Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ಪ್ರವೇಶ ಮತ್ತು ಉದ್ಯೋಗಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ವ್ಯಕ್ತಿಗಳಿಗೆ 10% ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ತಮಿಳುನಾಡಿನ ರಾಜಕೀಯ ಪಕ್ಷಗಳು ಶನಿವಾರ ತಿರಸ್ಕರಿಸಿವೆ ಎಂದು ಪಿಟಿಐ ವರದಿ ಮಾಡಿದೆ.

“ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಪಕ್ಷ ಎಐಎಡಿಎಂಕೆ ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ಸಭೆಯನ್ನು ಬಹಿಷ್ಕರಿಸಿವೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು.

ಸಾಂವಿಧಾನಿಕ ಪೀಠದ 3-2 ತೀರ್ಪಿನಲ್ಲಿ, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಬೇಲಾ ತ್ರಿವೇದಿ ಮತ್ತು ಜೆಬಿ ಪರ್ದಿವಾಲಾ ಅವರು ಇಡಬ್ಲ್ಯೂಎಸ್‌ ತೀರ್ಪನ್ನು ಎತ್ತಿಹಿಡಿದಿದ್ದರೆ, ತೀರ್ಪಿನ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಅವರು ಬಹುಮತದ ಅಭಿಪ್ರಾಯವನ್ನು ಒಪ್ಪಲಿಲ್ಲ.

ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಪ್ರಕಟಿಸಿತ್ತು.

“ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಬೇಕು” ಎಂದು ಸಭೆಯಲ್ಲಿ ಸೇರಿದ್ದ ರಾಜಕೀಯ ಪಕ್ಷಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಮೂಲ ಮೌಲ್ಯಗಳನ್ನು ಛಿದ್ರಗೊಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷಗಳು ತಿಳಿಸಿವೆ.

ಇಡಬ್ಲ್ಯೂಎಸ್‌ ಕೋಟಾ ಮತ್ತು ಸುಪ್ರೀಂ ಕೋರ್ಟ್ ತೀರ್ಪು

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿಯನ್ನು ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ, ಆದರೆ ವಾರ್ಷಿಕ ಆದಾಯ 8 ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಕುಟುಂಬಗಳಿಗೆ ಇಡಬ್ಲ್ಯೂಎಸ್‌ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಪರಿಚಯಿಸಿತು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ.

ಸರ್ವೋಚ್ಚ ನ್ಯಾಯಾಲಯದ ಮುಂದೆ ಅರ್ಜಿದಾರರು, ಸಮಾನತೆಯ ಹಕ್ಕು ಮತ್ತು ಮೀಸಲಾತಿಗೆ ಆಧಾರವನ್ನು ಒದಗಿಸುವ 15 ಮತ್ತು 16 ನೇ ವಿಧಿಗಳಿಗೆ ಬದಲಾವಣೆಗಳನ್ನು ಪರಿಚಯಿಸಿದ 103 ನೇ ತಿದ್ದುಪಡಿಯನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ನ ಬಹುಮತದ ತೀರ್ಪು 10% ಕೋಟಾದ ಹಂಚಿಕೆಯನ್ನು ಮಾನ್ಯ ಮಾಡಿದೆ. ಈ ತಿದ್ದುಪಡಿಯು ಸಂವಿಧಾನದಲ್ಲಿ ಶಾಸಕಾಂಗಕ್ಕೆ ನೀಡಲಾದ ಅಧಿಕಾರದೊಳಗೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತೊಂದೆಡೆ ಸಂವಿಧಾನವು ಹೊರಗಿಡಲು ಅವಕಾಶ ನೀಡದ ಕಾರಣ ಇಡಬ್ಲ್ಯೂಎಸ್‌ ವ್ಯಾಪ್ತಿಯಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳನ್ನು ಹೊರಗಿಡಲು ಸಾಧ್ಯವಿಲ್ಲ ಎಂದು ಭಿನ್ನಮತದ ತೀರ್ಪು ನೀಡಿದ ನ್ಯಾಯಾಧೀಶರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...