Homeಮುಖಪುಟಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

ಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

- Advertisement -
- Advertisement -

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಇತ್ತಿಚೆಗೆ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಇತ್ತ ಪಕ್ಷದ ಸದಸ್ಯರು ಸಾಲು ಸಾಲು ರಾಜೀನಾಮೆ ಸಲ್ಲಿಸುತ್ತಿದ್ದು, ಸದಸ್ಯರು ತಮ್ಮ ಆಲೋಚನೆಗಳನ್ನು ತನಗೆ ಕಳುಹಿಸುವಂತೆ ಕಮಲ್ ಹಾಸನ್  ಕೇಳಿಕೊಂಡಿದ್ದಾರೆ.

ಕೊಯಮತ್ತೂರು (ದಕ್ಷಿಣ) ಕ್ಷೇತ್ರದಿಂದ ಸ್ಫರ್ಧಿಸಿದ್ದ ಎಂಎನ್‌ಎಂ ಸಂಸ್ಥಾಪಕ ಕಮಲ್ ಹಾಸನ್ ಅಲ್ಲಿ ಸೋಲನುಭವಿಸಿದ್ದರು. ಸಂಘಟನೆಯಲ್ಲಿ “ಪ್ರಜಾಪ್ರಭುತ್ವ” ಕೊರತೆಯಿದೆ ಎಂದು ಆರೋಪಿಸಿ ಪಕ್ಷದ ಉಪಾಧ್ಯಕ್ಷ ಆರ್.ಮಹೇಂದ್ರನ್ ಹುದ್ದೆ ತ್ಯಜಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಮಹೇಂದ್ರನ್ ಅವರನ್ನು ಅನುಸರಿಸಿ, ಇತರ ಆರು ಮಂದಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ. ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ತಮ್ಮ ಆಲೋಚನೆಗಳನ್ನು ನನಗೆ ಮೇಲ್ ಮಾಡಿ ತಿಳಿಸುವಂತೆ ಪಕ್ಷದ ಸದಸ್ಯರಲ್ಲಿ ಕಮಲ್ ಹಾಸನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಸದಸ್ಯರ ರಾಜೀನಾಮೆ ಹಿನ್ನೆಲೆ ಪಕ್ಷದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗೀನ ಪರಿಸ್ಥಿತಿ ಮತ್ತು ಉದ್ದೇಶಿತ ಪಿತೂರಿಗಳಿಗೆ ಅನುಗುಣವಾಗಿ ನಮ್ಮ ಗುರಿಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಒತ್ತಿ ಹೇಳಿದ್ದಾರೆ.

ಕೊಯಮತ್ತೂರಿನ ಸಿಂಗನಲ್ಲೂರ್ ಕ್ಷೇತ್ರದಿಂದ ಸ್ಪರ್ಧಿಸಿದ ಮಹೇಂದ್ರನ್, ಪಕ್ಷದಲ್ಲಿರುವ ಕೆಲವು ಸಲಹೆಗಾರರನ್ನು ದೂಷಿಸಿದ್ದಾರೆ. ಜೊತೆಗೆ ಕಮಲ್ ಹಸನ್ ಅವರು ಪಕ್ಷವನ್ನು ನಡೆಸುವ ವಿಧಾನವು ಸರಿಯಿಲ್ಲ ಎಂದು ಆರೋಪಿಸಿದ್ದಾರೆ.

“ತಮಿಳುನಾಡಿಗೆ ಬದಲಾವಣೆ ತರುವ ಉದ್ದೇಶದಿಂದ ನಮ್ಮ ಪಕ್ಷವು ಏಪ್ರಿಲ್ 6 ರಂದು ನಡೆದ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದೆ.  ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

“ಕ್ಷೇತ್ರದಲ್ಲಿ ಶತ್ರುಗಳ ಜೊತೆಗೆ ಪಕ್ಷದಲ್ಲಿ ದ್ರೋಹಿಗಳು ಇದ್ದಾರೆ ಎಂದು ನಮಗೆ ತಿಳಿದಿದೆ. ಪಕ್ಷದಿಂದ ದ್ರೋಹಿಗಳನ್ನು ತೆಗೆಯಲು ಸರ್ವಾನುಮತದ ಕೋರಸ್ ಇತ್ತು. ಈ ಪಟ್ಟಿಯ ಮೊದಲ ಸಾಲಿನಲ್ಲಿ ಡಾ. ಆರ್.ಮಹೇಂದ್ರನ್ ಇದ್ದರು. ಮಹೇಂದ್ರನ್ ಅವರು ತಮ್ಮ ಅಪ್ರಾಮಾಣಿಕತೆ ಮತ್ತು ಅದಕ್ಷತೆಯನ್ನು ಮರೆಮಾಚಲು ಇತರರನ್ನು ದೂಷಿಸಲು ಮತ್ತು ಸಹಾನುಭೂತಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ನಟ ಕಮಲ್ ಹಾಸನ್‌ ಅವರ ಎಂಎನ್‌ಎಂ ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಲ್ಲಿ 154 ರಲ್ಲಿ ಸ್ಪರ್ಧಿಸಿತ್ತು. ಉಳಿದ 80 ಸ್ಥಾನಗಳಲ್ಲಿ ಎಂಎನ್‌ಎಂನ ಎರಡು ಮೈತ್ರಿ ಪಾಲುದಾರಾದ, ಆರ್.ಶರತ್‌ಕುಮಾರ್ ನೇತೃತ್ವದ ಎಐಎಸ್ಎಂಕೆ ಮತ್ತು ಟಿ.ಆರ್.ಪರಿವೇಂದ್ರ ಅವರ ಐಜೆಕೆ ತಲಾ 40 ಸ್ಥಾನಗಳಿಗೆ ಸ್ಪರ್ಧಿಸಿದ್ದವು.

ಸದ್ಯ ತಮಿಳುನಾಡಿನಲ್ಲಿ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ರಾಜ್ಯದಲ್ಲಿ ಬಹುಮತ ಪಡೆದು ಒಂದು ದಶಕದ ನಂತರ ಅಧಿಕಾರಕ್ಕೆ ಮರಳಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...