Homeಕರೋನಾ ತಲ್ಲಣ#ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

#ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

- Advertisement -
- Advertisement -

ಕಳೆದ 15 ದಿನಗಳಿಂದ ಸತತವಾಗಿ ಟ್ರೆಡಿಂಗ್‌ನಲ್ಲಿದ್ದ, ಕೋಟ್ಯಾಂತರ ಟ್ವೀಟ್‌ಗಳು, ಫೇಸ್‌ಬುಕ್ ಪೋಸ್ಟ್‌ಗಳು ದಾಖಲಾಗಿದ್ದ #ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಮತ್ತು ಅದರ ಹೆಸರಿನಲ್ಲಿ ದಾಖಲಾದ ಎಲ್ಲಾ ಪೋಸ್ಟ್‌ಗಳನ್ನು ಬುಧವಾರ ಫೇಸ್‌ಬುಕ್ ಇಂಡಿಯಾ ಬ್ಲಾಕ್ ಮಾಡಿತ್ತು. ಫೇಸ್‌ಬುಕ್ ಆಳುವ ಸರ್ಕಾರವನ್ನು ರಕ್ಷಿಸಲು ಮುಂದಾಗಿದೆ, ಇದು ಸೆನ್ಸಾರ್ ಶಿಪ್ ಅಲ್ಲವೇ? ಎಂಬ ವ್ಯಾಪಕ ಟೀಕೆಗಳು ಬಂದ ನಂತರ ಫೇಸ್‌ಬುಕ್ #ResignModi ಹ್ಯಾಷ್‌ಟ್ಯಾಗ್‌ ಅನ್ನು ಮರುಸ್ಥಾಪಿಸಿದೆ. ಇದೊಂದು ‘ಮಿಸ್ಟೇಕ್’ ಎಂದ ಕಂಪನಿ ಒಪ್ಪಿಕೊಂಡಿದೆ.

ವಾರದ ಹಿಂದೆಯಷ್ಟೇ ಟ್ವಿಟರ್ ಸಹ #ResignModi ಹ್ಯಾಷ್‌ಟ್ಯಾಗ್‌ ಬಳಸಿ ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ವೈಫಲ್ಯವನ್ನು ಟೀಕಿಸಿದ್ದ ಹಲವಾರು ಪೋಸ್ಟ್‌ಗಳನ್ನು ಬ್ಲಾಕ್ ಮಾಡುವಂತೆ ಸರ್ಕಾರವು ಟ್ವಿಟರ್ ಅನ್ನು ಕೇಳಿಕೊಂಡಿತ್ತು. ಅದರಂತೆ ಟ್ವಿಟರ್ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿ ತೀವ್ರ ಟೀಕೆಗೆ ಒಳಗಾಗಿತ್ತು. ಈಗ ಆ ಸಾಲಿಗೆ ಫೇಸ್‌ಬುಕ್ ಸಹ ಸೇರಿಕೊಂಡಿದೆ.

ಮೋದಿ ಸರ್ಕಾರದ ವೈಫಲ್ಯಗಳನ್ನು ಟೀಕಿಸುವ ಪೋಸ್ಟ್‌ಗಳನ್ನು ಫೇಸ್‌ಬುಕ್ ನಿರ್ಬಂಧಿಸಿದ ಕೂಡಲೇ ಅದರ ಮೇಲೆ ಟೀಕಾಪ್ರಹಾರ ನಡೆಯಿತು. ಈ ರೀತಿ ಅಧಿಕಾರ ಬಳಸಿ ಜನಾಭಿಪ್ರಾಯ ತಡೆಯುವುದು ಹೇಡಿಗಳ ಕೆಲಸ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಕೇಳಿಬಂತು. ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಇಂದು ಅಂತಿಮ ಹಂತದ ಮತದಾನ ನಡೆಯುತ್ತಿರುವ ವೇಳೆಯಲ್ಲಿ ಈ ರೀತಿಯ ನಿರ್ಬಂಧಕ್ಕೆ ವ್ಯಾಪಕ ವಿರೋಧ ವ್ಯಕ್ತವಾಯಿತು.

ಕೇಂದ್ರ ಸರ್ಕಾರದ ಆಜ್ಞೆಯ ಮೇರೆಗೆ ಈ ಪೋಸ್ಟ್‌ಗಳನ್ನು ನಿರ್ಬಂಧಿಸಿಲ್ಲ. ಇದು ತಾತ್ಕಾಲಿಕ ತಪ್ಪಿನಿಂದ ಸಂಭವಿಸಿದೆ ಎಂದು ಫೇಸ್‌ಬುಕ್ ಸ್ಪಷ್ಟೀಕರಣ ನೀಡಿದ್ದು ಮತ್ತೆ ಆ ಹ್ಯಾಷ್‌ಟ್ಯಾಗ್ ಅನ್ನು ಮರುಸ್ಥಾಪಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈಗ ಮತ್ತೆ #ResignModi ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದ್ದು, ಜನ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. “ಇಂದು 3.79 ಲಕ್ಷ ಪ್ರಕರಣಗಳು ದಾಖಲಾಗಿವೆ. ಆದರೆ ಮೋದಿ ಸರ್ಕಾರ #ResignModi ಹ್ಯಾಷ್‌ಟ್ಯಾಗ್‌ಗಳನ್ನು ತೆಗೆದುಹಾಕುವಂತೆ ಹೋರಾಡುತ್ತಿದೆ. ಮೋದಿಯವರು ತಮ್ಮ ಆದ್ಯತೆಗಳನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ” ಎಂದು ಸ್ವಾತಿ ಚತುರ್ವೇದಿಯವರು ಟೀಕಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: ‘ಮೋದಿ ರಾಜೀನಾಮೆ ನೀಡಿ’ ಟ್ವಿಟರ್‌ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....