Homeಕರ್ನಾಟಕಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

- Advertisement -
- Advertisement -

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾದ ಸರಣಿ ಕೊಲೆಗಳ ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸುವುದರ ಜೊತೆಗೆ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸಲು ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಮ್ಮತದ ನಿರ್ಣಯ ತೆಗೆದುಕೊಂಡಿವೆ. ನ್ಯಾಯಾಂಗದ ಪ್ರಕ್ರಿಯೆಯನ್ನು ಗೌರವಿಸುತ್ತಲೇ, ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಗೆ ಬದ್ಧವಾಗಿರುವುದಾಗಿ ಅವರು ಘೋಷಿಸಿದ್ದಾರೆ.

ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್, ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿದಂತೆ ಒಟ್ಟು 8,842 ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಅವರು ಕೋರಿದ್ದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ನೇರ ಆರೋಪಗಳು ಇಲ್ಲದಿದ್ದರೂ, ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ಅವರ ಮುಖ್ಯ ವಾದವಾಗಿತ್ತು.

ಈ ವಾದವನ್ನು ಆಲಿಸಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿದ್ದರು. ಈ ಆದೇಶದ ಅನ್ವಯ, ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಅಥವಾ ಹಂಚದಂತೆ ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.

ಈ ಆದೇಶದ ಹಿನ್ನೆಲೆಯಲ್ಲಿ, ಬೆಂಗಳೂರಿನ ಈದಿನ ಡಾಟ್ ಕಾಮ್ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ಯೂಟ್ಯೂಬರ್‌ಗಳು ಮತ್ತು ಡಿಜಿಟಲ್ ಮಾಧ್ಯಮಗಳ ಪ್ರತಿನಿಧಿಗಳ ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ, ನ್ಯಾಯಾಲಯದ ಆದೇಶವನ್ನು ಪಾಲಿಸುವ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ಒಗ್ಗಟ್ಟಿನಿಂದ ಮುಂದುವರಿಸುವ ಬಗ್ಗೆ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳ ಜೊತೆಗೆ, “ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯಕ್ಕೆ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ” ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದರು. “ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ. ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲ ಎನ್ನುವುದನ್ನು ನಾವು ಅರಿತಿದ್ದೇವೆ. ಹೀಗಾಗಿ, ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ” ಎಂಬ ನಿರ್ಣಯವನ್ನು ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ತೆಗೆದುಕೊಂಡರು.

ಸಭೆಯಲ್ಲಿ ದ ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್, ಪೂಜಾ ಪ್ರಸನ್ನ, ಈ ದಿನ ಟಿವಿಯ ಡಾ. ಬಸವರಾಜು ಬಿ.ಸಿ, ಈದಿನ.ಕಾಮ್‌ ಸಂಪಾದಕರಾದ ಬಸವರಾಜು ಮೇಗಲಕೇರಿ, ವಾರ್ತಾಭಾರತಿಯ ಆಝಾದ್ ಕಂಡಿಗ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶುರಾಮ್, ಪ್ರತಿಧ್ವನಿಯ ಶಿವಕುಮಾರ್, ನ್ಯಾಷನಲ್ ಟಿವಿಯ ಮಂಜು ಬಣಗೆರೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಯೂಟ್ಯೂಬರ್‌ಗಳಾದ ಕಲಾ ಮಾಧ್ಯಮ ಪರಮೇಶ್ವರ್, ರಾ ಚಿಂತನ್, ಕುಡ್ಲ ರ‍್ಯಾಂಪೇಜ್‌ ಅಜಯ್‌ ಅಂಚನ್, ಪತ್ರಕರ್ತರಾದ ಕನ್ನಡ ಪ್ಲಾನೆಟ್ ದಿನೇಶ್ ಕುಮಾರ್ ದಿನೂ, V4 ನ್ಯೂಸ್‌ನ ಲಕ್ಷ್ಮಣ್ ಕುಂದರ್, ಪೀಪಲ್ ಮೀಡಿಯಾದ ಸುರಭಿ ರೇಣುಕಾಂಬಿಕೆ, ಪ್ರಸ್ತುತ ನ್ಯೂಸ್‌ನ ಬಶೀರ್ ಅಡ್ಯನಡ್ಕ, ಸನ್ಮಾರ್ಗ ನ್ಯೂಸ್‌ನ ಆರ್ ಎ ಲೋಹಾನಿ, ಆಶಾ ಮುಸ್ಸಂಜೆ ಸಮಯ, ಪೊಲೀಸ್ ವಾಣಿ ರಾಘವೇಂದ್ರಚಾರಿ, ದ ಪಾಲಿಟಿಕ್‌ನ ಸಿದ್ದಪ್ಪ ಮೂಲಗೆ, ಜನಶಕ್ತಿ ಮೀಡಿಯಾದ ಗುರುರಾಜ್ ದೇಸಾಯಿ, ತ್ರಿವರ್ಣ ನ್ಯೂಸ್ ಉಮರ್ ಫಾರೂಕ್, ಜಗದೀಶ್ ಕನ್ನಡ ಜಾಣ ಜಾಣೆಯರು, ಕನ್ನಡ ವನ್‌ನ ಭಾಗ್ಯನಾರಾಯಣ ಬೊಗ್ಗವರಪು, ಗೌರಿ ಮೀಡಿಯಾದ ಚಂದ್ರು ತರಹುಣಸೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ, ಡಾ. ವಾಸು ಎಚ್‌ ವಿ, ಹೇಮಾ ವೆಂಕಟ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಕರಣದ ಹಿನ್ನೆಲೆ

2012ರಲ್ಲಿ ನಡೆದ ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಮಟ್ಟದ ಆಕ್ರೋಶ ಮತ್ತು ಸಾರ್ವಜನಿಕ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯಲ್ಲಿನ ಲೋಪಗಳ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಡಿಜಿಟಲ್ ವೇದಿಕೆಗಳಲ್ಲಿ “ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳು ನಡೆದಿವೆ, ಮತ್ತು ನೂರಾರು ಮೃತದೇಹಗಳನ್ನು ಅಲ್ಲಿ ಹೂತು ಹಾಕಲಾಗಿದೆ” ಎಂಬ ಗಂಭೀರ ಆರೋಪಗಳು ಪುನಃ ಮುಂಚೂಣಿಗೆ ಬಂದವು. ಈ ಆರೋಪಗಳು ಧರ್ಮಸ್ಥಳದ ಆಡಳಿತ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಸದಸ್ಯರ ವಿರುದ್ಧವೂ ಬೆರಳು ಮಾಡಿ ತೋರುತ್ತಿದ್ದವು. ಈ ಆರೋಪಗಳ ಪ್ರಸಾರದಿಂದ ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳಿಗೆ ಮಾನಹಾನಿಯಾಗುತ್ತಿದೆ ಎಂದು ಭಾವಿಸಿದ ಧರ್ಮಾಧಿಕಾರಿಗಳ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, ಆನ್‌ಲೈನ್‌ನಲ್ಲಿ ಹರಡಿರುವ ಸಾವಿರಾರು ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಮತ್ತು ಮಾಧ್ಯಮಗಳು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡದಂತೆ ತಡೆಯುವಂತೆ ಅವರು ಕೋರಿದ್ದರು.

ನ್ಯಾಯಾಲಯವು ಹರ್ಷೇಂದ್ರ ಕುಮಾರ್ ಅವರ ಮನವಿಯನ್ನು ಪುರಸ್ಕರಿಸಿ, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿತು. ಈ ಆದೇಶವು ಡಿಜಿಟಲ್, ಸಾಮಾಜಿಕ ಮತ್ತು ಮುದ್ರಣ ಮಾಧ್ಯಮಗಳ ಮೇಲೆ ವ್ಯಾಪಕ ನಿರ್ಬಂಧಗಳನ್ನು ಹೇರಿತು. ಈ ಆದೇಶವು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು ಮತ್ತು ಕರ್ನಾಟಕ ಹೈಕೋರ್ಟ್ ಕೂಡ ಈ ಆದೇಶದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಈ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಹೊರತರಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಟ್ಟಾಗಿ ಈ ನಿರ್ಣಯವನ್ನು ಕೈಗೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...