Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ಪ್ರವೇಶ ಮತ್ತು ಉದ್ಯೋಗಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ವ್ಯಕ್ತಿಗಳಿಗೆ 10% ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ತಮಿಳುನಾಡಿನ ರಾಜಕೀಯ ಪಕ್ಷಗಳು ಶನಿವಾರ ತಿರಸ್ಕರಿಸಿವೆ ಎಂದು ಪಿಟಿಐ ವರದಿ ಮಾಡಿದೆ.

“ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಪಕ್ಷ ಎಐಎಡಿಎಂಕೆ ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ಸಭೆಯನ್ನು ಬಹಿಷ್ಕರಿಸಿವೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು.

ಸಾಂವಿಧಾನಿಕ ಪೀಠದ 3-2 ತೀರ್ಪಿನಲ್ಲಿ, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಬೇಲಾ ತ್ರಿವೇದಿ ಮತ್ತು ಜೆಬಿ ಪರ್ದಿವಾಲಾ ಅವರು ಇಡಬ್ಲ್ಯೂಎಸ್‌ ತೀರ್ಪನ್ನು ಎತ್ತಿಹಿಡಿದಿದ್ದರೆ, ತೀರ್ಪಿನ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಅವರು ಬಹುಮತದ ಅಭಿಪ್ರಾಯವನ್ನು ಒಪ್ಪಲಿಲ್ಲ.

ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಪ್ರಕಟಿಸಿತ್ತು.

“ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಬೇಕು” ಎಂದು ಸಭೆಯಲ್ಲಿ ಸೇರಿದ್ದ ರಾಜಕೀಯ ಪಕ್ಷಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಮೂಲ ಮೌಲ್ಯಗಳನ್ನು ಛಿದ್ರಗೊಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷಗಳು ತಿಳಿಸಿವೆ.

ಇಡಬ್ಲ್ಯೂಎಸ್‌ ಕೋಟಾ ಮತ್ತು ಸುಪ್ರೀಂ ಕೋರ್ಟ್ ತೀರ್ಪು

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿಯನ್ನು ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ, ಆದರೆ ವಾರ್ಷಿಕ ಆದಾಯ 8 ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಕುಟುಂಬಗಳಿಗೆ ಇಡಬ್ಲ್ಯೂಎಸ್‌ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಪರಿಚಯಿಸಿತು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ.

ಸರ್ವೋಚ್ಚ ನ್ಯಾಯಾಲಯದ ಮುಂದೆ ಅರ್ಜಿದಾರರು, ಸಮಾನತೆಯ ಹಕ್ಕು ಮತ್ತು ಮೀಸಲಾತಿಗೆ ಆಧಾರವನ್ನು ಒದಗಿಸುವ 15 ಮತ್ತು 16 ನೇ ವಿಧಿಗಳಿಗೆ ಬದಲಾವಣೆಗಳನ್ನು ಪರಿಚಯಿಸಿದ 103 ನೇ ತಿದ್ದುಪಡಿಯನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ನ ಬಹುಮತದ ತೀರ್ಪು 10% ಕೋಟಾದ ಹಂಚಿಕೆಯನ್ನು ಮಾನ್ಯ ಮಾಡಿದೆ. ಈ ತಿದ್ದುಪಡಿಯು ಸಂವಿಧಾನದಲ್ಲಿ ಶಾಸಕಾಂಗಕ್ಕೆ ನೀಡಲಾದ ಅಧಿಕಾರದೊಳಗೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತೊಂದೆಡೆ ಸಂವಿಧಾನವು ಹೊರಗಿಡಲು ಅವಕಾಶ ನೀಡದ ಕಾರಣ ಇಡಬ್ಲ್ಯೂಎಸ್‌ ವ್ಯಾಪ್ತಿಯಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳನ್ನು ಹೊರಗಿಡಲು ಸಾಧ್ಯವಿಲ್ಲ ಎಂದು ಭಿನ್ನಮತದ ತೀರ್ಪು ನೀಡಿದ ನ್ಯಾಯಾಧೀಶರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...