Homeಮುಖಪುಟಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

ಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

- Advertisement -
- Advertisement -

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಇತ್ತಿಚೆಗೆ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಇತ್ತ ಪಕ್ಷದ ಸದಸ್ಯರು ಸಾಲು ಸಾಲು ರಾಜೀನಾಮೆ ಸಲ್ಲಿಸುತ್ತಿದ್ದು, ಸದಸ್ಯರು ತಮ್ಮ ಆಲೋಚನೆಗಳನ್ನು ತನಗೆ ಕಳುಹಿಸುವಂತೆ ಕಮಲ್ ಹಾಸನ್  ಕೇಳಿಕೊಂಡಿದ್ದಾರೆ.

ಕೊಯಮತ್ತೂರು (ದಕ್ಷಿಣ) ಕ್ಷೇತ್ರದಿಂದ ಸ್ಫರ್ಧಿಸಿದ್ದ ಎಂಎನ್‌ಎಂ ಸಂಸ್ಥಾಪಕ ಕಮಲ್ ಹಾಸನ್ ಅಲ್ಲಿ ಸೋಲನುಭವಿಸಿದ್ದರು. ಸಂಘಟನೆಯಲ್ಲಿ “ಪ್ರಜಾಪ್ರಭುತ್ವ” ಕೊರತೆಯಿದೆ ಎಂದು ಆರೋಪಿಸಿ ಪಕ್ಷದ ಉಪಾಧ್ಯಕ್ಷ ಆರ್.ಮಹೇಂದ್ರನ್ ಹುದ್ದೆ ತ್ಯಜಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಮಹೇಂದ್ರನ್ ಅವರನ್ನು ಅನುಸರಿಸಿ, ಇತರ ಆರು ಮಂದಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ. ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ತಮ್ಮ ಆಲೋಚನೆಗಳನ್ನು ನನಗೆ ಮೇಲ್ ಮಾಡಿ ತಿಳಿಸುವಂತೆ ಪಕ್ಷದ ಸದಸ್ಯರಲ್ಲಿ ಕಮಲ್ ಹಾಸನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಸದಸ್ಯರ ರಾಜೀನಾಮೆ ಹಿನ್ನೆಲೆ ಪಕ್ಷದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗೀನ ಪರಿಸ್ಥಿತಿ ಮತ್ತು ಉದ್ದೇಶಿತ ಪಿತೂರಿಗಳಿಗೆ ಅನುಗುಣವಾಗಿ ನಮ್ಮ ಗುರಿಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಒತ್ತಿ ಹೇಳಿದ್ದಾರೆ.

ಕೊಯಮತ್ತೂರಿನ ಸಿಂಗನಲ್ಲೂರ್ ಕ್ಷೇತ್ರದಿಂದ ಸ್ಪರ್ಧಿಸಿದ ಮಹೇಂದ್ರನ್, ಪಕ್ಷದಲ್ಲಿರುವ ಕೆಲವು ಸಲಹೆಗಾರರನ್ನು ದೂಷಿಸಿದ್ದಾರೆ. ಜೊತೆಗೆ ಕಮಲ್ ಹಸನ್ ಅವರು ಪಕ್ಷವನ್ನು ನಡೆಸುವ ವಿಧಾನವು ಸರಿಯಿಲ್ಲ ಎಂದು ಆರೋಪಿಸಿದ್ದಾರೆ.

“ತಮಿಳುನಾಡಿಗೆ ಬದಲಾವಣೆ ತರುವ ಉದ್ದೇಶದಿಂದ ನಮ್ಮ ಪಕ್ಷವು ಏಪ್ರಿಲ್ 6 ರಂದು ನಡೆದ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದೆ.  ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

“ಕ್ಷೇತ್ರದಲ್ಲಿ ಶತ್ರುಗಳ ಜೊತೆಗೆ ಪಕ್ಷದಲ್ಲಿ ದ್ರೋಹಿಗಳು ಇದ್ದಾರೆ ಎಂದು ನಮಗೆ ತಿಳಿದಿದೆ. ಪಕ್ಷದಿಂದ ದ್ರೋಹಿಗಳನ್ನು ತೆಗೆಯಲು ಸರ್ವಾನುಮತದ ಕೋರಸ್ ಇತ್ತು. ಈ ಪಟ್ಟಿಯ ಮೊದಲ ಸಾಲಿನಲ್ಲಿ ಡಾ. ಆರ್.ಮಹೇಂದ್ರನ್ ಇದ್ದರು. ಮಹೇಂದ್ರನ್ ಅವರು ತಮ್ಮ ಅಪ್ರಾಮಾಣಿಕತೆ ಮತ್ತು ಅದಕ್ಷತೆಯನ್ನು ಮರೆಮಾಚಲು ಇತರರನ್ನು ದೂಷಿಸಲು ಮತ್ತು ಸಹಾನುಭೂತಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ನಟ ಕಮಲ್ ಹಾಸನ್‌ ಅವರ ಎಂಎನ್‌ಎಂ ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಲ್ಲಿ 154 ರಲ್ಲಿ ಸ್ಪರ್ಧಿಸಿತ್ತು. ಉಳಿದ 80 ಸ್ಥಾನಗಳಲ್ಲಿ ಎಂಎನ್‌ಎಂನ ಎರಡು ಮೈತ್ರಿ ಪಾಲುದಾರಾದ, ಆರ್.ಶರತ್‌ಕುಮಾರ್ ನೇತೃತ್ವದ ಎಐಎಸ್ಎಂಕೆ ಮತ್ತು ಟಿ.ಆರ್.ಪರಿವೇಂದ್ರ ಅವರ ಐಜೆಕೆ ತಲಾ 40 ಸ್ಥಾನಗಳಿಗೆ ಸ್ಪರ್ಧಿಸಿದ್ದವು.

ಸದ್ಯ ತಮಿಳುನಾಡಿನಲ್ಲಿ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ರಾಜ್ಯದಲ್ಲಿ ಬಹುಮತ ಪಡೆದು ಒಂದು ದಶಕದ ನಂತರ ಅಧಿಕಾರಕ್ಕೆ ಮರಳಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...