Homeಚಳವಳಿಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

- Advertisement -
- Advertisement -

ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ನಮ್ಮ ಪ್ರಮುಖ ಅಜೆಂಡಾ ‘ಪೂರ್ಣ ರಾಜ್ಯತ್ವ’ವನ್ನು ಮರುಸ್ಥಾಪಿಸುವುದೆ ಆಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಅವರು ಸೋಮವಾರ ಹೇಳಿದ್ದಾರೆ. 2019 ರ ಆಗಸ್ಟ್‌ ತಿಂಗಳಲ್ಲಿ ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದು ಮಾಡಿ ರಾಜ್ಯವನ್ನು ವಿಭಜನೆ ಮಾಡಿದ ನಂತರ ಒಕ್ಕೂಟ ಸರ್ಕಾರವು ನಡೆಸುತ್ತಿರುವ ಮೊದಲ ಸಭೆಯಾಗಿದೆ ಇದು.

ರಾಜ್ಯತ್ವವನ್ನು ಮರುಪಡೆಯುವುದೆ ಪ್ರಮುಖ ಗುರಿ ಎಂದು ಗುಲಾಮ್ ನಬಿ ಹೇಳಿದ್ದಾರಾದರೂ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಸಭೆಯಲ್ಲಿ ಒತ್ತಾಯಿಸುತ್ತಾರೆಯೆ ಎಂದು ಸ್ಪಷ್ಟಪಡಿಸಿಲ್ಲ.

“ಸಭೆಯಲ್ಲಿ ಎಲ್ಲಕ್ಕಿಂತ ಮುಖ್ಯ ಬೇಡಿಕೆ ರಾಜ್ಯತ್ವದ್ದಾಗಿದೆ. ಸಭೆಯಲ್ಲಿ ಅದು ನಮ್ಮ ಪ್ರಮುಖ ಅಜೆಂಡಾವಾಗಿದೆ. ಈ ಬಗ್ಗೆ ಸದನದಲ್ಲೂ ಭರವಸೆ ನೀಡಲಾಯಿತು. ನಮ್ಮ ಬೇಡಿಕೆ ಪೂರ್ಣ ಪ್ರಮಾಣದ ರಾಜ್ಯತ್ವವೆ ಹೊರತು ಲೆಫ್ಟಿನೆಂಟ್‌ ಗವರ್ನರ್‌ ರಾಜ್ಯತ್ವವಲ್ಲ” ಎಂದು ಗುಲಾಮ್‌ ನಬಿ ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

370 ನೇ ವಿಧಿ ಮರು ಸ್ಥಾಪನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾನು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚಿಸುತ್ತಿದ್ದೇನೆ. ಅದರ ನಂತರ ನಮ್ಮ ಪಕ್ಷದ ಅಧ್ಯಕ್ಷೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ನೇರವಾಗಿ ಅಥವಾ ಪರೋಕ್ಷವಾಗಿ ಇದರಲ್ಲಿ ಭಾಗಿಯಾಗಿದ್ದ ಸಹೋದ್ಯೋಗಿಗಳಿಂದ ಮಾರ್ಗದರ್ಶನ ಪಡೆಯುತ್ತೇನೆ. ಆದ್ದರಿಂದ ಈ ಬಗ್ಗೆ ತೀರಾ ಮುಂಚೆಯೆ ಹೇಳುವುದು ಸರಿಯಲ್ಲ. ಆದರೆ ಪೂರ್ಣ ರಾಜ್ಯತ್ವವೆ ಸಭೆಯ ಪ್ರಮುಖ ಆಜೆಂಡಾವಾಗಿರಲಿದೆ. ಸಮಾಲೋಚನೆಗಳು ಮತ್ತು ಚರ್ಚೆಗಳ ನಂತರ ನಾವು ನಮ್ಮ ನಿಲುವನ್ನು, ನೀತಿಯನ್ನು ರೂಪಿಸುತ್ತೇವೆ” ಎಂದು ಗುಲಾಮ್ ನಬಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಬಗ್ಗೆ ಪಕ್ಷದ ನಿಲುವಿಗೆ ಅಂತಿಮ ಆಕಾರ ನೀಡಲು ಕಾಂಗ್ರೆಸ್ಸಿನ ‘ಜಮ್ಮು ಕಾಶ್ಮೀರ ನೀತಿ ಯೋಜನಾ ಗುಂಪು’ ಮಂಗಳವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ. ಈ ಗುಂಪಿನಲ್ಲಿ ಗುಲಾಮ್ ನಬಿ ಅವರಲ್ಲದೆ, ಮನಮೋಹನ್ ಸಿಂಗ್, ಕರಣ್ ಸಿಂಗ್, ಪಿ.ಚಿದಂಬರಂ, ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್, ತಾರಿಕ್ ಹಮೀದ್ ಕರ್ರಾ ಮತ್ತು ಗುಲಾಮ್ ಅಹ್ಮದ್ ಮಿರ್ ಕೂಡಾ ಇದ್ದಾರೆ.

ಸಭೆಯನ್ನು ಭೌತಿಕವಾಗಿ ನಡೆಸುವುದಕ್ಕಾಗಿ ಒಕ್ಕೂಟ ಸರ್ಕಾರವನ್ನು ಅವರು ಶ್ಲಾಘಿಸಿದ್ದಾರೆ. ಈ ಸಭೆಯಲ್ಲಿ ನಾವು ಮುಕ್ತವಾಗಿ ಚರ್ಚಿಸಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿಯ ಸಭೆಗೆ ಕಾಂಗ್ರೆಸ್‌ನಿಂದ ಗುಲಾಮ್ ನಬಿ ಅವರ ಹೊರತಾಗಿ ಪಕ್ಷದ ಮತ್ತೊಬ್ಬ ಮುಖಂಡ ಗುಲಾಮ್ ಅಹ್ಮದ್ ಮಿರ್ ಅವರನ್ನೂ ಆಹ್ವಾನಿಸಲಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ 370 ನೇ ವಿಧಿಯನ್ನು ರದ್ದುಪಡಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಒಕ್ಕೂಟ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದರು.

ಈ ನಡುವೆ ಜಮ್ಮು ಕಾಶ್ಮೀರದ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಒಕ್ಕೂಟವು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಗುರುವಾರ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.

“ಮೆಹಬೂಬಾ ಮುಫ್ತಿ, ಯೂಸುಫ್‌ ತರಿಗಾಮಿ ಮತ್ತು ನಾನು ಪ್ರಧಾನಿ ಕರೆದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ನಮ್ಮ ಅಜೆಂಡಾವನ್ನು ಪ್ರಧಾನಿ ಮತ್ತು ಗೃಹ ಸಚಿವರ ಮುಂದೆ ಇಡಬೇಕೆಂದು ನಾವು ಭಾವಿಸುತ್ತೇವೆ” ಎಂದು ಡಾ. ಅಬ್ದುಲ್ಲಾ ಇಂದಿನ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...