Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

- Advertisement -
- Advertisement -

ಜುಲೈ 5, 2021ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ ಮಾನವ ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟ್ಯಾನ್‌ ಸ್ವಾಮಿ ಅವರ ಬಂಧನ, ಸೆರೆವಾಸ ಮತ್ತು ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ಭಾರತ ಸರ್ಕಾರವನ್ನು ಒತ್ತಾಯಿಸಿ ಅಮೆರಿಕದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ನಿರ್ಣಯ ಮಂಡಿಸಲಾಗಿದೆ.

ಮೂವರು ಸಂಸದರಾದ ಜಿಮ್ ಮೆಕ್‌ಗವರ್ನ್, ಆಂಡ್ರೆ ಕಾರ್ಸನ್, ಜುವಾನ್ ವರ್ಗಾಸ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿದ್ದಾರೆ.

“ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ 19 ನೇ ವಿಧಿಯಲ್ಲಿ ಬರೆಯಲ್ಪಟ್ಟಂತೆ ಮತ್ತು 1948 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿಸಿದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವು ಮೂಲಭೂತ ಮಾನವ ಹಕ್ಕು. ಇದು ಭಾರತ ಸಹಿತ ಜಗತ್ತಿನ ಎಲ್ಲಾ ಸರ್ಕಾರಗಳಿಗೂ ಅನ್ವಯವಾಗುತ್ತದೆ” ಎಂದು ನಿರ್ಣಯವು ಸ್ಪಷ್ಟಪಡಿಸಿದೆ.

“ಫಾದರ್ ಸ್ಟ್ಯಾನ್‌ ಧ್ವನಿಯಿಲ್ಲದವರಿಗೆ ಧ್ವನಿ ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅವರು ಸ್ಥಳೀಯ ಆದಿವಾಸಿ ಜನರ ಹಕ್ಕುಗಳಿಗಾಗಿ ದಣಿವರಿಯದ ವಕೀಲರಾಗಿದ್ದರು. ಯುವ ಸಮುದಾಯದ ನಾಯಕರಿಗೆ ತರಬೇತಿ ನೀಡಿದವರು ಮತ್ತು ಭಾರತದಲ್ಲಿ ಅನೇಕ ಸಮುದಾಯಗಳಿಗೆ ನ್ಯಾಯಕ್ಕಾಗಿ ಕೆಲಸ ಮಾಡಿದವರು” ಎಂದು ಸಂಸದ ವರ್ಗಾಸ್ ಹೇಳಿದ್ದಾರೆ.

“ಮಾಜಿ ಜೆಸ್ಯೂಟ್ ಆಗಿದ್ದ ಫಾದರ್ ಸ್ಟ್ಯಾನ್‌ ಅವರು ಕಸ್ಟಡಿಯಲ್ಲಿದ್ದಾಗ ನಿರಂತರ ಕಿರುಕುಳ ಎದುರಿಸಿದ್ದರು. ಅವರಿಗೆ ವೈದ್ಯಕೀಯ ಆರೈಕೆಯನ್ನು ನಿರಾಕರಿಸಿರುವುದರ ಬಗ್ಗೆ ನಾನು ಗಾಬರಿಗೊಂಡಿದ್ದೇನೆ. ಫಾದರ್ ಸ್ಟ್ಯಾನ್‌ ಒಳ್ಳೆಯ ಕೆಲಸಗಳು ಮತ್ತು ಅವರ ಆಜೀವ ಬದ್ಧತೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಈ ನಿರ್ಣಯವನ್ನು ಮಂಡಿಸುತ್ತಿದ್ದೇನೆ” ಎಂದು ವರ್ಗಾಸ್ ತಿಳಿಸಿದ್ದಾರೆ.

“ಫಾದರ್ ಸ್ಟ್ಯಾನ್‌ ಎಂದು ಕರೆಯಲ್ಪಡುವ ಫಾದರ್ ಸ್ಟಾನಿಸ್ಲಾಸ್ ಲೂರ್ದುಸ್ವಾಮಿ ಅವರು ಏಪ್ರಿಲ್ 26, 1937 ರಂದು ದಕ್ಷಿಣ ಭಾರತದ ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿ ಜಿಲ್ಲೆಯ ವೀರಗಳೂರು ಎಂಬ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಿಂದಲೂ ಜೆಸ್ಯೂಟ್ ಪಾದ್ರಿಗಳ ಕೆಲಸದಿಂದ ಪ್ರೇರಿತರಾಗಿ 1957ರಲ್ಲಿ ಧರ್ಮಶಾಸ್ತ್ರವನ್ನು ಅಧ್ಯಯನ ಮಾಡಿದರು” ಎಂದು ನಿರ್ಣಯವು ಹೇಳಿದೆ.

ನಿರ್ಣಯದ ಪ್ರಕಾರ, ಸಮಕಾಲೀನ ಭಾರತದಲ್ಲಿನ ಅತ್ಯಂತ ಮಹತ್ವದ ಆದಿವಾಸಿ ಚಳುವಳಿಗಳಲ್ಲಿ ಒಂದಾದ ಪಾತಾಳಗಡಿ ಚಳುವಳಿಯಲ್ಲಿ ಫಾದರ್ ಸ್ಟ್ಯಾನ್‌ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಆದಿವಾಸಿ ಸಮುದಾಯಗಳ ನಡುವೆ ಅವರಿಗೆ ಭಾರತೀಯ ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾಹಿತಿಯನ್ನು ಹರಡಲು ಸಹಾಯವಾಯಿತು. ಈ ಚಳುವಳಿಗೆ ಕಲ್ಲಿನ ಕೆತ್ತನೆಯ ಆದಿವಾಸಿ ಸಂಪ್ರದಾಯಗಳನ್ನು (ಉದಾಹರಣೆಗೆ, ಸಮಾಧಿಯ ಕಲ್ಲುಗಳು) ಬಳಸಲಾಗಿತ್ತು.

“ಜಾರ್ಖಂಡ್‌ನಲ್ಲಿ ಆದಿವಾಸಿ ಜನರಿಗೆ ಸ್ವ-ಆಡಳಿತವನ್ನು ಸ್ಥಾಪಿಸಲು ಅವಕಾಶ ನೀಡುವ ಭಾರತೀಯ ಸಂವಿಧಾನದ ಪಂಚಾಯತ್ ವ್ಯವಸ್ಥೆ ಅಥವಾ ಪೆಸಾ ಕಾಯ್ದೆಯ ನಿಬಂಧನೆಗಳ ಅನುಷ್ಠಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಫಾದರ್ ಸ್ಟ್ಯಾನ್‌ ಮಾಡಿದ್ದಾರೆ” ಎಂದು ನಿರ್ಣಯ ಹೇಳಿದೆ.

ಫಾದರ್ ಸ್ಟ್ಯಾನ್‌ ಸ್ವಾಮಿ ಅವರು ಜುಲೈ 5, 2021 ರಂದು ತಮ್ಮ 84 ನೇ ವಯಸ್ಸಿನಲ್ಲಿ ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿರುವಾಗ ನಿಧನರಾದರು. 2018 ರ ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಅವರ ಪಾತ್ರ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಕ್ಟೋಬರ್ 8, 2020 ರಂದು ಅವರನ್ನು ಬಂಧಿಸಲಾಗಿತ್ತು. ಪಿತೂರಿ, ದ್ವೇಷಪೂರಿತ ಭಾಷಣ ಮತ್ತು ಭಯೋತ್ಪಾದನೆ ಸೇರಿದಂತೆ ವಿವಿಧ ಅಪರಾಧಗಳ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...