Homeಕರ್ನಾಟಕ#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

#ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ಹಲವು ಪ್ರಕರಣಗಳ ಆರೋಪಿಗೆ ಸಚಿವರು ಅಭಯ ನೀಡುವುದನ್ನು ಸ್ವತಃ ಆರೋಪಿಯೆ ಅಕಸ್ಮಾತ್ತಾಗಿ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

- Advertisement -
- Advertisement -

ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿದೆ.

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿತ್ತು, ಪ್ರಸ್ತುತ ವಿಡಿಯೊ ವೈರಲಾಗಿದೆ.

#ResignBSBommai ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದು, ಕರ್ನಾಟಕ ಟ್ರೆಂಡಿಂಗ್‌ಲ್ಲಿ ಮೂರನೇ ಸ್ಥಾನದಲ್ಲಿದೆ.

ವಕೀಲರಾದ ವಿನಯ ಶ್ರೀನಿವಾಸ ಅವರು ಟ್ವೀಟ್ ಮಾಡಿದ್ದು, “ಕರ್ನಾಟಕ ಗೃಹಸಚಿವರು ನಿಮ್ಮ ಮೇಲೆ ಯಾವುದೆ ಕೇಸಿದ್ದರೂ ತೆಗೆದು ಹಾಕುತ್ತೇವೆ ಎಂದು ವಿಎಚ್‌ಪಿ ಮುಖಂಡರಿಗೆ ಹೇಳುತ್ತಿದ್ದಾರೆ? ಏನಿದರ ಅರ್ಥ? ಬೊಮ್ಮಾಯಿ ರಾಜಿನಾಮೆ ನೀಡಲೇ ಬೇಕು” ಎಂದು ಟ್ವೀಟ್ ಮಾಡಿದ್ದಾರಲ್ಲದೆ, ವರದಿಯನ್ನು ಸುದ್ದಿ ಮಾಡಿದ್ದಕ್ಕೆ ನಾನುಗೌರಿ.ಕಾಮ್ ಸೇರಿದಂತೆ ಇರತ ಪತ್ರಿಕೆಗೂ ಧನ್ಯವಾದ ಹೇಳಿದ್ದಾರೆ.

ಇರ್ಷಾ ಮಾಝ್ ಎಂಬವರು, “ಏನ್ರೀ ಇದು ಸರ್ವಾಧಿಕಾರನಾ ?ಗೂಂಡಾಗಳಿಗೆ ಬೆಂಬಲ ನೀಡುತ್ತಿರುವ ಗೃಹಸಚಿವರು. ಸಾರ್ವಜನಿಕವಾಗಿ ಕೋಮು ಗಲಭೆಯ ಆರೋಪಿಗೆ ಬೇಷರತ್ ಭರವಸೆ ನೀಡಿದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.” ಎಂದು ಟ್ವೀಟ್ ಮಾಡಿದ್ದಾರೆ.

ಚೈತ್ರ ವಿ. ಗಿರೀಶ್ ಕುಮಾರ್‌, “ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಆಗ್ರಹಿಸಿದ್ದಾರೆ.

ಎ.ಕೆ. ಅಶ್ರಫ್ ಟ್ವೀಟ್ ಮಾಡಿ, “ಗೃಹ ಸಚಿವ ಬೊಮ್ಮಾಯಿಯವರೇ, ಕೋಮುಗಲಭೆಯಯಿಂದ ಕರಾವಳಿ ಹೇಗೆ ಹೊತ್ತಿ ಉರಿದಿತ್ತು ನಿಮಗೆ ಗೊತ್ತಿಲ್ಲವೇ? ಅಂತಹ ಗಂಭೀರ ಆರೋಪ ಹೊತ್ತವರ ಕೇಸು ನೀವು ತೆಗೆದು ಹಾಕುವಿರಾ?” ಎಂದು ಪ್ರಶ್ನಿಸಿ ರಾಜಿನಾಮೆ ಕೊಡುವಂತೆ ಆಗ್ರಹಿಸಿದ್ದಾರೆ.

ನೌಫಲ್ ಮೊಹಮ್ಮದ್ ಎಂಬವರು, “ಅಧಿಕಾರವನ್ನು ದುರುಪಯೋಗಪಡಿಸಿ ಬಜರಂಗದಳದ ಪುಂಡರ ಕೇಸ್ಗಳನ್ನು ಹಿಂಪಡೆಯುವ ವಾಗ್ದಾನವನ್ನು ನೀಡಿದ ಗೃಹಸಚಿವ ಬೊಮ್ಮಾಯಿ ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

ಶಿವಾಜಿ ನಗರದ ಕಾಂಗ್ರಸ್ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿ, “ಬೀಲ ಮುದುಡಿಕೊಂಡು ಬಿಲದೊಳಗಿದ್ದ ಗಲಭೆಕೋರರಿಗೆ ಈ ರೀತಿ ಸಾರ್ವಜನಿಕವಾಗಿ ಕ್ಲೀನ್ ಚಿಟ್ ನೀಡಿದರೆ ಅವರು ಮತ್ತೆ ಕರಾವಳಿಯಲ್ಲಿ ಶಾಂತಿ ಕದಡುವರು. ಕರಾವಳಿ ಜಿಲ್ಲೆಯಲ್ಲಿ ಶಾಂತಿ ಕಾಪಾಡಿ. ಗೃಹ ಸಚಿವರೇ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ.” ಎಂದು ಆಗ್ರಹಿಸಿದ್ದಾರೆ.


ಓದಿ:  ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...