Homeಮುಖಪುಟಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ಆರೋಪಿ ಮೇಲಿನ ಕೋಕಾ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಕೈಬಿಟ್ಟಿತ್ತು. ಇದನ್ನು ಸುಪ್ರೀಂ ನಲ್ಲಿ ಗೌರಿ ಸಹೋದರಿ ಕವಿತಾ ಲಂಕೇಶ್ ಪ್ರಶ್ನಿಸಿದ್ದರು.

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಹತ್ಯೆ ಆರೋಪಿಯ ವಿರುದ್ಧ KCOCA ಪ್ರಕರಣವನ್ನು ಕೈಬಿಟ್ಟ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಕೋಕಾ ಮೊಕದ್ದಮೆ ಮರುಸ್ಥಾಪಿಸುವಂತೆ ಇಂದು ಆದೇಶಿಸಿದೆ.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

ಕವಿತಾ ಲಂಕೇಶ್‌ ಪರವಾಗಿ ಹಿರಿಯ ವಕೀಲ ಹುಜೀಫಾ ಅಹ್ಮದಿ ಅವರು ವಾದಿಸಿದ್ದರು. ಆರೋಪಿ ಪರವಾಗಿ ಬಸವ ಪ್ರಭು ಎಸ್ ವಾದಿಸಿದ್ದರು. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ನ್ಯಾಯಪೀಠವು ಉಭಯ ಕಕ್ಷಿದಾರರ ಪರ ವಾದವನ್ನು ಸೆಪ್ಟಂಬರ್ 21 ರಂದು ಆಲಿಸಿ ಆದೇಶ ಕಾಯ್ದಿರಿಸಿತ್ತು.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, ಪ್ರಕರಣದ ಚಾರ್ಜ್‌ಶೀಟ್ ಅನ್ನು ಹೈಕೋರ್ಟ್ ವಿಶ್ಲೇಷಿಸದೆ, ಪ್ರಕರಣವನ್ನು ರದ್ದುಗೊಳಿಸಿದೆ. ಹೈಕೋರ್ಟ್ ಈ ವಿಷಯವನ್ನು ಲಘುವಾಗಿ ಪರಿಗಣಿಸಿದೆ ಎಂದು ಹೇಳಿತ್ತು.

ಆರೋಪಿ ಮೋಹನ್ ನಾಯಕ್ ಗೌರಿ ಲಂಕೇಶ್ ಹತ್ಯೆಯಲ್ಲಿ ಯೋಜನೆ ರೂಪಿಸಿ ನೇರ ಭಾಗಿಗಳಾಗಿದ್ದ ಅಮೋಲ್ ಕಾಳೆ ಮತ್ತು ರಾಜೇಶ್ ಬಂಗಾರರ ನಿಕಟವರ್ತಿಯಾಗಿದ್ದಾನೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಆ ಸಂದರ್ಭದಲ್ಲಿ ಮೋಹನ್ ನಾಯಕ್ ತನಗೆ ಜಾಮೀನು ನೀಡುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ.

ಇದಕ್ಕೆ ಗೌರಿ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.

ಜುಲೈ 13 ರಂದು ಹೈಕೋರ್ಟ್‌ನ ಜಸ್ಟಿಸ್ ಹರೀಶ್ ಕುಮಾರ್‌ರವರ ಏಕ ಸದಸ್ಯ ಪೀಠ “ಎಸ್‌ಐಟಿ ಸಲ್ಲಿಸಿರುವ ಚಾರ್ಜ್ ಶೀಟ್‌ ಪ್ರಕಾರ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಆದೇಶ ನೀಡಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ಸತ್ಯಗಳು… ಭಾಗ-2

ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...