Homeಮುಖಪುಟಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

ಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

- Advertisement -
- Advertisement -

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಇತ್ತಿಚೆಗೆ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಇತ್ತ ಪಕ್ಷದ ಸದಸ್ಯರು ಸಾಲು ಸಾಲು ರಾಜೀನಾಮೆ ಸಲ್ಲಿಸುತ್ತಿದ್ದು, ಸದಸ್ಯರು ತಮ್ಮ ಆಲೋಚನೆಗಳನ್ನು ತನಗೆ ಕಳುಹಿಸುವಂತೆ ಕಮಲ್ ಹಾಸನ್  ಕೇಳಿಕೊಂಡಿದ್ದಾರೆ.

ಕೊಯಮತ್ತೂರು (ದಕ್ಷಿಣ) ಕ್ಷೇತ್ರದಿಂದ ಸ್ಫರ್ಧಿಸಿದ್ದ ಎಂಎನ್‌ಎಂ ಸಂಸ್ಥಾಪಕ ಕಮಲ್ ಹಾಸನ್ ಅಲ್ಲಿ ಸೋಲನುಭವಿಸಿದ್ದರು. ಸಂಘಟನೆಯಲ್ಲಿ “ಪ್ರಜಾಪ್ರಭುತ್ವ” ಕೊರತೆಯಿದೆ ಎಂದು ಆರೋಪಿಸಿ ಪಕ್ಷದ ಉಪಾಧ್ಯಕ್ಷ ಆರ್.ಮಹೇಂದ್ರನ್ ಹುದ್ದೆ ತ್ಯಜಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಮಹೇಂದ್ರನ್ ಅವರನ್ನು ಅನುಸರಿಸಿ, ಇತರ ಆರು ಮಂದಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ. ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ತಮ್ಮ ಆಲೋಚನೆಗಳನ್ನು ನನಗೆ ಮೇಲ್ ಮಾಡಿ ತಿಳಿಸುವಂತೆ ಪಕ್ಷದ ಸದಸ್ಯರಲ್ಲಿ ಕಮಲ್ ಹಾಸನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಸದಸ್ಯರ ರಾಜೀನಾಮೆ ಹಿನ್ನೆಲೆ ಪಕ್ಷದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗೀನ ಪರಿಸ್ಥಿತಿ ಮತ್ತು ಉದ್ದೇಶಿತ ಪಿತೂರಿಗಳಿಗೆ ಅನುಗುಣವಾಗಿ ನಮ್ಮ ಗುರಿಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಒತ್ತಿ ಹೇಳಿದ್ದಾರೆ.

ಕೊಯಮತ್ತೂರಿನ ಸಿಂಗನಲ್ಲೂರ್ ಕ್ಷೇತ್ರದಿಂದ ಸ್ಪರ್ಧಿಸಿದ ಮಹೇಂದ್ರನ್, ಪಕ್ಷದಲ್ಲಿರುವ ಕೆಲವು ಸಲಹೆಗಾರರನ್ನು ದೂಷಿಸಿದ್ದಾರೆ. ಜೊತೆಗೆ ಕಮಲ್ ಹಸನ್ ಅವರು ಪಕ್ಷವನ್ನು ನಡೆಸುವ ವಿಧಾನವು ಸರಿಯಿಲ್ಲ ಎಂದು ಆರೋಪಿಸಿದ್ದಾರೆ.

“ತಮಿಳುನಾಡಿಗೆ ಬದಲಾವಣೆ ತರುವ ಉದ್ದೇಶದಿಂದ ನಮ್ಮ ಪಕ್ಷವು ಏಪ್ರಿಲ್ 6 ರಂದು ನಡೆದ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದೆ.  ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

“ಕ್ಷೇತ್ರದಲ್ಲಿ ಶತ್ರುಗಳ ಜೊತೆಗೆ ಪಕ್ಷದಲ್ಲಿ ದ್ರೋಹಿಗಳು ಇದ್ದಾರೆ ಎಂದು ನಮಗೆ ತಿಳಿದಿದೆ. ಪಕ್ಷದಿಂದ ದ್ರೋಹಿಗಳನ್ನು ತೆಗೆಯಲು ಸರ್ವಾನುಮತದ ಕೋರಸ್ ಇತ್ತು. ಈ ಪಟ್ಟಿಯ ಮೊದಲ ಸಾಲಿನಲ್ಲಿ ಡಾ. ಆರ್.ಮಹೇಂದ್ರನ್ ಇದ್ದರು. ಮಹೇಂದ್ರನ್ ಅವರು ತಮ್ಮ ಅಪ್ರಾಮಾಣಿಕತೆ ಮತ್ತು ಅದಕ್ಷತೆಯನ್ನು ಮರೆಮಾಚಲು ಇತರರನ್ನು ದೂಷಿಸಲು ಮತ್ತು ಸಹಾನುಭೂತಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ನಟ ಕಮಲ್ ಹಾಸನ್‌ ಅವರ ಎಂಎನ್‌ಎಂ ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಲ್ಲಿ 154 ರಲ್ಲಿ ಸ್ಪರ್ಧಿಸಿತ್ತು. ಉಳಿದ 80 ಸ್ಥಾನಗಳಲ್ಲಿ ಎಂಎನ್‌ಎಂನ ಎರಡು ಮೈತ್ರಿ ಪಾಲುದಾರಾದ, ಆರ್.ಶರತ್‌ಕುಮಾರ್ ನೇತೃತ್ವದ ಎಐಎಸ್ಎಂಕೆ ಮತ್ತು ಟಿ.ಆರ್.ಪರಿವೇಂದ್ರ ಅವರ ಐಜೆಕೆ ತಲಾ 40 ಸ್ಥಾನಗಳಿಗೆ ಸ್ಪರ್ಧಿಸಿದ್ದವು.

ಸದ್ಯ ತಮಿಳುನಾಡಿನಲ್ಲಿ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ರಾಜ್ಯದಲ್ಲಿ ಬಹುಮತ ಪಡೆದು ಒಂದು ದಶಕದ ನಂತರ ಅಧಿಕಾರಕ್ಕೆ ಮರಳಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...