“ಕೇಂದ್ರ ಸರ್ಕಾರದ ಮೂರು ಹೊಸ ಕಾಯ್ದೆಗಳನ್ನು ಹಿಂಪಡೆಯುವ ತನಕ ಪ್ರತಿಭಟನೆ, ಹೋರಾಟ ಮುಂದುವರಿಯುತ್ತದೆ” ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ರಾಮರಾಜ್ ಪಟ್ಟಣದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, “ರೈತರ ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ ಆಂದೋಲನ ಮುಂದುವರಿಯುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಟ್ರ್ಯಾಕ್ಟರ್ ರ್ಯಾಲಿಗೆ ಚಾಲನೆ ನೀಡಿದ ಅವರು, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮಾರ್ಚ್ 27 ರಂದು ಗಾಜಿಪುರದ ರೈತರ ಪ್ರತಿಭಟನಾ ಸ್ಥಳವನ್ನು ತಲುಪಲಿದೆ ಎಂದು ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಇದರ ನಡುವೆ, ಮುಜಫ್ಫರ್ನಗರ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಅವರು, “ಈ ಮೂರು ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿಯಾಗಲಿವೆ. ರೈತರ ಆಶಯಕ್ಕೆ ಅನುಗುಣವಾಗಿಯೇ ಈ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಒಂದು ವೇಳೆ ಈ ಕಾಯ್ದೆಗಳಿಂದಾಗಿ ಒಬ್ಬ ರೈತ ಜಮೀನು ಕಳೆದುಕೊಂಡರೂ ನಾನು ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್ಸಿ-ಎಸ್ಟಿಗೆ ಒತ್ತು