Homeಕರ್ನಾಟಕಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ : ಸರ್ಕಾರದ ಮೇಲ್ಮನವಿ ಕುರಿತ ಆದೇಶ...

ಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ : ಸರ್ಕಾರದ ಮೇಲ್ಮನವಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ರಸ್ತೆ, ಉದ್ಯಾನವನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕಿಂತ ಹೆಚ್ಚು ಜನರು ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ಹೊರಡಿಸಲಾಗಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಕುರಿತ ಆದೇಶವನ್ನು ಧಾರವಾಡದ ಹೈಕೋರ್ಟ್‌ ಪೀಠ ಮಂಗಳವಾರ (ನ.4) ಕಾಯ್ದಿರಿಸಿದೆ.

ಸರ್ಕಾರದ ಆದೇಶಕ್ಕೆ ಅಕ್ಟೋಬರ್ 28ರಂದು ತಡೆ ನೀಡಿದ್ದ ಏಕಸದಸ್ಯ ಪೀಠದ ನ್ಯಾಯಾಧೀಶರು, ಆದೇಶ ಮೇಲ್ನೋಟಕ್ಕೆ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಇಂದು ನ್ಯಾಯಮೂರ್ತಿಗಳಾದ ಎಸ್‌.ಜಿ ಪಂಡಿತ್ ಮತ್ತು ಗೀತಾ ಕೆ.ಬಿ ಅವರ ದ್ವಿಸದಸ್ಯ ಪೀಠದ ಮುಂದೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರಿ ಆಸ್ತಿಯ ಮೇಲೆ ಅತಿಕ್ರಮಣ ಮಾಡಿದರೆ ಅದು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧವಾಗುತ್ತದೆ ಎಂದು ಮಾತ್ರ ಸರ್ಕಾರದ ಆದೇಶ ಹೇಳುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, 10ಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರುವುದು ಅಪರಾಧವೇ? ಒಂದು ವೇಳೆ ಜನರು ಒಟ್ಟಿಗೆ ನಡೆಯಲು ಬಯಸಿದರೆ ಅದರಲ್ಲಿ ತಪ್ಪೇನು? ನೀವು ಈ ಬಗ್ಗೆ ಏಕಸದಸ್ಯ ಪೀಠದ ಮುಂದೆ ಹೋಗಿ ಸ್ಪಷ್ಟ ತೀರ್ಪು ಕೇಳದಂತೆ ನಿಮ್ಮನ್ನು ತಡೆಯುತ್ತಿರುವುದು ಏನು? ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಅಡ್ವೊಕೇಟ್ ಜನರಲ್, ನಾವು ಮೆರವಣಿಗೆ, ರ‍್ಯಾಲಿಗಳ ಬಗ್ಗೆ ಮಾತ್ರ ಹೇಳುತ್ತಿದ್ದೇವೆ. ಅದನ್ನು ಪಾರ್ಕ್‌ನಲ್ಲಿ ಜನರು ಒಟ್ಟಿಗೆ ನಡೆಯುವುದು ಎಂದು ತಿಳಿಯಬಾರದು. ಅರ್ಜಿದಾರರು ಪಾರ್ಕ್‌ನಲ್ಲಿ ಧರ್ಮ ಪ್ರಚಾರ ಮಾಡಲು ಬಯಸುತ್ತಾರೆ, ಅದಕ್ಕೆ ಅನುಮತಿ ಇಲ್ಲ. ಮೊದಲು ಅವರು ಏನು ಮಾಡಲು ಬಯಸುತ್ತಾರೆ ನೋಡಿ, ನಂತರ ಸರ್ಕಾರದ ಆದೇಶ ಪರಿಶೀಲಿಸಿ ಎಂದು ಹೇಳಿದ್ದಾರೆ.

ಅರ್ಜಿದಾರರು ಹಾಲ್‌ಗಳನ್ನು ಬಾಡಿಗೆಗೆ ತೆಗೆದುಕೊಂಡು ಸಿಂಪೋಸಿಯಂಗಳನ್ನು ನಡೆಸಬಹುದು ಎಂದು ಇದೇ ವೇಳೆ ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.

ನಾಳೆ 30 ಸಂಘಟನೆಗಳು ಬಂದು ಪಾರ್ಕ್‌ನಲ್ಲಿ ಕುಳಿತುಕೊಂಡರೆ ಅದಕ್ಕೆ ಅನುಮತಿ ಇದೆಯೇ? ನಾವು ಅರ್ಜಿದಾರರು ಮಾಡುತ್ತಿರುವ ಕೆಲಸವನ್ನು ಅಥವಾ ಕಾರ್ಯಕ್ರಮವನ್ನು ವಿರೋಧಿಸುತ್ತಿಲ್ಲ. ಆದರೆ, ಅವರು ಅದನ್ನು ಸಾರ್ವಜನಿಕ ಪಾರ್ಕ್‌ಗಳಲ್ಲಿ ಮಾಡಬಾರದು. ಕಬ್ಬನ್ ಪಾರ್ಕ್‌ನಲ್ಲಿಯೂ ನಾವು ನಿರ್ಬಂಧಗಳನ್ನು ಹೇರಿದ್ದೇವೆ ಎಂದು ವಿವರಿಸಿದ್ದಾರೆ.

ನ್ಯಾಯಾಲಯ ಪ್ರತಿಭಟನೆಯನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿದೆ. ಕಂಠೀರವ ಕ್ರೀಡಾಂಗಣವನ್ನು ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಸಬೇಕೆಂದು ನಿರ್ದೇಶಿಸಿದೆ. ಅರ್ಜಿ ಸಲ್ಲಿಸಿದರೆ ನಾವು ಪರಿಗಣಿಸಿ ಅನುಮತಿ ನೀಡುತ್ತೇವೆ. ಈ ಆದೇಶವು ಸಕಾರಾತ್ಮಕ ಅರ್ಥದಲ್ಲಿ ಹೊರಡಿಸಲಾಗಿದೆ. ಇದರಿಂದ ಸರ್ಕಾರಿ ಆಸ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಯಾಗುತ್ತದೆ. ನಾಗರಿಕರ ಯಾವುದೇ ಹಕ್ಕುಗಳಿಗೆ ಧಕ್ಕೆಯಾಗುವುದಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಅರ್ಜಿದಾರರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಅಡ್ವೊಕೇಟ್ ಜನರಲ್ ಹೇಳಿದ್ದಾರೆ.

ಸರ್ಕಾರದ ಆದೇಶವು ಸಭೆ ಸೇರುವುದನ್ನು ನಿಷೇಧಿಸುತ್ತಿಲ್ಲ. ಆದರೆ, ಸಭೆ ಸೇರಲು ಬಯಸುವ ವ್ಯಕ್ತಿಗಳು ಅನುಮತಿ ಪಡೆಯಬೇಕೆಂದು ಹೇಳುತ್ತಿದೆ ಎಂದು ಅಡ್ವೊಕೇಟ್ ಜನರಲ್ ಸ್ಪಷ್ಟಪಡಿಸಿದ್ದಾರೆ.

ಅರ್ಜಿದಾರರ (ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಪುನಶ್ಚೇತನ ಸೇವಾ ಸಂಸ್ಥೆ) ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಸರ್ಕಾರ ಏಕ ಸದಸ್ಯ ಪೀಠದ ಮುಂದೆ ಹೋಗಿ ಸ್ಪಷ್ಟೀಕರಣ ಪಡೆಯಲು ಆಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮಧ್ಯಂತರ ಆದೇಶ ಹೊರಡಿಸಿದಾಗ ರಿಟ್ ಮೇಲ್ಮನವಿ ಸಲ್ಲಿಸುವುದು ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.

ಶಾಂತಿಯುತವಾಗಿ ಸಭೆ ಸೇರುವ ಹಕ್ಕನ್ನು 19 (ಬಿ) ವಿಧಿಯ ಅಡಿಯಲ್ಲಿ ನೀಡಲಾಗಿದೆ. ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಮಸ್ಯೆಯಿದ್ದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ಹಾರನಹಳ್ಳಿ ವಾದಿಸಿದ್ದಾರೆ.

ಒಂದು ಗುಂಪು ಆಟದ ಮೈದಾನದಲ್ಲಿ ಕ್ರಿಕೆಟ್ ಆಡಲು ಬಯಸಿದರೆ ಅವರು ಪ್ರತಿದಿನ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಸರ್ಕಾರದ ಆದೇಶದದಲ್ಲಿ ಏನು ಸಕಾರಾತ್ಮಕವಾಗಿದೆ ಎಂದು ನನಗೆ ಗೊತ್ತಿಲ್ಲ. ಇದಕ್ಕಿಂತ ಸ್ಪಷ್ಟವಾಗಿ ಅನಿಯಂತ್ರಿತ ಆದೇಶ ಇನ್ನೊಂದಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

10 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು ಕಾನೂನುಬಾಹಿರ ಎಂದು ರಾಜ್ಯ ಹೇಳುತ್ತಿದೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮಾತ್ರ ಪತ್ತೆ ಹಚ್ಚಿ ಅಗತ್ಯ ಆದೇಶ ಹೊರಡಿಸಬಹುದು ಎಂದು ಹಾರನಹಳ್ಳಿ ವಾದ ಮಂಡಿಸಿದ್ದಾರೆ.

ರಸ್ತೆಗಳು ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿವೆ. ಅದನ್ನು ನಿಯಂತ್ರಿಸುವುದು ಅವರ ಕೆಲಸ. ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ. ಅವರು ಹಾಗೆ ಮಾಡಲು ಬಯಸಿದರೆ ಶಾಸನಾತ್ಮಕ ಅಧಿಕಾರ ಬಳಸಿ ಆದೇಶವನ್ನು ಹೊರಡಿಸಲಿ. ಪ್ರಕರಣ ಈಗ ನವೆಂಬರ್ 17ಕ್ಕೆ ಏಕ ಸದಸ್ಯ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ ಎಂದು ಹಾರನಹಳ್ಳಿ ಹೇಳಿದ್ದಾರೆ. ಈ ಹಂತದಲ್ಲಿ ವಿಭಾಗೀಯ ಪೀಠವು ವಾದಗಳನ್ನು ಪರಿಗಣಿಸುವುದಾಗಿ ತಿಳಿಸಿದೆ.

ಈ ನಡುವೆ, ಉದ್ಯಾನವನಗಳು ಮತ್ತು ಆಟದ ಮೈದಾನಗಳಲ್ಲಿ ಜನರಿಗೆ ಆಟವಾಡಲು ಅವಕಾಶವಿದೆ. ಆದರೆ, ಅರ್ಜಿದಾರರು ವಿಚಾರ ಸಂಕಿರಣ, ಮಾತುಕತೆ ಮತ್ತು ಭಾಷಣವನ್ನು ನಡೆಸಲು ಬಯಸುತ್ತಿದ್ದಾರೆ ಎಂದು ಎಜಿ ಹೇಳಿದ್ದಾರೆ. ಮಧ್ಯಂತರ ಆದೇಶವು ಅಂತಿಮ ಆದೇಶದ ಸ್ವರೂಪದಲ್ಲಿದೆ ಎಂದಿದ್ದಾರೆ.

ಆಗ “ಸಾಮಾನ್ಯವಾಗಿ ಮೇಲ್ಮನವಿ ವಿಚಾರಣೆಗೆ ಅರ್ಹವಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರು ಯಾವುದೇ ಮಾತುಕತೆ ಇತ್ಯಾದಿಗಳನ್ನು ನಡೆಸಲು ಬಯಸಿದರೆ, ಅವರು ಅರ್ಜಿಯನ್ನು ಸಲ್ಲಿಸಲಿ. ಅದು ತಿರಸ್ಕೃತವಾದರೆ ಅವರು ನ್ಯಾಯಾಲಯದ ಮೊರೆ ಹೋಗಬಹುದು ಎಂದ ಎಜಿ, ಈಗ ಕ್ರಮ ಕೈಗೊಳ್ಳಲು ಯಾವುದೇ ಕಾರಣವಿಲ್ಲ ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲು ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

Courtesy: livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...