Homeಕರ್ನಾಟಕ#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ಹಲವು ಪ್ರಕರಣಗಳ ಆರೋಪಿಗೆ ಸಚಿವರು ಅಭಯ ನೀಡುವುದನ್ನು ಸ್ವತಃ ಆರೋಪಿಯೆ ಅಕಸ್ಮಾತ್ತಾಗಿ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

- Advertisement -
- Advertisement -

ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿದೆ.

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿತ್ತು, ಪ್ರಸ್ತುತ ವಿಡಿಯೊ ವೈರಲಾಗಿದೆ.

#ResignBSBommai ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದು, ಕರ್ನಾಟಕ ಟ್ರೆಂಡಿಂಗ್‌ಲ್ಲಿ ಮೂರನೇ ಸ್ಥಾನದಲ್ಲಿದೆ.

ವಕೀಲರಾದ ವಿನಯ ಶ್ರೀನಿವಾಸ ಅವರು ಟ್ವೀಟ್ ಮಾಡಿದ್ದು, “ಕರ್ನಾಟಕ ಗೃಹಸಚಿವರು ನಿಮ್ಮ ಮೇಲೆ ಯಾವುದೆ ಕೇಸಿದ್ದರೂ ತೆಗೆದು ಹಾಕುತ್ತೇವೆ ಎಂದು ವಿಎಚ್‌ಪಿ ಮುಖಂಡರಿಗೆ ಹೇಳುತ್ತಿದ್ದಾರೆ? ಏನಿದರ ಅರ್ಥ? ಬೊಮ್ಮಾಯಿ ರಾಜಿನಾಮೆ ನೀಡಲೇ ಬೇಕು” ಎಂದು ಟ್ವೀಟ್ ಮಾಡಿದ್ದಾರಲ್ಲದೆ, ವರದಿಯನ್ನು ಸುದ್ದಿ ಮಾಡಿದ್ದಕ್ಕೆ ನಾನುಗೌರಿ.ಕಾಮ್ ಸೇರಿದಂತೆ ಇರತ ಪತ್ರಿಕೆಗೂ ಧನ್ಯವಾದ ಹೇಳಿದ್ದಾರೆ.

ಇರ್ಷಾ ಮಾಝ್ ಎಂಬವರು, “ಏನ್ರೀ ಇದು ಸರ್ವಾಧಿಕಾರನಾ ?ಗೂಂಡಾಗಳಿಗೆ ಬೆಂಬಲ ನೀಡುತ್ತಿರುವ ಗೃಹಸಚಿವರು. ಸಾರ್ವಜನಿಕವಾಗಿ ಕೋಮು ಗಲಭೆಯ ಆರೋಪಿಗೆ ಬೇಷರತ್ ಭರವಸೆ ನೀಡಿದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.” ಎಂದು ಟ್ವೀಟ್ ಮಾಡಿದ್ದಾರೆ.

ಚೈತ್ರ ವಿ. ಗಿರೀಶ್ ಕುಮಾರ್‌, “ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಆಗ್ರಹಿಸಿದ್ದಾರೆ.

ಎ.ಕೆ. ಅಶ್ರಫ್ ಟ್ವೀಟ್ ಮಾಡಿ, “ಗೃಹ ಸಚಿವ ಬೊಮ್ಮಾಯಿಯವರೇ, ಕೋಮುಗಲಭೆಯಯಿಂದ ಕರಾವಳಿ ಹೇಗೆ ಹೊತ್ತಿ ಉರಿದಿತ್ತು ನಿಮಗೆ ಗೊತ್ತಿಲ್ಲವೇ? ಅಂತಹ ಗಂಭೀರ ಆರೋಪ ಹೊತ್ತವರ ಕೇಸು ನೀವು ತೆಗೆದು ಹಾಕುವಿರಾ?” ಎಂದು ಪ್ರಶ್ನಿಸಿ ರಾಜಿನಾಮೆ ಕೊಡುವಂತೆ ಆಗ್ರಹಿಸಿದ್ದಾರೆ.

ನೌಫಲ್ ಮೊಹಮ್ಮದ್ ಎಂಬವರು, “ಅಧಿಕಾರವನ್ನು ದುರುಪಯೋಗಪಡಿಸಿ ಬಜರಂಗದಳದ ಪುಂಡರ ಕೇಸ್ಗಳನ್ನು ಹಿಂಪಡೆಯುವ ವಾಗ್ದಾನವನ್ನು ನೀಡಿದ ಗೃಹಸಚಿವ ಬೊಮ್ಮಾಯಿ ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

ಶಿವಾಜಿ ನಗರದ ಕಾಂಗ್ರಸ್ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿ, “ಬೀಲ ಮುದುಡಿಕೊಂಡು ಬಿಲದೊಳಗಿದ್ದ ಗಲಭೆಕೋರರಿಗೆ ಈ ರೀತಿ ಸಾರ್ವಜನಿಕವಾಗಿ ಕ್ಲೀನ್ ಚಿಟ್ ನೀಡಿದರೆ ಅವರು ಮತ್ತೆ ಕರಾವಳಿಯಲ್ಲಿ ಶಾಂತಿ ಕದಡುವರು. ಕರಾವಳಿ ಜಿಲ್ಲೆಯಲ್ಲಿ ಶಾಂತಿ ಕಾಪಾಡಿ. ಗೃಹ ಸಚಿವರೇ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ.” ಎಂದು ಆಗ್ರಹಿಸಿದ್ದಾರೆ.


ಓದಿ:  ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...