Homeಮುಖಪುಟಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

- Advertisement -
- Advertisement -

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು.

ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಯಿಂದ ತೆಗೆದುಹಾಕುವ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದ ಗೊಗೊಯ್, ಸಂಸತ್ತಿನ ವಾತಾವರಣವು ಈಗ ಹೇಗಾಗಿದೆಯೆಂದರೆ, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲುಯ ಅವಕಾಶವೇ ನೀಡಿಲ್ಲ. ಏಕೆಂದರೆ, ದೇಶದ ನಾಯಕತ್ವ ದುರ್ಬಲವಾಗಿದೆ ಎಂದರು.

ಸ್ಪೀಕರ್ ವಿರುದ್ದದ ವಿಪಕ್ಷಗಳ ನಿರ್ಣಯದ ಕುರಿತು ಮತ್ತಷ್ಟು ಮಾತನಾಡಿದ ಗೊಗೊಯ್, “ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಮಾತನಾಡಲು ಬಯಸಿದಾಗ, ಅವರನ್ನು ಸ್ಪೀಕರ್, ಸಭಾಧ್ಯಕ್ಷರ ಸಮಿತಿಯ ಸದಸ್ಯರು ಮತ್ತು ಆಡಳಿತ ಪಕ್ಷದ ಹಿರಿಯ ಸದಸ್ಯರು ಸೇರಿ ಸುಮಾರು 20 ಬಾರಿ ತಡೆದಿದ್ದಾರೆ ಎಂದು ಹೇಳಿದರು.

ಅವರಿಗೆ (ವಿಪಕ್ಷ ನಾಯಕ) ಪೂರ್ವಯೋಜಿತ ರೀತಿಯಲ್ಲಿ ಅಡ್ಡಿಪಡಿಸಲಾಯಿತು. ಸ್ಪೀಕರ್ ಅವರು ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಸದನ ಮತ್ತು ದೇಶದ ಜನರು ತಿಳಿದುಕೊಳ್ಳಲೇಬೇಕಾದ ಕೆಲವು ನಿರ್ಣಾಯಕ ವಿಷಯಗಳನ್ನು ಮಂಡಿಸಲು ಪ್ರಯತ್ನಿಸಿದಾಗ ವಿರೋಧ ಪಕ್ಷದ ನಾಯಕರನ್ನು ಪದೇ ಪದೇ ತಡೆಯಲಾಯಿತು ಎಂದರು.

ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪ್ರಕಟಗೊಳ್ಳದ ಪುಸ್ತಕದಲ್ಲಿನ ಕೆಲವು ಉಲ್ಲೇಖಗಳ ಬಗ್ಗೆ ಮಾತನಾಡಲು ಬಯಸಿದ್ದರು. ವರದಿಗಳ ಪ್ರಕಾರ, ಆ ಪುಸ್ತಕದಲ್ಲಿ ನರವಾಣೆ ಅವರು ರಾಜಕೀಯ ನಾಯಕತ್ವದಿಂದ ನಿರ್ದೇಶನಗಳನ್ನು ಪಡೆಯುವ ಬಗ್ಗೆ ಪ್ರಸ್ತಾಪಿಸಿದ್ದರು ಮತ್ತು ದೇಶದ ಮುಖ್ಯಸ್ಥರು ಅವರಿಗೆ “ನಿಮಗೆ ಯಾವುದು ಸರಿ ಎನಿಸುತ್ತದೆಯೋ ಅದನ್ನೇ ಮಾಡಿ” ಎಂದು ಹೇಳಿದ್ದರು ಎನ್ನಲಾಗಿದೆ. ಈ ವಿಷಯದ ಕುರಿತು ಮಾತನಾಡಲು ರಾಹುಲ್ ಗಾಂಧಿಯವರಿಗೆ ಅವಕಾಶ ನೀಡಿಲ್ಲ ಎಂದು ಗೊಗೊಯ್ ಹೇಳಿದರು.

ಈ ಹಂತದಲ್ಲಿ, ಸ್ಪೀಕರ್ ಪೀಠದಲ್ಲಿದ್ದ ಜಗದಾಂಬಿಕಾ ಪಾಲ್ ಅವರು, ಬಿರ್ಲಾ ಅವರ ವಿರುದ್ಧ ನಿರ್ಣಯವನ್ನು ತರಲು ಇರುವ ನಿರ್ದಿಷ್ಟ ಕಾರಣಗಳಿಗೆ ಮಾತ್ರ ಸೀಮಿತವಾಗಿ ಮಾತನಾಡುವಂತೆ ಗೊಗೊಯ್ ಅವರಿಗೆ ಸೂಚಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಧ್ಯಪ್ರವೇಶಿಸಿ, “ಇದು ಸ್ಪೀಕರ್ ಅವರ ಕುರಿತಾದ ಚರ್ಚೆಯಾಗಿದೆ. ಒಂದು ವೇಳೆ ವಿರೋಧ ಪಕ್ಷದವರು ಇತರ ವಿಷಯಗಳ ಬಗ್ಗೆ ಮಾತನಾಡಿದರೆ, ನಂತರ ನಾವು ಉತ್ತರಿಸುವಾಗ ಅವರು ಅಡ್ಡಿಪಡಿಸಬಾರದು ಎಂದು ಹೇಳಿದರು.

ಇದಕ್ಕೆ ತಿರುಗೇಟು ನೀಡಿದ ಗೊಗೊಯ್, ಸಂಶೋಧನಾ ವರದಿಗಳ ಪ್ರಕಾರ ಸಂಸತ್ತಿನ ಕಲಾಪಗಳ ಪ್ರತಿಗಳನ್ನು ಪರಿಶೀಲಿಸಿದರೆ, ವಿರೋಧ ಪಕ್ಷದ ಸದಸ್ಯರಿಗೆ ಅತಿ ಹೆಚ್ಚು ಬಾರಿ ಅಡ್ಡಿಪಡಿಸಿರುವುದು ಕಿರಣ್ ರಿಜಿಜು ಅವರೇ ಎಂಬುದು ತಿಳಿಯುತ್ತದೆ ಎಂದರು.

ಇದಕ್ಕೆ ಗೃಹ ಸಚಿವ ಅಮಿತ್ ಶಾ ಅವರು ಚುಟುಕಾಗಿ ಪ್ರತಿಕ್ರಿಯಿಸುತ್ತಾ, “ರಿಜಿಜು ಅವರು ಅತಿ ಹೆಚ್ಚು ಬಾರಿ ಅಡ್ಡಿಪಡಿಸಿದ್ದಾರೆ ಎಂಬುದು ನಿಜ, ಆದರೆ ಪ್ರಸ್ತುತ ಇರುವಂತಹ ವಿರೋಧ ಪಕ್ಷ ಈ ಹಿಂದೆ ಎಂದೂ ಇರಲಿಲ್ಲ ಎಂದು ಲೇವಡಿ ಮಾಡಿದರು.

ಸತತ ಅಡೆತಡೆಗಳ ನಂತರ ತಮ್ಮ ಭಾಷಣವನ್ನು ಮುಂದುವರಿಸಿದ ಗೌರವ್ ಗೊಗೊಯ್, “ಕಳೆದ ಫೆಬ್ರವರಿಯಲ್ಲಿ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಉದ್ಯಮಿಯೊಬ್ಬರ ವಿರುದ್ಧ ನಡೆಯುತ್ತಿರುವ ತನಿಖೆಯ ವಿಷಯವನ್ನು ಪ್ರಸ್ತಾಪಿಸಲು ಬಯಸಿದ್ದರು. ಈ ತನಿಖೆಯಲ್ಲಿ ಭಾರತದ ಸಚಿವರೊಬ್ಬರ ಹೆಸರನ್ನು ಸಹ ಉಲ್ಲೇಖಿಸಲಾಗಿದೆ, ಆದರೆ ಆ ವಿಷಯದ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದರು.

ರಾಹುಲ್ ಗಾಂಧಿಯವರು ಭಾರತದೊಂದಿಗೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕದ ನಡುವೆ ನಡೆಯುತ್ತಿರುವ ವ್ಯಾಪಾರ ಒಪ್ಪಂದಗಳ ಬಗ್ಗೆಯೂ ಮಾತನಾಡಲು ಬಯಸಿದ್ದರು ಎಂದು ಗೊಗೊಯ್ ತಿಳಿಸಿದರು.

ಭಾರತ ಅಮೆರಿಕದೊಂದಿಗೆ ಇಂತಹ ಒಪ್ಪಂದಕ್ಕೆ ಧಾವಿಸಲು ಕಾರಣವೇನು ಮತ್ತು ನಮ್ಮ ರೈತರಿಗೆ ಹಾನಿಕಾರಕವಾಗುವಂತಹ ಸೌಲಭ್ಯಗಳನ್ನು ಅಮೆರಿಕಗೆ ನೀಡಲು ಕಾರಣವೇನು ಎಂದು ಗಾಂಧಿಯವರು ಪ್ರಶ್ನಿಸಿದ್ದರು ಎಂದು ಗೊಗೊಯ್ ಹೇಳಿದರು.

ವಿರೋಧ ಪಕ್ಷದ ನಾಯಕರು ಪ್ರಮುಖ ವಿಷಯಗಳನ್ನು ಬೆಳಕಿಗೆ ತರಲು ಬಯಸಿದಾಗ, ಸ್ಪೀಕರ್ ಅವರು ಪುರಾವೆಗಳನ್ನು ಒದಗಿಸುವಂತೆ ಒತ್ತಾಯಿಸಿದರು ಮತ್ತು ವಿರೋಧ ಪಕ್ಷದ ನಾಯಕರು ಅದಕ್ಕೆ ಒಪ್ಪಿಕೊಂಡರು. ಆದರೂ, ಆಡಳಿತ ಪಕ್ಷದ ಸದಸ್ಯರು ಪದೇ ಪದೇ ಅದನ್ನು ವಿರೋಧಿಸಿದರು ಮತ್ತು ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಇದಕ್ಕೂ ಮೊದಲು, ಗೊಗೊಯ್ ಅವರು ನಬಮ್ ರೆಬಿಯಾ ವರ್ಸಸ್ ಉಪ ಸ್ಪೀಕರ್ ಪ್ರಕರಣವನ್ನು ಉಲ್ಲೇಖಿಸಿ, ಸ್ಪೀಕರ್ “ಉನ್ನತ ಸ್ವಾತಂತ್ರ್ಯ, ವಸ್ತುನಿಷ್ಠತೆ, ನಿಷ್ಕಳಂಕ ನ್ಯಾಯಯುತತೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸಂಪೂರ್ಣ ನಿಷ್ಪಕ್ಷಪಾತತೆಯನ್ನು” ಹೊಂದಿರಬೇಕು ಎಂಬುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ ಎಂದು ತಿಳಿಸಿದರು.

ನಾನು ಕೇಳಲು ಬಯಸುವುದೇನೆಂದರೆ, ಸ್ಪೀಕರ್ ಅವರು ಸಭಾಧ್ಯಕ್ಷರ ಸಮಿತಿಯನ್ನು ನೇಮಕ ಮಾಡಿದ್ದಾರೆ. ಆದರೆ, ಸ್ಪೀಕರ್ ಪದಚ್ಯುತಿ ನಿರ್ಣಯದ ಮೇಲಿನ ಈ ನಡಾವಳಿಗಳ ಅಧ್ಯಕ್ಷತೆಯನ್ನು ಯಾರು ವಹಿಸಬೇಕು ಎಂದು ನಿರ್ಧರಿಸಿದವರು ಯಾರು? ಈ ಕಲಾಪದ ಅಧ್ಯಕ್ಷತೆ ವಹಿಸಲು ಜಗದಂಬಿಕಾ ಪಾಲ್ ಅವರನ್ನು ನೇಮಕ ಮಾಡಿದವರು ಯಾರು?” ಎಂದು ಗೊಗೊಯ್ ಪ್ರಶ್ನಿಸಿದರು.

ವೈಯಕ್ತಿಕ ಮಟ್ಟದಲ್ಲಿ ಎಲ್ಲಾ ಸದಸ್ಯರು ಓಂ ಬಿರ್ಲಾ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ, ಆದ್ದರಿಂದಲೇ ಅವರ ವಿರುದ್ಧ ಈ ನಿರ್ಣಯವನ್ನು ತರಬೇಕಾಗಿ ಬಂದಿರುವುದು ವಿರೋಧ ಪಕ್ಷದ ಸದಸ್ಯರಿಗೂ ಬೇಸರ ತಂದಿದೆ ಎಂದು ಗೌರವ್ ಗೊಗೊಯ್ ಹೇಳಿದರು.

ಆದರೆ ಸದನದ ಗೌರವವನ್ನು ಕಾಪಾಡುವುದು ಮತ್ತು ಸಂವಿಧಾನವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ರಕ್ಷಿಸುವುದಕ್ಕಾಗಿಯಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸಂಸದರಾದ ಕೆ. ಸುರೇಶ್, ಮಳ್ಳು ರವಿ ಮತ್ತು ಮೊಹಮ್ಮದ್ ಜಾವೇದ್ ಅವರು ಸ್ಪೀಕರ್ ವಿರುದ್ಧ ನಿರ್ಣಯವನ್ನು ಮಂಡಿಸಿದರು. ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಸದಸ್ಯರು ಎದ್ದು ನಿಂತು ಬೆಂಬಲ ಸೂಚಿಸಿದ ನಂತರ, ನಿರ್ಣಯವನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು.



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...