Homeಮುಖಪುಟ'ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ': ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

‘ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ’: ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಬಿಜೆಪಿ ನೇತೃತ್ವದ ಕೇಂದ್ರವು ಹಿಂದಿ ಹೇರಿಕೆ ಮೂಲಕ ‘ಬೆದರಿಕೆ’ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ತಮ್ಮ ಆಡಳಿತಾರೂಢ ಡಿಎಂಕೆ ಪಕ್ಷ, ಜನರು ಅಥವಾ ಜನರ ಮೇಲೆ ಭಾಷೆಯನ್ನು ಹೇರುವ ಯಾವುದೇ ಪ್ರಯತ್ನಗಳನ್ನು ವಿರೋಧಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರತಿಪಾದಿಸಿದರು.

ಈ ಹಿಂದೆ ರಾಜ್ಯದಲ್ಲಿ ನಡೆದ ಹಿಂದಿ ವಿರೋಧಿ ಆಂದೋಲನದ ಅಂಗವಾಗಿ ಮಡಿದವರ ಗೌರವಾರ್ಥವಗಿ ನಡೆದ ಭಾಷಾ ಹುತಾತ್ಮರ ದಿನಾಚರಣೆಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂ.ಕೆ.ಸ್ಟಾಲಿನ್, ಕೇಂದ್ರದ ಆಡಳಿತಾರೂಢ ಬಿಜೆಪಿ ಹಿಂದಿ ಹೇರುವುದನ್ನು ಅಭ್ಯಾಸ ಮಾಡಿಕೊಂಡಿದೆ ಎಂದರು.

“ಭಾರತೀಯ ಒಕ್ಕೂಟದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಹಿಂದಿ ಹೇರುವುದನ್ನು ಪರಿಪಾಠ ಮಾಡಿಕೊಂಡಿದೆ. ಆಡಳಿತದಿಂದ ಶಿಕ್ಷಣದವರೆಗೆ ಅವರು ಹಿಂದಿಯನ್ನು ಹೇರಲು ಅಧಿಕಾರಕ್ಕೆ ಬಂದಿದ್ದಾರೆಂದು ಅವರು ಭಾವಿಸಿದ್ದಾರೆ” ಎಂದರು.

ಒಂದು ರಾಷ್ಟ್ರ, ಒಂದು ಧರ್ಮ, ಒಂದು ಚುನಾವಣೆ, ಒಂದು (ಪ್ರವೇಶ) ಪರೀಕ್ಷೆ, ಒಂದು ಆಹಾರ, ಒಂದು ಸಂಸ್ಕೃತಿಯಂತೆ ಇದರಿಂದ ಅವರು ಒಂದೇ ಭಾಷೆಯಿಂದ ಇತರ ರಾಷ್ಟ್ರೀಯ ಜನಾಂಗಗಳ ಸಂಸ್ಕೃತಿಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಎಂಕೆ ಅಧ್ಯಕ್ಷ ಸಿಎಂ ಸ್ಟಾಲಿನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ “ಬೇಷರತ್ ಬೆಂಬಲ” ನೀಡಿದ ಕಮಲ್ ಹಾಸನ್

ಹಿಂದಿ ಹೇರಿಕೆಯ ವಿರುದ್ಧ ಅಕ್ಟೋಬರ್ 2022 ರ ರಾಜ್ಯ ಅಸೆಂಬ್ಲಿ ನಿರ್ಣಯವನ್ನು ನೆನಪಿಸಿಕೊಂಡ ಎಂಕೆ ಸ್ಟಾಲಿನ್, “ಹಿಂದಿ ಹೇರಿಕೆಯ ವಿರುದ್ಧ ನಮ್ಮ ಹೋರಾಟಗಳು ಮುಂದುವರಿಯುತ್ತದೆ. ತಮಿಳನ್ನು ರಕ್ಷಿಸುವ ನಮ್ಮ ಪ್ರಯತ್ನಗಳು ಶಾಶ್ವತವಾಗಿ ಮುಂದುವರಿಯುತ್ತದೆ” ಎಂದು ಗುಡುಗಿದರು.

ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಇತರ ಭಾಷೆಗಳನ್ನು ನಿರ್ಲಕ್ಷಿಸುವುದಲ್ಲದೆ ಅವುಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

2017-20ರ ನಡುವೆ ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಕೇಂದ್ರವು ₹ 643 ಕೋಟಿ ಅನುದಾನ ನೀಡಿದೆ ಎಂದು ಅವರು ಹೇಳಿದರು. ತಮಿಳಿಗೆ ಮೀಸಲಿಟ್ಟಿದ್ದು ₹ 23 ಕೋಟಿಗಿಂತ ಕಡಿಮೆಯಾಗಿದೆ.

“ನಾವು ಯಾವುದೇ ಭಾಷೆಗೆ ಶತ್ರುಗಳಲ್ಲ, ಸ್ವಂತ ಆಸಕ್ತಿಯಿಂದ ಯಾರು ಎಷ್ಟು ಭಾಷೆಗಳನ್ನಾದರು ಕಲಿಯಬಹುದು. ಆದರೆ, ಒಂದು ಭಾಷೆಯನ್ನು ಹೇರುವ ಯಾವುದೇ ಕ್ರಮವನ್ನು ನಾವು ವಿರೋಧಿಸುತ್ತೇವೆ” ಎಂದು ಸಿಎಂ ಹೇಳಿದರು.

ಹಲವಾರು ಹಿಂದಿ ವಿರೋಧಿ ಆಂದೋಲನಗಳ ನಂತರ, ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಅವರು ತಮಿಳು ಮತ್ತು ಇಂಗ್ಲಿಷ್‌ನ ದ್ವಿಭಾಷಾ ಸೂತ್ರದ ಶಾಸನವನ್ನು ತಂದರು. ಇದರಿಂದಾಗಿ ರಾಜ್ಯದ ಯುವಕರು ವಿಶ್ವದ ಅನೇಕ ಭಾಗಗಳಲ್ಲಿ ಉದ್ಯೋಗ ಪಡೆಯಲು ಯಶಸ್ವಿಯಾಗಿದ್ದಾರೆ ಎಂದು ಸಿಎಂ ಸ್ಟಾಲಿನ್ ಹೇಳಿದರು.

‘ಭಾಷಾ ಹುತಾತ್ಮರ ಬಲಿದಾನ ವ್ಯರ್ಥವಾಗದಂತೆ ನೋಡಿಕೊಳ್ಳಲು ಅಣ್ಣಾ ಹೀಗೆ ಮಾಡಿದ್ದಾರೆ’ ಎಂದು ದ್ವಿಭಾಷಾ ಸೂತ್ರದ ಕುರಿತು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...