Homeಕರ್ನಾಟಕ#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ಹಲವು ಪ್ರಕರಣಗಳ ಆರೋಪಿಗೆ ಸಚಿವರು ಅಭಯ ನೀಡುವುದನ್ನು ಸ್ವತಃ ಆರೋಪಿಯೆ ಅಕಸ್ಮಾತ್ತಾಗಿ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

- Advertisement -
- Advertisement -

ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿದೆ.

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿತ್ತು, ಪ್ರಸ್ತುತ ವಿಡಿಯೊ ವೈರಲಾಗಿದೆ.

#ResignBSBommai ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದು, ಕರ್ನಾಟಕ ಟ್ರೆಂಡಿಂಗ್‌ಲ್ಲಿ ಮೂರನೇ ಸ್ಥಾನದಲ್ಲಿದೆ.

ವಕೀಲರಾದ ವಿನಯ ಶ್ರೀನಿವಾಸ ಅವರು ಟ್ವೀಟ್ ಮಾಡಿದ್ದು, “ಕರ್ನಾಟಕ ಗೃಹಸಚಿವರು ನಿಮ್ಮ ಮೇಲೆ ಯಾವುದೆ ಕೇಸಿದ್ದರೂ ತೆಗೆದು ಹಾಕುತ್ತೇವೆ ಎಂದು ವಿಎಚ್‌ಪಿ ಮುಖಂಡರಿಗೆ ಹೇಳುತ್ತಿದ್ದಾರೆ? ಏನಿದರ ಅರ್ಥ? ಬೊಮ್ಮಾಯಿ ರಾಜಿನಾಮೆ ನೀಡಲೇ ಬೇಕು” ಎಂದು ಟ್ವೀಟ್ ಮಾಡಿದ್ದಾರಲ್ಲದೆ, ವರದಿಯನ್ನು ಸುದ್ದಿ ಮಾಡಿದ್ದಕ್ಕೆ ನಾನುಗೌರಿ.ಕಾಮ್ ಸೇರಿದಂತೆ ಇರತ ಪತ್ರಿಕೆಗೂ ಧನ್ಯವಾದ ಹೇಳಿದ್ದಾರೆ.

ಇರ್ಷಾ ಮಾಝ್ ಎಂಬವರು, “ಏನ್ರೀ ಇದು ಸರ್ವಾಧಿಕಾರನಾ ?ಗೂಂಡಾಗಳಿಗೆ ಬೆಂಬಲ ನೀಡುತ್ತಿರುವ ಗೃಹಸಚಿವರು. ಸಾರ್ವಜನಿಕವಾಗಿ ಕೋಮು ಗಲಭೆಯ ಆರೋಪಿಗೆ ಬೇಷರತ್ ಭರವಸೆ ನೀಡಿದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.” ಎಂದು ಟ್ವೀಟ್ ಮಾಡಿದ್ದಾರೆ.

ಚೈತ್ರ ವಿ. ಗಿರೀಶ್ ಕುಮಾರ್‌, “ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಆಗ್ರಹಿಸಿದ್ದಾರೆ.

ಎ.ಕೆ. ಅಶ್ರಫ್ ಟ್ವೀಟ್ ಮಾಡಿ, “ಗೃಹ ಸಚಿವ ಬೊಮ್ಮಾಯಿಯವರೇ, ಕೋಮುಗಲಭೆಯಯಿಂದ ಕರಾವಳಿ ಹೇಗೆ ಹೊತ್ತಿ ಉರಿದಿತ್ತು ನಿಮಗೆ ಗೊತ್ತಿಲ್ಲವೇ? ಅಂತಹ ಗಂಭೀರ ಆರೋಪ ಹೊತ್ತವರ ಕೇಸು ನೀವು ತೆಗೆದು ಹಾಕುವಿರಾ?” ಎಂದು ಪ್ರಶ್ನಿಸಿ ರಾಜಿನಾಮೆ ಕೊಡುವಂತೆ ಆಗ್ರಹಿಸಿದ್ದಾರೆ.

ನೌಫಲ್ ಮೊಹಮ್ಮದ್ ಎಂಬವರು, “ಅಧಿಕಾರವನ್ನು ದುರುಪಯೋಗಪಡಿಸಿ ಬಜರಂಗದಳದ ಪುಂಡರ ಕೇಸ್ಗಳನ್ನು ಹಿಂಪಡೆಯುವ ವಾಗ್ದಾನವನ್ನು ನೀಡಿದ ಗೃಹಸಚಿವ ಬೊಮ್ಮಾಯಿ ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

ಶಿವಾಜಿ ನಗರದ ಕಾಂಗ್ರಸ್ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿ, “ಬೀಲ ಮುದುಡಿಕೊಂಡು ಬಿಲದೊಳಗಿದ್ದ ಗಲಭೆಕೋರರಿಗೆ ಈ ರೀತಿ ಸಾರ್ವಜನಿಕವಾಗಿ ಕ್ಲೀನ್ ಚಿಟ್ ನೀಡಿದರೆ ಅವರು ಮತ್ತೆ ಕರಾವಳಿಯಲ್ಲಿ ಶಾಂತಿ ಕದಡುವರು. ಕರಾವಳಿ ಜಿಲ್ಲೆಯಲ್ಲಿ ಶಾಂತಿ ಕಾಪಾಡಿ. ಗೃಹ ಸಚಿವರೇ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ.” ಎಂದು ಆಗ್ರಹಿಸಿದ್ದಾರೆ.


ಓದಿ:  ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...