Homeಮುಖಪುಟಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

ಶಾಸಕರ ರಾಜೀನಾಮೆ: ಬಹುಮತ ಕಳೆದುಕೊಂಡ ಪುದುಚೇರಿ ಕಾಂಗ್ರೆಸ್ ಸರ್ಕಾರ

- Advertisement -
- Advertisement -

ಶಾಸಕ ಎ. ಜಾನ್ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ವಿ.ಪಿ. ಶಿವಕೋಲುಂಟು ಅವರಿಗೆ ಸಲ್ಲಿಸುವುದರೊಂದಿಗೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡಿದೆ. ಈ ಹಿಂದೆಯೆ ಆಡಳಿತ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದರು. ಅಲ್ಲಿ ಚುನಾವಣೆಗೆ ಇನ್ನೇನು ಕೆಲವೆ ತಿಂಗಳುಗಳು ಉಳಿದಿರುವಾಗ ಈ ರಾಜಕೀಯ ಬೆಳವಣಿಗೆ ಭಾರಿ ಅಚ್ಚರಿ ಮೂಡಿಸಿದೆ.

ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.

ಇದನ್ನೂ ಓದಿ: ಕೋಮುವಾದ ಮತ್ತು ಜನದ್ರೋಹಿ ಮೀಡಿಯಾವನ್ನು ಬೆತ್ತಲು ಮಾಡಿದ ರೈತ ಚಳವಳಿ: ಡಿ. ಉಮಾಪತಿ

ಕಾಂಗ್ರೆಸ್‌ ತನ್ನ 10 ಶಾಸಕರು, ಮೂವರು ಡಿಎಂಕೆ ಶಾಸಕರು ಮತ್ತು ಆಡಳಿತಾರೂಢ ಒಕ್ಕೂಟವನ್ನು ಬೆಂಬಲಿಸುವ ಒಬ್ಬ ಪಕ್ಷೇತರ ಶಾಸಕನನ್ನು ಹೊಂದಿದೆ. ಪ್ರತಿಪಕ್ಷದಲ್ಲಿ ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರು, ಎನ್‌ಆರ್ ಕಾಂಗ್ರೆಸ್‌ನ ಏಳು ಶಾಸಕರು ಮತ್ತು ಎಐಎಡಿಎಂಕೆ ನಾಲ್ವರು ಶಾಸಕರಿದ್ದಾರೆ. ಮುಖ್ಯಮಂತ್ರಿ ನಾರಾಯಣಸಾಮಿ ಅವರ ಸರ್ಕಾರಕ್ಕೆ ಬಹುಮತವಿಲ್ಲ ಎಂದು ಆರೋಪಿಸಿರುವ ಪ್ರತಿಪಕ್ಷಗಳು ವಿಶ್ವಾಸ ಮತ ಯಾಚನೆಗೆ ಒತ್ತಾಯಿಸಿವೆ.

ನವದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಇತ್ತೀಚೆಗೆ ನಡೆದ ಸಭೆಗಳ ನಂತರ ಜಾನ್ ಕುಮಾರ್ ಆಡಳಿತ ಒಕ್ಕೂಟವನ್ನು ತೊರೆಯುವ ಬಗ್ಗೆ ಊಹಾಪೋಹಗಳು ಹಬ್ಬಿದ್ದವು.

ಇದನ್ನೂ ಓದಿ: ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ಶಾಸಕ ಎ. ಜಾನ್ ಕುಮಾರ್ ಅವರನ್ನು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರ ಆಪ್ತ ವಲಯದವರು ಎಂದು ಪರಿಗಣಿಸಲಾಗಿತ್ತು. ಅವರು ನೆಲ್ಲಿಥೋಪ್ ಕ್ಷೇತ್ರದಿಂದ 2016 ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದರು. ನಂತರ ಈ ಕ್ಷೇತ್ರವನ್ನು ನಾರಾಯಣಸಾಮಿ ಅವರಿಗೆ ಬಿಟ್ಟುಕೊಟ್ಟು 2019 ರಲ್ಲಿ ಕಾಮರಾಜ್ ನಗರ ಉಪಚುನಾವಣೆಯಲ್ಲಿ ಗೆದ್ದಿದ್ದರು.

ಇವರ ರಾಜೀನಾಮೆಗೂ ಮುಂಚೆ ಸರ್ಕಾರದ ಆರೋಗ್ಯ ಸಚಿವ ಮಲ್ಲಾಡಿ ಕೃಷ್ಣ ರಾವ್‌ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಾಗಿ ಒಂದೇ ದಿನದಲ್ಲಿ ಜಾನ್ ಕುಮಾರ್ ಅವರ ರಾಜೀನಾಮೆ ನೀಡಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಪುದುಚೇರಿಗೆ ಭೇಟಿ ನೀಡುವ ಒಂದು ದಿನ ಮುಂಚಿತವಾಗಿ ಇದು ನಡೆದಿದ್ದು, ರಾಜೀನಾಮೆಗಳು ರಾಜಕೀಯ ತಲ್ಲಣಗಳನ್ನು ಉಂಟು ಮಾಡಿದೆ. ರಾಹುಲ್ ಗಾಂಧಿಯವರ ಈ ಭೇಟಿಯು ಪುದುಚೇರಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಮಾಡುತ್ತಿರುವ ಮೊದಲನೇ ಭೇಟಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...