Homeಮುಖಪುಟಕೇಂದ್ರ ಸರ್ಕಾರ ಸ್ಥಾಪಿಸಿದ ಸಾಂಕ್ರಮಿಕ ಕಣ್ಗಾವಲು ಯೋಜನೆಯ ಮುಖ್ಯಸ್ಥ ರಾಜೀನಾಮೆ

ಕೇಂದ್ರ ಸರ್ಕಾರ ಸ್ಥಾಪಿಸಿದ ಸಾಂಕ್ರಮಿಕ ಕಣ್ಗಾವಲು ಯೋಜನೆಯ ಮುಖ್ಯಸ್ಥ ರಾಜೀನಾಮೆ

- Advertisement -
- Advertisement -

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ ‘ಇಂಡಿಯನ್ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ’ (INSACOG) ನ ವೈಜ್ಞಾನಿಕ ಸಲಹಾ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವೈರಾಲಜಿಸ್ಟ್ ಶಾಹಿದ್ ಜಮೀಲ್ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಭಾರತದಲ್ಲಿ ಕೊರೊನಾ ತಳಿಗಳ ಪರಿಚಲನೆಯ ಪ್ರಯೋಗಾಲಯ ಮತ್ತು ಸಾಂಕ್ರಾಮಿಕ ರೋಗಗಳ ಕಣ್ಗಾವಲಿಗಾಗಿ ಈ ಒಕ್ಕೂಟವನ್ನು ಸ್ಥಾಪಿಸಲಾಗಿತ್ತು.

ಪ್ರಸ್ತುತ ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ನಿರ್ದೇಶಕರಾಗಿರುವ ಜಮೀಲ್ ಅವರು ಒಕ್ಕೂಟದ ಮುಖ್ಯ ಸಲಹೆಗಾರ ಸ್ಥಾನದಿಂದ ಯಾಕೆ ಕೆಳಗಿಳಿದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅವರು ಸರ್ಕಾರದ ಕೋವಿಡ್ ನೀತಿಗಳನ್ನು ಟೀಕಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳು ವಿರೋಧಿಸಿದ್ದ ಪುಸ್ತಕ: ‘ಹಿಂದೂಗಳು – ಬೇರೊಂದು ಚರಿತ್ರೆ’

ತೀರಾ ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್‌ಗೆ ಬರೆದ ಅಂಕಣದಲ್ಲಿ ಅವರು, “ಸಾಕ್ಷ್ಯಾಧಾರಿತ ನೀತಿ ತಯಾರಿಕೆಗೆ ಮೊಂಡುತನದ ಪ್ರತಿಕ್ರಿಯೆಯನ್ನು ಭಾರತದ ವಿಜ್ಞಾನಿಗಳು ಎದುರಿಸುತ್ತಿದ್ದಾರೆ” ಎಂದು ಹೇಳಿದ್ದರು.

ಈ ಹಿಂದೆ ವೆಲ್ಕಂ ಟ್ರಸ್ಟ್ ಡಿಬಿಟಿ ಇಂಡಿಯಾ ಅಲೈಯನ್ಸ್‌ನ ಸಿಇಒ ಆಗಿದ್ದ ಜಮೀಲ್, ಹೆಪಟೈಟಿಸ್ ಇ ವೈರಸ್ ಕುರಿತ ಸಂಶೋಧನೆಗೆ ಹೆಸರುವಾಸಿಯಾಗಿದ್ದರು. ಪ್ರಸ್ತುತ ತನ್ನ ರಾಜೀನಾಮೆಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ.

ಮುಖ್ಯವಾಗಿ SARS CoV-2 ನ ಜೀನೋಮಿಕ್ ರೂಪಾಂತರಗಳನ್ನು ಕಂಡುಹಿಡಿಯಲು INSACOG ಒಕ್ಕೂಟವನ್ನು ಕೇಂದ್ರ ಸರ್ಕಾರವು ಐದು ತಿಂಗಳ ಹಿಂದೆ ಸ್ಥಾಪಿಸಿತ್ತು.

INSACOG ಅಡಿಯಲ್ಲಿ, ವೈರಸ್‌‌ ರೂಪಾಂತರಗಳನ್ನು ಅಧ್ಯಯನ ಮಾಡಲು ಸಜ್ಜುಗೊಂಡ 10 ರಾಷ್ಟ್ರೀಯ ಪ್ರಯೋಗಾಲಯಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಆಶ್ರಯದಲ್ಲಿ ಒಟ್ಟುಗೂಡಿಸಲಾಗಿತ್ತು. ಆದರೆ, ಇದು ಮೊದಲಿನಿಂದಲೂ ತೀವ್ರ ಅನುದಾನದ ಬಿಕ್ಕಟ್ಟಿನಿಂದ ಬಳಲುತ್ತಿದೆ. ಇದರ ಪರಿಣಾಮ ಇದರ ಕೆಲಸವು ಯೋಜಿಸಿದಕ್ಕಿಂತ ಕಡಿಮೆ ವೇಗದಲ್ಲಿ ನಡೆಯುತ್ತಿದೆ.

ಈ ಯೋಜನೆಗೆ 6 ತಿಂಗಳ ಅವಧಿಗೆ 115 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ಸರ್ಕಾರ ಆರಂಭದಲ್ಲಿ ತಿಳಿಸಿತ್ತಾದರೂ, ಈ ಹಂಚಿಕೆಯನ್ನು ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳಿಗೆ ನೈಜ ವಿಜ್ಞಾನಿಗಳ ಮಾತಿಗಿಂತಲೂ, ಸಗಣಿ ಗಂಜಲದ ಭಕ್ತರ ಮಾತೇ ಮುಖ್ಯವಾಗಿದೆ. ಇದು ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....