Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

- Advertisement -
- Advertisement -

ಜುಲೈ 5, 2021ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ ಮಾನವ ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟ್ಯಾನ್‌ ಸ್ವಾಮಿ ಅವರ ಬಂಧನ, ಸೆರೆವಾಸ ಮತ್ತು ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ಭಾರತ ಸರ್ಕಾರವನ್ನು ಒತ್ತಾಯಿಸಿ ಅಮೆರಿಕದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ನಿರ್ಣಯ ಮಂಡಿಸಲಾಗಿದೆ.

ಮೂವರು ಸಂಸದರಾದ ಜಿಮ್ ಮೆಕ್‌ಗವರ್ನ್, ಆಂಡ್ರೆ ಕಾರ್ಸನ್, ಜುವಾನ್ ವರ್ಗಾಸ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿದ್ದಾರೆ.

“ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ 19 ನೇ ವಿಧಿಯಲ್ಲಿ ಬರೆಯಲ್ಪಟ್ಟಂತೆ ಮತ್ತು 1948 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿಸಿದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವು ಮೂಲಭೂತ ಮಾನವ ಹಕ್ಕು. ಇದು ಭಾರತ ಸಹಿತ ಜಗತ್ತಿನ ಎಲ್ಲಾ ಸರ್ಕಾರಗಳಿಗೂ ಅನ್ವಯವಾಗುತ್ತದೆ” ಎಂದು ನಿರ್ಣಯವು ಸ್ಪಷ್ಟಪಡಿಸಿದೆ.

“ಫಾದರ್ ಸ್ಟ್ಯಾನ್‌ ಧ್ವನಿಯಿಲ್ಲದವರಿಗೆ ಧ್ವನಿ ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅವರು ಸ್ಥಳೀಯ ಆದಿವಾಸಿ ಜನರ ಹಕ್ಕುಗಳಿಗಾಗಿ ದಣಿವರಿಯದ ವಕೀಲರಾಗಿದ್ದರು. ಯುವ ಸಮುದಾಯದ ನಾಯಕರಿಗೆ ತರಬೇತಿ ನೀಡಿದವರು ಮತ್ತು ಭಾರತದಲ್ಲಿ ಅನೇಕ ಸಮುದಾಯಗಳಿಗೆ ನ್ಯಾಯಕ್ಕಾಗಿ ಕೆಲಸ ಮಾಡಿದವರು” ಎಂದು ಸಂಸದ ವರ್ಗಾಸ್ ಹೇಳಿದ್ದಾರೆ.

“ಮಾಜಿ ಜೆಸ್ಯೂಟ್ ಆಗಿದ್ದ ಫಾದರ್ ಸ್ಟ್ಯಾನ್‌ ಅವರು ಕಸ್ಟಡಿಯಲ್ಲಿದ್ದಾಗ ನಿರಂತರ ಕಿರುಕುಳ ಎದುರಿಸಿದ್ದರು. ಅವರಿಗೆ ವೈದ್ಯಕೀಯ ಆರೈಕೆಯನ್ನು ನಿರಾಕರಿಸಿರುವುದರ ಬಗ್ಗೆ ನಾನು ಗಾಬರಿಗೊಂಡಿದ್ದೇನೆ. ಫಾದರ್ ಸ್ಟ್ಯಾನ್‌ ಒಳ್ಳೆಯ ಕೆಲಸಗಳು ಮತ್ತು ಅವರ ಆಜೀವ ಬದ್ಧತೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಈ ನಿರ್ಣಯವನ್ನು ಮಂಡಿಸುತ್ತಿದ್ದೇನೆ” ಎಂದು ವರ್ಗಾಸ್ ತಿಳಿಸಿದ್ದಾರೆ.

“ಫಾದರ್ ಸ್ಟ್ಯಾನ್‌ ಎಂದು ಕರೆಯಲ್ಪಡುವ ಫಾದರ್ ಸ್ಟಾನಿಸ್ಲಾಸ್ ಲೂರ್ದುಸ್ವಾಮಿ ಅವರು ಏಪ್ರಿಲ್ 26, 1937 ರಂದು ದಕ್ಷಿಣ ಭಾರತದ ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿ ಜಿಲ್ಲೆಯ ವೀರಗಳೂರು ಎಂಬ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಿಂದಲೂ ಜೆಸ್ಯೂಟ್ ಪಾದ್ರಿಗಳ ಕೆಲಸದಿಂದ ಪ್ರೇರಿತರಾಗಿ 1957ರಲ್ಲಿ ಧರ್ಮಶಾಸ್ತ್ರವನ್ನು ಅಧ್ಯಯನ ಮಾಡಿದರು” ಎಂದು ನಿರ್ಣಯವು ಹೇಳಿದೆ.

ನಿರ್ಣಯದ ಪ್ರಕಾರ, ಸಮಕಾಲೀನ ಭಾರತದಲ್ಲಿನ ಅತ್ಯಂತ ಮಹತ್ವದ ಆದಿವಾಸಿ ಚಳುವಳಿಗಳಲ್ಲಿ ಒಂದಾದ ಪಾತಾಳಗಡಿ ಚಳುವಳಿಯಲ್ಲಿ ಫಾದರ್ ಸ್ಟ್ಯಾನ್‌ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಆದಿವಾಸಿ ಸಮುದಾಯಗಳ ನಡುವೆ ಅವರಿಗೆ ಭಾರತೀಯ ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾಹಿತಿಯನ್ನು ಹರಡಲು ಸಹಾಯವಾಯಿತು. ಈ ಚಳುವಳಿಗೆ ಕಲ್ಲಿನ ಕೆತ್ತನೆಯ ಆದಿವಾಸಿ ಸಂಪ್ರದಾಯಗಳನ್ನು (ಉದಾಹರಣೆಗೆ, ಸಮಾಧಿಯ ಕಲ್ಲುಗಳು) ಬಳಸಲಾಗಿತ್ತು.

“ಜಾರ್ಖಂಡ್‌ನಲ್ಲಿ ಆದಿವಾಸಿ ಜನರಿಗೆ ಸ್ವ-ಆಡಳಿತವನ್ನು ಸ್ಥಾಪಿಸಲು ಅವಕಾಶ ನೀಡುವ ಭಾರತೀಯ ಸಂವಿಧಾನದ ಪಂಚಾಯತ್ ವ್ಯವಸ್ಥೆ ಅಥವಾ ಪೆಸಾ ಕಾಯ್ದೆಯ ನಿಬಂಧನೆಗಳ ಅನುಷ್ಠಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಫಾದರ್ ಸ್ಟ್ಯಾನ್‌ ಮಾಡಿದ್ದಾರೆ” ಎಂದು ನಿರ್ಣಯ ಹೇಳಿದೆ.

ಫಾದರ್ ಸ್ಟ್ಯಾನ್‌ ಸ್ವಾಮಿ ಅವರು ಜುಲೈ 5, 2021 ರಂದು ತಮ್ಮ 84 ನೇ ವಯಸ್ಸಿನಲ್ಲಿ ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿರುವಾಗ ನಿಧನರಾದರು. 2018 ರ ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಅವರ ಪಾತ್ರ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಕ್ಟೋಬರ್ 8, 2020 ರಂದು ಅವರನ್ನು ಬಂಧಿಸಲಾಗಿತ್ತು. ಪಿತೂರಿ, ದ್ವೇಷಪೂರಿತ ಭಾಷಣ ಮತ್ತು ಭಯೋತ್ಪಾದನೆ ಸೇರಿದಂತೆ ವಿವಿಧ ಅಪರಾಧಗಳ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...