Homeಮುಖಪುಟಕೇಂದ್ರ ಸರ್ಕಾರ ಸ್ಥಾಪಿಸಿದ ಸಾಂಕ್ರಮಿಕ ಕಣ್ಗಾವಲು ಯೋಜನೆಯ ಮುಖ್ಯಸ್ಥ ರಾಜೀನಾಮೆ

ಕೇಂದ್ರ ಸರ್ಕಾರ ಸ್ಥಾಪಿಸಿದ ಸಾಂಕ್ರಮಿಕ ಕಣ್ಗಾವಲು ಯೋಜನೆಯ ಮುಖ್ಯಸ್ಥ ರಾಜೀನಾಮೆ

- Advertisement -
- Advertisement -

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ ‘ಇಂಡಿಯನ್ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ’ (INSACOG) ನ ವೈಜ್ಞಾನಿಕ ಸಲಹಾ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವೈರಾಲಜಿಸ್ಟ್ ಶಾಹಿದ್ ಜಮೀಲ್ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಭಾರತದಲ್ಲಿ ಕೊರೊನಾ ತಳಿಗಳ ಪರಿಚಲನೆಯ ಪ್ರಯೋಗಾಲಯ ಮತ್ತು ಸಾಂಕ್ರಾಮಿಕ ರೋಗಗಳ ಕಣ್ಗಾವಲಿಗಾಗಿ ಈ ಒಕ್ಕೂಟವನ್ನು ಸ್ಥಾಪಿಸಲಾಗಿತ್ತು.

ಪ್ರಸ್ತುತ ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ನಿರ್ದೇಶಕರಾಗಿರುವ ಜಮೀಲ್ ಅವರು ಒಕ್ಕೂಟದ ಮುಖ್ಯ ಸಲಹೆಗಾರ ಸ್ಥಾನದಿಂದ ಯಾಕೆ ಕೆಳಗಿಳಿದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅವರು ಸರ್ಕಾರದ ಕೋವಿಡ್ ನೀತಿಗಳನ್ನು ಟೀಕಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳು ವಿರೋಧಿಸಿದ್ದ ಪುಸ್ತಕ: ‘ಹಿಂದೂಗಳು – ಬೇರೊಂದು ಚರಿತ್ರೆ’

ತೀರಾ ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್‌ಗೆ ಬರೆದ ಅಂಕಣದಲ್ಲಿ ಅವರು, “ಸಾಕ್ಷ್ಯಾಧಾರಿತ ನೀತಿ ತಯಾರಿಕೆಗೆ ಮೊಂಡುತನದ ಪ್ರತಿಕ್ರಿಯೆಯನ್ನು ಭಾರತದ ವಿಜ್ಞಾನಿಗಳು ಎದುರಿಸುತ್ತಿದ್ದಾರೆ” ಎಂದು ಹೇಳಿದ್ದರು.

ಈ ಹಿಂದೆ ವೆಲ್ಕಂ ಟ್ರಸ್ಟ್ ಡಿಬಿಟಿ ಇಂಡಿಯಾ ಅಲೈಯನ್ಸ್‌ನ ಸಿಇಒ ಆಗಿದ್ದ ಜಮೀಲ್, ಹೆಪಟೈಟಿಸ್ ಇ ವೈರಸ್ ಕುರಿತ ಸಂಶೋಧನೆಗೆ ಹೆಸರುವಾಸಿಯಾಗಿದ್ದರು. ಪ್ರಸ್ತುತ ತನ್ನ ರಾಜೀನಾಮೆಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ.

ಮುಖ್ಯವಾಗಿ SARS CoV-2 ನ ಜೀನೋಮಿಕ್ ರೂಪಾಂತರಗಳನ್ನು ಕಂಡುಹಿಡಿಯಲು INSACOG ಒಕ್ಕೂಟವನ್ನು ಕೇಂದ್ರ ಸರ್ಕಾರವು ಐದು ತಿಂಗಳ ಹಿಂದೆ ಸ್ಥಾಪಿಸಿತ್ತು.

INSACOG ಅಡಿಯಲ್ಲಿ, ವೈರಸ್‌‌ ರೂಪಾಂತರಗಳನ್ನು ಅಧ್ಯಯನ ಮಾಡಲು ಸಜ್ಜುಗೊಂಡ 10 ರಾಷ್ಟ್ರೀಯ ಪ್ರಯೋಗಾಲಯಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಆಶ್ರಯದಲ್ಲಿ ಒಟ್ಟುಗೂಡಿಸಲಾಗಿತ್ತು. ಆದರೆ, ಇದು ಮೊದಲಿನಿಂದಲೂ ತೀವ್ರ ಅನುದಾನದ ಬಿಕ್ಕಟ್ಟಿನಿಂದ ಬಳಲುತ್ತಿದೆ. ಇದರ ಪರಿಣಾಮ ಇದರ ಕೆಲಸವು ಯೋಜಿಸಿದಕ್ಕಿಂತ ಕಡಿಮೆ ವೇಗದಲ್ಲಿ ನಡೆಯುತ್ತಿದೆ.

ಈ ಯೋಜನೆಗೆ 6 ತಿಂಗಳ ಅವಧಿಗೆ 115 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ಸರ್ಕಾರ ಆರಂಭದಲ್ಲಿ ತಿಳಿಸಿತ್ತಾದರೂ, ಈ ಹಂಚಿಕೆಯನ್ನು ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳಿಗೆ ನೈಜ ವಿಜ್ಞಾನಿಗಳ ಮಾತಿಗಿಂತಲೂ, ಸಗಣಿ ಗಂಜಲದ ಭಕ್ತರ ಮಾತೇ ಮುಖ್ಯವಾಗಿದೆ. ಇದು ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...