Homeಮುಖಪುಟಪ್ರಧಾನಿಯನ್ನು ಗೌರವಿಸುತ್ತಾ, ನಮ್ಮ ಸ್ವಾಭಿಮಾನವನ್ನೂ ರಕ್ಷಿಸುತ್ತೇವೆ: ರಾಕೇಶ್ ಟಿಕಾಯತ್ ಸಹೋದರ ನರೇಶ್ ಟಿಕಾಯತ್

ಪ್ರಧಾನಿಯನ್ನು ಗೌರವಿಸುತ್ತಾ, ನಮ್ಮ ಸ್ವಾಭಿಮಾನವನ್ನೂ ರಕ್ಷಿಸುತ್ತೇವೆ: ರಾಕೇಶ್ ಟಿಕಾಯತ್ ಸಹೋದರ ನರೇಶ್ ಟಿಕಾಯತ್

"ಜನವರಿ 26ರಂದು ನಡೆದ ಹಿಂಸಾಚಾರ ಪಿತೂರಿಯ ಭಾಗವಾಗಿತ್ತು. ತ್ರಿವರ್ಣ ಧ್ವಜವು ಎಲ್ಲ ಧ್ವಜಗಳಿಗಿಂತ ಮೇಲಿರುತ್ತದೆ. ಅದರ ಗೌರವಕ್ಕೆ ಧಕ್ಕೆಯಾಗಲು ಎಂದಿಗೂ ಬಿಡುವುದಿಲ್ಲ. ಅಂಥ ಕೆಲಸವನ್ನು ಸಹಿಸುವುದೂ ಇಲ್ಲ" ಎಂದು ಸ್ಪಷ್ಟಪಡಿಸಿದರು.

- Advertisement -
- Advertisement -

“ಪ್ರತಿಭಟನಾ ನಿರತ ರೈತರು ಪ್ರಧಾನಿಯ ಘನತೆಯನ್ನು ಗೌರವಿಸುತ್ತಾರೆ, ಅದರ ಜೊತೆ ತಮ್ಮ ಸ್ವಾಭಿಮಾನವನ್ನೂ ರಕ್ಷಿಸಿಕೊಳ್ಳುತ್ತಾರೆ” ಎಂದು ರೈತ ಮುಖಂಡ ನರೇಶ್ ಟಿಕಾಯತ್ (ರಾಕೇಶ್ ಟಿಕಾಯತ್ ಅವರ ಸಹೋದರ ಮತ್ತು ಬಲಿಯನ್ ಖಾಪ್ ಪಂಚಾಯತ್ ಮುಖಂಡ) ಹೇಳಿದ್ದಾರೆ.

ಗಾಜಿಪುರ ಗಡಿಯಲ್ಲಿ ಮಾತನಾಡಿದ ಅವರು “ನಮಗೆ ಒಂದು ಗೌರವಯುತ ಪರಿಹಾರ ಸಿಗಬೇಕು. ಅಲ್ಲಿವರೆಗೂ ನಾವು ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಎಂಥ ಪರಿಸ್ಥಿತಿಯಲ್ಲೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

“ನಾವು ಪ್ರಧಾನಿಯವರ ಘನತೆಯನ್ನು ಗೌರವಿಸುತ್ತೇವೆ. ಸರ್ಕಾರ ಎಂದೂ ರೈತರ ಎದುರು ತಲೆಬಾಗಬೇಕೆಂದು ನಾವು ಬಯಸುವುದಿಲ್ಲ. ಆದರೆ ರೈತರ ಸ್ವಾಭಿಮಾನವನ್ನು ರಕ್ಷಿಸುತ್ತೇವೆ. ಸಮಸ್ಯೆಯ ಪರಿಹಾರಕ್ಕಾಗಿ ದಾರಿಯನ್ನು ಹುಡುಕಬೇಕು. ಮಾತುಕತೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ, “ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಕ್ಕೆ ತೋರಿದ ಅಗೌರವದಿಂದ ದೇಶದ ಜನರಿಗೆ ತೀವ್ರ ನೋವಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

“ಜನವರಿ 26ರಂದು ನಡೆದ ಹಿಂಸಾಚಾರ ಪಿತೂರಿಯ ಭಾಗವಾಗಿತ್ತು. ತ್ರಿವರ್ಣ ಧ್ವಜವು ಎಲ್ಲ ಧ್ವಜಗಳಿಗಿಂತ ಮೇಲಿರುತ್ತದೆ. ಅದರ ಗೌರವಕ್ಕೆ ಧಕ್ಕೆಯಾಗಲು ಎಂದಿಗೂ ಬಿಡುವುದಿಲ್ಲ. ಅಂಥ ಕೆಲಸವನ್ನು ಸಹಿಸುವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಂದುವರಿದು, “ಸರ್ಕಾರ ಮೊದಲು ನಮ್ಮ ರೈತರನ್ನು ಬಿಡುಗಡೆಗೊಳಿಸಿ, ಮಾತುಕತೆ ಪೂರಕ ವಾತಾವರಣವನ್ನು ಸಿದ್ಧಗೊಳಿಸಬೇಕು” ಎಂದು ಒತ್ತಾಯಿಸಿದರು.

ಟ್ರ್ಯಾಕ್ಟರ್ ಪೆರೇಡ್ ವೇಳೆ ಅಹಿತಕರ ಘಟನೆಗ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರತಿಭಟನಕಾರರ ವಿರುದ್ಧ 40 ಪ್ರಕರಣಗಳನ್ನು ದಾಖಲಿಸಿದ್ದು, 80 ಮಂದಿಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...