಲಿ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ರಾಜ್ಯದಲ್ಲಿ ಬಹುಮತ ಪಡೆದು ಒಂದು ದಶಕದ ನಂತರ ಅಧಿಕಾರಕ್ಕೆ ಮರಳಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...