Homeಕರ್ನಾಟಕಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

- Advertisement -
- Advertisement -

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾದ ಸರಣಿ ಕೊಲೆಗಳ ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸುವುದರ ಜೊತೆಗೆ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸಲು ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಮ್ಮತದ ನಿರ್ಣಯ ತೆಗೆದುಕೊಂಡಿವೆ. ನ್ಯಾಯಾಂಗದ ಪ್ರಕ್ರಿಯೆಯನ್ನು ಗೌರವಿಸುತ್ತಲೇ, ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಗೆ ಬದ್ಧವಾಗಿರುವುದಾಗಿ ಅವರು ಘೋಷಿಸಿದ್ದಾರೆ.

ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್, ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿದಂತೆ ಒಟ್ಟು 8,842 ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಅವರು ಕೋರಿದ್ದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ನೇರ ಆರೋಪಗಳು ಇಲ್ಲದಿದ್ದರೂ, ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ಅವರ ಮುಖ್ಯ ವಾದವಾಗಿತ್ತು.

ಈ ವಾದವನ್ನು ಆಲಿಸಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿದ್ದರು. ಈ ಆದೇಶದ ಅನ್ವಯ, ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಅಥವಾ ಹಂಚದಂತೆ ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.

ಈ ಆದೇಶದ ಹಿನ್ನೆಲೆಯಲ್ಲಿ, ಬೆಂಗಳೂರಿನ ಈದಿನ ಡಾಟ್ ಕಾಮ್ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ಯೂಟ್ಯೂಬರ್‌ಗಳು ಮತ್ತು ಡಿಜಿಟಲ್ ಮಾಧ್ಯಮಗಳ ಪ್ರತಿನಿಧಿಗಳ ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ, ನ್ಯಾಯಾಲಯದ ಆದೇಶವನ್ನು ಪಾಲಿಸುವ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ಒಗ್ಗಟ್ಟಿನಿಂದ ಮುಂದುವರಿಸುವ ಬಗ್ಗೆ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳ ಜೊತೆಗೆ, “ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯಕ್ಕೆ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ” ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದರು. “ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ. ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲ ಎನ್ನುವುದನ್ನು ನಾವು ಅರಿತಿದ್ದೇವೆ. ಹೀಗಾಗಿ, ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ” ಎಂಬ ನಿರ್ಣಯವನ್ನು ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ತೆಗೆದುಕೊಂಡರು.

ಸಭೆಯಲ್ಲಿ ದ ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್, ಪೂಜಾ ಪ್ರಸನ್ನ, ಈ ದಿನ ಟಿವಿಯ ಡಾ. ಬಸವರಾಜು ಬಿ.ಸಿ, ಈದಿನ.ಕಾಮ್‌ ಸಂಪಾದಕರಾದ ಬಸವರಾಜು ಮೇಗಲಕೇರಿ, ವಾರ್ತಾಭಾರತಿಯ ಆಝಾದ್ ಕಂಡಿಗ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶುರಾಮ್, ಪ್ರತಿಧ್ವನಿಯ ಶಿವಕುಮಾರ್, ನ್ಯಾಷನಲ್ ಟಿವಿಯ ಮಂಜು ಬಣಗೆರೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಯೂಟ್ಯೂಬರ್‌ಗಳಾದ ಕಲಾ ಮಾಧ್ಯಮ ಪರಮೇಶ್ವರ್, ರಾ ಚಿಂತನ್, ಕುಡ್ಲ ರ‍್ಯಾಂಪೇಜ್‌ ಅಜಯ್‌ ಅಂಚನ್, ಪತ್ರಕರ್ತರಾದ ಕನ್ನಡ ಪ್ಲಾನೆಟ್ ದಿನೇಶ್ ಕುಮಾರ್ ದಿನೂ, V4 ನ್ಯೂಸ್‌ನ ಲಕ್ಷ್ಮಣ್ ಕುಂದರ್, ಪೀಪಲ್ ಮೀಡಿಯಾದ ಸುರಭಿ ರೇಣುಕಾಂಬಿಕೆ, ಪ್ರಸ್ತುತ ನ್ಯೂಸ್‌ನ ಬಶೀರ್ ಅಡ್ಯನಡ್ಕ, ಸನ್ಮಾರ್ಗ ನ್ಯೂಸ್‌ನ ಆರ್ ಎ ಲೋಹಾನಿ, ಆಶಾ ಮುಸ್ಸಂಜೆ ಸಮಯ, ಪೊಲೀಸ್ ವಾಣಿ ರಾಘವೇಂದ್ರಚಾರಿ, ದ ಪಾಲಿಟಿಕ್‌ನ ಸಿದ್ದಪ್ಪ ಮೂಲಗೆ, ಜನಶಕ್ತಿ ಮೀಡಿಯಾದ ಗುರುರಾಜ್ ದೇಸಾಯಿ, ತ್ರಿವರ್ಣ ನ್ಯೂಸ್ ಉಮರ್ ಫಾರೂಕ್, ಜಗದೀಶ್ ಕನ್ನಡ ಜಾಣ ಜಾಣೆಯರು, ಕನ್ನಡ ವನ್‌ನ ಭಾಗ್ಯನಾರಾಯಣ ಬೊಗ್ಗವರಪು, ಗೌರಿ ಮೀಡಿಯಾದ ಚಂದ್ರು ತರಹುಣಸೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ, ಡಾ. ವಾಸು ಎಚ್‌ ವಿ, ಹೇಮಾ ವೆಂಕಟ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಕರಣದ ಹಿನ್ನೆಲೆ

2012ರಲ್ಲಿ ನಡೆದ ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಮಟ್ಟದ ಆಕ್ರೋಶ ಮತ್ತು ಸಾರ್ವಜನಿಕ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯಲ್ಲಿನ ಲೋಪಗಳ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಡಿಜಿಟಲ್ ವೇದಿಕೆಗಳಲ್ಲಿ “ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳು ನಡೆದಿವೆ, ಮತ್ತು ನೂರಾರು ಮೃತದೇಹಗಳನ್ನು ಅಲ್ಲಿ ಹೂತು ಹಾಕಲಾಗಿದೆ” ಎಂಬ ಗಂಭೀರ ಆರೋಪಗಳು ಪುನಃ ಮುಂಚೂಣಿಗೆ ಬಂದವು. ಈ ಆರೋಪಗಳು ಧರ್ಮಸ್ಥಳದ ಆಡಳಿತ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಸದಸ್ಯರ ವಿರುದ್ಧವೂ ಬೆರಳು ಮಾಡಿ ತೋರುತ್ತಿದ್ದವು. ಈ ಆರೋಪಗಳ ಪ್ರಸಾರದಿಂದ ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳಿಗೆ ಮಾನಹಾನಿಯಾಗುತ್ತಿದೆ ಎಂದು ಭಾವಿಸಿದ ಧರ್ಮಾಧಿಕಾರಿಗಳ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, ಆನ್‌ಲೈನ್‌ನಲ್ಲಿ ಹರಡಿರುವ ಸಾವಿರಾರು ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಮತ್ತು ಮಾಧ್ಯಮಗಳು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡದಂತೆ ತಡೆಯುವಂತೆ ಅವರು ಕೋರಿದ್ದರು.

ನ್ಯಾಯಾಲಯವು ಹರ್ಷೇಂದ್ರ ಕುಮಾರ್ ಅವರ ಮನವಿಯನ್ನು ಪುರಸ್ಕರಿಸಿ, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿತು. ಈ ಆದೇಶವು ಡಿಜಿಟಲ್, ಸಾಮಾಜಿಕ ಮತ್ತು ಮುದ್ರಣ ಮಾಧ್ಯಮಗಳ ಮೇಲೆ ವ್ಯಾಪಕ ನಿರ್ಬಂಧಗಳನ್ನು ಹೇರಿತು. ಈ ಆದೇಶವು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು ಮತ್ತು ಕರ್ನಾಟಕ ಹೈಕೋರ್ಟ್ ಕೂಡ ಈ ಆದೇಶದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಈ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಹೊರತರಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಟ್ಟಾಗಿ ಈ ನಿರ್ಣಯವನ್ನು ಕೈಗೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...