Homeಮುಖಪುಟಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

ಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

- Advertisement -
- Advertisement -

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಇತ್ತಿಚೆಗೆ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಇತ್ತ ಪಕ್ಷದ ಸದಸ್ಯರು ಸಾಲು ಸಾಲು ರಾಜೀನಾಮೆ ಸಲ್ಲಿಸುತ್ತಿದ್ದು, ಸದಸ್ಯರು ತಮ್ಮ ಆಲೋಚನೆಗಳನ್ನು ತನಗೆ ಕಳುಹಿಸುವಂತೆ ಕಮಲ್ ಹಾಸನ್  ಕೇಳಿಕೊಂಡಿದ್ದಾರೆ.

ಕೊಯಮತ್ತೂರು (ದಕ್ಷಿಣ) ಕ್ಷೇತ್ರದಿಂದ ಸ್ಫರ್ಧಿಸಿದ್ದ ಎಂಎನ್‌ಎಂ ಸಂಸ್ಥಾಪಕ ಕಮಲ್ ಹಾಸನ್ ಅಲ್ಲಿ ಸೋಲನುಭವಿಸಿದ್ದರು. ಸಂಘಟನೆಯಲ್ಲಿ “ಪ್ರಜಾಪ್ರಭುತ್ವ” ಕೊರತೆಯಿದೆ ಎಂದು ಆರೋಪಿಸಿ ಪಕ್ಷದ ಉಪಾಧ್ಯಕ್ಷ ಆರ್.ಮಹೇಂದ್ರನ್ ಹುದ್ದೆ ತ್ಯಜಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಮಹೇಂದ್ರನ್ ಅವರನ್ನು ಅನುಸರಿಸಿ, ಇತರ ಆರು ಮಂದಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ. ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ತಮ್ಮ ಆಲೋಚನೆಗಳನ್ನು ನನಗೆ ಮೇಲ್ ಮಾಡಿ ತಿಳಿಸುವಂತೆ ಪಕ್ಷದ ಸದಸ್ಯರಲ್ಲಿ ಕಮಲ್ ಹಾಸನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಸದಸ್ಯರ ರಾಜೀನಾಮೆ ಹಿನ್ನೆಲೆ ಪಕ್ಷದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗೀನ ಪರಿಸ್ಥಿತಿ ಮತ್ತು ಉದ್ದೇಶಿತ ಪಿತೂರಿಗಳಿಗೆ ಅನುಗುಣವಾಗಿ ನಮ್ಮ ಗುರಿಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಒತ್ತಿ ಹೇಳಿದ್ದಾರೆ.

ಕೊಯಮತ್ತೂರಿನ ಸಿಂಗನಲ್ಲೂರ್ ಕ್ಷೇತ್ರದಿಂದ ಸ್ಪರ್ಧಿಸಿದ ಮಹೇಂದ್ರನ್, ಪಕ್ಷದಲ್ಲಿರುವ ಕೆಲವು ಸಲಹೆಗಾರರನ್ನು ದೂಷಿಸಿದ್ದಾರೆ. ಜೊತೆಗೆ ಕಮಲ್ ಹಸನ್ ಅವರು ಪಕ್ಷವನ್ನು ನಡೆಸುವ ವಿಧಾನವು ಸರಿಯಿಲ್ಲ ಎಂದು ಆರೋಪಿಸಿದ್ದಾರೆ.

“ತಮಿಳುನಾಡಿಗೆ ಬದಲಾವಣೆ ತರುವ ಉದ್ದೇಶದಿಂದ ನಮ್ಮ ಪಕ್ಷವು ಏಪ್ರಿಲ್ 6 ರಂದು ನಡೆದ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದೆ.  ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

“ಕ್ಷೇತ್ರದಲ್ಲಿ ಶತ್ರುಗಳ ಜೊತೆಗೆ ಪಕ್ಷದಲ್ಲಿ ದ್ರೋಹಿಗಳು ಇದ್ದಾರೆ ಎಂದು ನಮಗೆ ತಿಳಿದಿದೆ. ಪಕ್ಷದಿಂದ ದ್ರೋಹಿಗಳನ್ನು ತೆಗೆಯಲು ಸರ್ವಾನುಮತದ ಕೋರಸ್ ಇತ್ತು. ಈ ಪಟ್ಟಿಯ ಮೊದಲ ಸಾಲಿನಲ್ಲಿ ಡಾ. ಆರ್.ಮಹೇಂದ್ರನ್ ಇದ್ದರು. ಮಹೇಂದ್ರನ್ ಅವರು ತಮ್ಮ ಅಪ್ರಾಮಾಣಿಕತೆ ಮತ್ತು ಅದಕ್ಷತೆಯನ್ನು ಮರೆಮಾಚಲು ಇತರರನ್ನು ದೂಷಿಸಲು ಮತ್ತು ಸಹಾನುಭೂತಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ನಟ ಕಮಲ್ ಹಾಸನ್‌ ಅವರ ಎಂಎನ್‌ಎಂ ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಲ್ಲಿ 154 ರಲ್ಲಿ ಸ್ಪರ್ಧಿಸಿತ್ತು. ಉಳಿದ 80 ಸ್ಥಾನಗಳಲ್ಲಿ ಎಂಎನ್‌ಎಂನ ಎರಡು ಮೈತ್ರಿ ಪಾಲುದಾರಾದ, ಆರ್.ಶರತ್‌ಕುಮಾರ್ ನೇತೃತ್ವದ ಎಐಎಸ್ಎಂಕೆ ಮತ್ತು ಟಿ.ಆರ್.ಪರಿವೇಂದ್ರ ಅವರ ಐಜೆಕೆ ತಲಾ 40 ಸ್ಥಾನಗಳಿಗೆ ಸ್ಪರ್ಧಿಸಿದ್ದವು.

ಸದ್ಯ ತಮಿಳುನಾಡಿನಲ್ಲಿ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ರಾಜ್ಯದಲ್ಲಿ ಬಹುಮತ ಪಡೆದು ಒಂದು ದಶಕದ ನಂತರ ಅಧಿಕಾರಕ್ಕೆ ಮರಳಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...