Homeಕರ್ನಾಟಕ#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ಹಲವು ಪ್ರಕರಣಗಳ ಆರೋಪಿಗೆ ಸಚಿವರು ಅಭಯ ನೀಡುವುದನ್ನು ಸ್ವತಃ ಆರೋಪಿಯೆ ಅಕಸ್ಮಾತ್ತಾಗಿ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

- Advertisement -
- Advertisement -

ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿದೆ.

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿತ್ತು, ಪ್ರಸ್ತುತ ವಿಡಿಯೊ ವೈರಲಾಗಿದೆ.

#ResignBSBommai ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದು, ಕರ್ನಾಟಕ ಟ್ರೆಂಡಿಂಗ್‌ಲ್ಲಿ ಮೂರನೇ ಸ್ಥಾನದಲ್ಲಿದೆ.

ವಕೀಲರಾದ ವಿನಯ ಶ್ರೀನಿವಾಸ ಅವರು ಟ್ವೀಟ್ ಮಾಡಿದ್ದು, “ಕರ್ನಾಟಕ ಗೃಹಸಚಿವರು ನಿಮ್ಮ ಮೇಲೆ ಯಾವುದೆ ಕೇಸಿದ್ದರೂ ತೆಗೆದು ಹಾಕುತ್ತೇವೆ ಎಂದು ವಿಎಚ್‌ಪಿ ಮುಖಂಡರಿಗೆ ಹೇಳುತ್ತಿದ್ದಾರೆ? ಏನಿದರ ಅರ್ಥ? ಬೊಮ್ಮಾಯಿ ರಾಜಿನಾಮೆ ನೀಡಲೇ ಬೇಕು” ಎಂದು ಟ್ವೀಟ್ ಮಾಡಿದ್ದಾರಲ್ಲದೆ, ವರದಿಯನ್ನು ಸುದ್ದಿ ಮಾಡಿದ್ದಕ್ಕೆ ನಾನುಗೌರಿ.ಕಾಮ್ ಸೇರಿದಂತೆ ಇರತ ಪತ್ರಿಕೆಗೂ ಧನ್ಯವಾದ ಹೇಳಿದ್ದಾರೆ.

ಇರ್ಷಾ ಮಾಝ್ ಎಂಬವರು, “ಏನ್ರೀ ಇದು ಸರ್ವಾಧಿಕಾರನಾ ?ಗೂಂಡಾಗಳಿಗೆ ಬೆಂಬಲ ನೀಡುತ್ತಿರುವ ಗೃಹಸಚಿವರು. ಸಾರ್ವಜನಿಕವಾಗಿ ಕೋಮು ಗಲಭೆಯ ಆರೋಪಿಗೆ ಬೇಷರತ್ ಭರವಸೆ ನೀಡಿದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.” ಎಂದು ಟ್ವೀಟ್ ಮಾಡಿದ್ದಾರೆ.

ಚೈತ್ರ ವಿ. ಗಿರೀಶ್ ಕುಮಾರ್‌, “ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಆಗ್ರಹಿಸಿದ್ದಾರೆ.

ಎ.ಕೆ. ಅಶ್ರಫ್ ಟ್ವೀಟ್ ಮಾಡಿ, “ಗೃಹ ಸಚಿವ ಬೊಮ್ಮಾಯಿಯವರೇ, ಕೋಮುಗಲಭೆಯಯಿಂದ ಕರಾವಳಿ ಹೇಗೆ ಹೊತ್ತಿ ಉರಿದಿತ್ತು ನಿಮಗೆ ಗೊತ್ತಿಲ್ಲವೇ? ಅಂತಹ ಗಂಭೀರ ಆರೋಪ ಹೊತ್ತವರ ಕೇಸು ನೀವು ತೆಗೆದು ಹಾಕುವಿರಾ?” ಎಂದು ಪ್ರಶ್ನಿಸಿ ರಾಜಿನಾಮೆ ಕೊಡುವಂತೆ ಆಗ್ರಹಿಸಿದ್ದಾರೆ.

ನೌಫಲ್ ಮೊಹಮ್ಮದ್ ಎಂಬವರು, “ಅಧಿಕಾರವನ್ನು ದುರುಪಯೋಗಪಡಿಸಿ ಬಜರಂಗದಳದ ಪುಂಡರ ಕೇಸ್ಗಳನ್ನು ಹಿಂಪಡೆಯುವ ವಾಗ್ದಾನವನ್ನು ನೀಡಿದ ಗೃಹಸಚಿವ ಬೊಮ್ಮಾಯಿ ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

ಶಿವಾಜಿ ನಗರದ ಕಾಂಗ್ರಸ್ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿ, “ಬೀಲ ಮುದುಡಿಕೊಂಡು ಬಿಲದೊಳಗಿದ್ದ ಗಲಭೆಕೋರರಿಗೆ ಈ ರೀತಿ ಸಾರ್ವಜನಿಕವಾಗಿ ಕ್ಲೀನ್ ಚಿಟ್ ನೀಡಿದರೆ ಅವರು ಮತ್ತೆ ಕರಾವಳಿಯಲ್ಲಿ ಶಾಂತಿ ಕದಡುವರು. ಕರಾವಳಿ ಜಿಲ್ಲೆಯಲ್ಲಿ ಶಾಂತಿ ಕಾಪಾಡಿ. ಗೃಹ ಸಚಿವರೇ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ.” ಎಂದು ಆಗ್ರಹಿಸಿದ್ದಾರೆ.


ಓದಿ:  ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...