Homeಚಳವಳಿಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

- Advertisement -
- Advertisement -

ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ನಮ್ಮ ಪ್ರಮುಖ ಅಜೆಂಡಾ ‘ಪೂರ್ಣ ರಾಜ್ಯತ್ವ’ವನ್ನು ಮರುಸ್ಥಾಪಿಸುವುದೆ ಆಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಅವರು ಸೋಮವಾರ ಹೇಳಿದ್ದಾರೆ. 2019 ರ ಆಗಸ್ಟ್‌ ತಿಂಗಳಲ್ಲಿ ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದು ಮಾಡಿ ರಾಜ್ಯವನ್ನು ವಿಭಜನೆ ಮಾಡಿದ ನಂತರ ಒಕ್ಕೂಟ ಸರ್ಕಾರವು ನಡೆಸುತ್ತಿರುವ ಮೊದಲ ಸಭೆಯಾಗಿದೆ ಇದು.

ರಾಜ್ಯತ್ವವನ್ನು ಮರುಪಡೆಯುವುದೆ ಪ್ರಮುಖ ಗುರಿ ಎಂದು ಗುಲಾಮ್ ನಬಿ ಹೇಳಿದ್ದಾರಾದರೂ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಸಭೆಯಲ್ಲಿ ಒತ್ತಾಯಿಸುತ್ತಾರೆಯೆ ಎಂದು ಸ್ಪಷ್ಟಪಡಿಸಿಲ್ಲ.

“ಸಭೆಯಲ್ಲಿ ಎಲ್ಲಕ್ಕಿಂತ ಮುಖ್ಯ ಬೇಡಿಕೆ ರಾಜ್ಯತ್ವದ್ದಾಗಿದೆ. ಸಭೆಯಲ್ಲಿ ಅದು ನಮ್ಮ ಪ್ರಮುಖ ಅಜೆಂಡಾವಾಗಿದೆ. ಈ ಬಗ್ಗೆ ಸದನದಲ್ಲೂ ಭರವಸೆ ನೀಡಲಾಯಿತು. ನಮ್ಮ ಬೇಡಿಕೆ ಪೂರ್ಣ ಪ್ರಮಾಣದ ರಾಜ್ಯತ್ವವೆ ಹೊರತು ಲೆಫ್ಟಿನೆಂಟ್‌ ಗವರ್ನರ್‌ ರಾಜ್ಯತ್ವವಲ್ಲ” ಎಂದು ಗುಲಾಮ್‌ ನಬಿ ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

370 ನೇ ವಿಧಿ ಮರು ಸ್ಥಾಪನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾನು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚಿಸುತ್ತಿದ್ದೇನೆ. ಅದರ ನಂತರ ನಮ್ಮ ಪಕ್ಷದ ಅಧ್ಯಕ್ಷೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ನೇರವಾಗಿ ಅಥವಾ ಪರೋಕ್ಷವಾಗಿ ಇದರಲ್ಲಿ ಭಾಗಿಯಾಗಿದ್ದ ಸಹೋದ್ಯೋಗಿಗಳಿಂದ ಮಾರ್ಗದರ್ಶನ ಪಡೆಯುತ್ತೇನೆ. ಆದ್ದರಿಂದ ಈ ಬಗ್ಗೆ ತೀರಾ ಮುಂಚೆಯೆ ಹೇಳುವುದು ಸರಿಯಲ್ಲ. ಆದರೆ ಪೂರ್ಣ ರಾಜ್ಯತ್ವವೆ ಸಭೆಯ ಪ್ರಮುಖ ಆಜೆಂಡಾವಾಗಿರಲಿದೆ. ಸಮಾಲೋಚನೆಗಳು ಮತ್ತು ಚರ್ಚೆಗಳ ನಂತರ ನಾವು ನಮ್ಮ ನಿಲುವನ್ನು, ನೀತಿಯನ್ನು ರೂಪಿಸುತ್ತೇವೆ” ಎಂದು ಗುಲಾಮ್ ನಬಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಬಗ್ಗೆ ಪಕ್ಷದ ನಿಲುವಿಗೆ ಅಂತಿಮ ಆಕಾರ ನೀಡಲು ಕಾಂಗ್ರೆಸ್ಸಿನ ‘ಜಮ್ಮು ಕಾಶ್ಮೀರ ನೀತಿ ಯೋಜನಾ ಗುಂಪು’ ಮಂಗಳವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ. ಈ ಗುಂಪಿನಲ್ಲಿ ಗುಲಾಮ್ ನಬಿ ಅವರಲ್ಲದೆ, ಮನಮೋಹನ್ ಸಿಂಗ್, ಕರಣ್ ಸಿಂಗ್, ಪಿ.ಚಿದಂಬರಂ, ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್, ತಾರಿಕ್ ಹಮೀದ್ ಕರ್ರಾ ಮತ್ತು ಗುಲಾಮ್ ಅಹ್ಮದ್ ಮಿರ್ ಕೂಡಾ ಇದ್ದಾರೆ.

ಸಭೆಯನ್ನು ಭೌತಿಕವಾಗಿ ನಡೆಸುವುದಕ್ಕಾಗಿ ಒಕ್ಕೂಟ ಸರ್ಕಾರವನ್ನು ಅವರು ಶ್ಲಾಘಿಸಿದ್ದಾರೆ. ಈ ಸಭೆಯಲ್ಲಿ ನಾವು ಮುಕ್ತವಾಗಿ ಚರ್ಚಿಸಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿಯ ಸಭೆಗೆ ಕಾಂಗ್ರೆಸ್‌ನಿಂದ ಗುಲಾಮ್ ನಬಿ ಅವರ ಹೊರತಾಗಿ ಪಕ್ಷದ ಮತ್ತೊಬ್ಬ ಮುಖಂಡ ಗುಲಾಮ್ ಅಹ್ಮದ್ ಮಿರ್ ಅವರನ್ನೂ ಆಹ್ವಾನಿಸಲಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ 370 ನೇ ವಿಧಿಯನ್ನು ರದ್ದುಪಡಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಒಕ್ಕೂಟ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದರು.

ಈ ನಡುವೆ ಜಮ್ಮು ಕಾಶ್ಮೀರದ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಒಕ್ಕೂಟವು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಗುರುವಾರ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.

“ಮೆಹಬೂಬಾ ಮುಫ್ತಿ, ಯೂಸುಫ್‌ ತರಿಗಾಮಿ ಮತ್ತು ನಾನು ಪ್ರಧಾನಿ ಕರೆದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ನಮ್ಮ ಅಜೆಂಡಾವನ್ನು ಪ್ರಧಾನಿ ಮತ್ತು ಗೃಹ ಸಚಿವರ ಮುಂದೆ ಇಡಬೇಕೆಂದು ನಾವು ಭಾವಿಸುತ್ತೇವೆ” ಎಂದು ಡಾ. ಅಬ್ದುಲ್ಲಾ ಇಂದಿನ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...