Homeಕರ್ನಾಟಕಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ : ಸರ್ಕಾರದ ಮೇಲ್ಮನವಿ ಕುರಿತ ಆದೇಶ...

ಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ : ಸರ್ಕಾರದ ಮೇಲ್ಮನವಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ರಸ್ತೆ, ಉದ್ಯಾನವನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕಿಂತ ಹೆಚ್ಚು ಜನರು ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ಹೊರಡಿಸಲಾಗಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಕುರಿತ ಆದೇಶವನ್ನು ಧಾರವಾಡದ ಹೈಕೋರ್ಟ್‌ ಪೀಠ ಮಂಗಳವಾರ (ನ.4) ಕಾಯ್ದಿರಿಸಿದೆ.

ಸರ್ಕಾರದ ಆದೇಶಕ್ಕೆ ಅಕ್ಟೋಬರ್ 28ರಂದು ತಡೆ ನೀಡಿದ್ದ ಏಕಸದಸ್ಯ ಪೀಠದ ನ್ಯಾಯಾಧೀಶರು, ಆದೇಶ ಮೇಲ್ನೋಟಕ್ಕೆ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಇಂದು ನ್ಯಾಯಮೂರ್ತಿಗಳಾದ ಎಸ್‌.ಜಿ ಪಂಡಿತ್ ಮತ್ತು ಗೀತಾ ಕೆ.ಬಿ ಅವರ ದ್ವಿಸದಸ್ಯ ಪೀಠದ ಮುಂದೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರಿ ಆಸ್ತಿಯ ಮೇಲೆ ಅತಿಕ್ರಮಣ ಮಾಡಿದರೆ ಅದು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧವಾಗುತ್ತದೆ ಎಂದು ಮಾತ್ರ ಸರ್ಕಾರದ ಆದೇಶ ಹೇಳುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, 10ಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರುವುದು ಅಪರಾಧವೇ? ಒಂದು ವೇಳೆ ಜನರು ಒಟ್ಟಿಗೆ ನಡೆಯಲು ಬಯಸಿದರೆ ಅದರಲ್ಲಿ ತಪ್ಪೇನು? ನೀವು ಈ ಬಗ್ಗೆ ಏಕಸದಸ್ಯ ಪೀಠದ ಮುಂದೆ ಹೋಗಿ ಸ್ಪಷ್ಟ ತೀರ್ಪು ಕೇಳದಂತೆ ನಿಮ್ಮನ್ನು ತಡೆಯುತ್ತಿರುವುದು ಏನು? ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಅಡ್ವೊಕೇಟ್ ಜನರಲ್, ನಾವು ಮೆರವಣಿಗೆ, ರ‍್ಯಾಲಿಗಳ ಬಗ್ಗೆ ಮಾತ್ರ ಹೇಳುತ್ತಿದ್ದೇವೆ. ಅದನ್ನು ಪಾರ್ಕ್‌ನಲ್ಲಿ ಜನರು ಒಟ್ಟಿಗೆ ನಡೆಯುವುದು ಎಂದು ತಿಳಿಯಬಾರದು. ಅರ್ಜಿದಾರರು ಪಾರ್ಕ್‌ನಲ್ಲಿ ಧರ್ಮ ಪ್ರಚಾರ ಮಾಡಲು ಬಯಸುತ್ತಾರೆ, ಅದಕ್ಕೆ ಅನುಮತಿ ಇಲ್ಲ. ಮೊದಲು ಅವರು ಏನು ಮಾಡಲು ಬಯಸುತ್ತಾರೆ ನೋಡಿ, ನಂತರ ಸರ್ಕಾರದ ಆದೇಶ ಪರಿಶೀಲಿಸಿ ಎಂದು ಹೇಳಿದ್ದಾರೆ.

ಅರ್ಜಿದಾರರು ಹಾಲ್‌ಗಳನ್ನು ಬಾಡಿಗೆಗೆ ತೆಗೆದುಕೊಂಡು ಸಿಂಪೋಸಿಯಂಗಳನ್ನು ನಡೆಸಬಹುದು ಎಂದು ಇದೇ ವೇಳೆ ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.

ನಾಳೆ 30 ಸಂಘಟನೆಗಳು ಬಂದು ಪಾರ್ಕ್‌ನಲ್ಲಿ ಕುಳಿತುಕೊಂಡರೆ ಅದಕ್ಕೆ ಅನುಮತಿ ಇದೆಯೇ? ನಾವು ಅರ್ಜಿದಾರರು ಮಾಡುತ್ತಿರುವ ಕೆಲಸವನ್ನು ಅಥವಾ ಕಾರ್ಯಕ್ರಮವನ್ನು ವಿರೋಧಿಸುತ್ತಿಲ್ಲ. ಆದರೆ, ಅವರು ಅದನ್ನು ಸಾರ್ವಜನಿಕ ಪಾರ್ಕ್‌ಗಳಲ್ಲಿ ಮಾಡಬಾರದು. ಕಬ್ಬನ್ ಪಾರ್ಕ್‌ನಲ್ಲಿಯೂ ನಾವು ನಿರ್ಬಂಧಗಳನ್ನು ಹೇರಿದ್ದೇವೆ ಎಂದು ವಿವರಿಸಿದ್ದಾರೆ.

ನ್ಯಾಯಾಲಯ ಪ್ರತಿಭಟನೆಯನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿದೆ. ಕಂಠೀರವ ಕ್ರೀಡಾಂಗಣವನ್ನು ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಸಬೇಕೆಂದು ನಿರ್ದೇಶಿಸಿದೆ. ಅರ್ಜಿ ಸಲ್ಲಿಸಿದರೆ ನಾವು ಪರಿಗಣಿಸಿ ಅನುಮತಿ ನೀಡುತ್ತೇವೆ. ಈ ಆದೇಶವು ಸಕಾರಾತ್ಮಕ ಅರ್ಥದಲ್ಲಿ ಹೊರಡಿಸಲಾಗಿದೆ. ಇದರಿಂದ ಸರ್ಕಾರಿ ಆಸ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಯಾಗುತ್ತದೆ. ನಾಗರಿಕರ ಯಾವುದೇ ಹಕ್ಕುಗಳಿಗೆ ಧಕ್ಕೆಯಾಗುವುದಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಅರ್ಜಿದಾರರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಅಡ್ವೊಕೇಟ್ ಜನರಲ್ ಹೇಳಿದ್ದಾರೆ.

ಸರ್ಕಾರದ ಆದೇಶವು ಸಭೆ ಸೇರುವುದನ್ನು ನಿಷೇಧಿಸುತ್ತಿಲ್ಲ. ಆದರೆ, ಸಭೆ ಸೇರಲು ಬಯಸುವ ವ್ಯಕ್ತಿಗಳು ಅನುಮತಿ ಪಡೆಯಬೇಕೆಂದು ಹೇಳುತ್ತಿದೆ ಎಂದು ಅಡ್ವೊಕೇಟ್ ಜನರಲ್ ಸ್ಪಷ್ಟಪಡಿಸಿದ್ದಾರೆ.

ಅರ್ಜಿದಾರರ (ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಪುನಶ್ಚೇತನ ಸೇವಾ ಸಂಸ್ಥೆ) ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಸರ್ಕಾರ ಏಕ ಸದಸ್ಯ ಪೀಠದ ಮುಂದೆ ಹೋಗಿ ಸ್ಪಷ್ಟೀಕರಣ ಪಡೆಯಲು ಆಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮಧ್ಯಂತರ ಆದೇಶ ಹೊರಡಿಸಿದಾಗ ರಿಟ್ ಮೇಲ್ಮನವಿ ಸಲ್ಲಿಸುವುದು ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.

ಶಾಂತಿಯುತವಾಗಿ ಸಭೆ ಸೇರುವ ಹಕ್ಕನ್ನು 19 (ಬಿ) ವಿಧಿಯ ಅಡಿಯಲ್ಲಿ ನೀಡಲಾಗಿದೆ. ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಮಸ್ಯೆಯಿದ್ದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ಹಾರನಹಳ್ಳಿ ವಾದಿಸಿದ್ದಾರೆ.

ಒಂದು ಗುಂಪು ಆಟದ ಮೈದಾನದಲ್ಲಿ ಕ್ರಿಕೆಟ್ ಆಡಲು ಬಯಸಿದರೆ ಅವರು ಪ್ರತಿದಿನ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಸರ್ಕಾರದ ಆದೇಶದದಲ್ಲಿ ಏನು ಸಕಾರಾತ್ಮಕವಾಗಿದೆ ಎಂದು ನನಗೆ ಗೊತ್ತಿಲ್ಲ. ಇದಕ್ಕಿಂತ ಸ್ಪಷ್ಟವಾಗಿ ಅನಿಯಂತ್ರಿತ ಆದೇಶ ಇನ್ನೊಂದಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

10 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು ಕಾನೂನುಬಾಹಿರ ಎಂದು ರಾಜ್ಯ ಹೇಳುತ್ತಿದೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮಾತ್ರ ಪತ್ತೆ ಹಚ್ಚಿ ಅಗತ್ಯ ಆದೇಶ ಹೊರಡಿಸಬಹುದು ಎಂದು ಹಾರನಹಳ್ಳಿ ವಾದ ಮಂಡಿಸಿದ್ದಾರೆ.

ರಸ್ತೆಗಳು ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿವೆ. ಅದನ್ನು ನಿಯಂತ್ರಿಸುವುದು ಅವರ ಕೆಲಸ. ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ. ಅವರು ಹಾಗೆ ಮಾಡಲು ಬಯಸಿದರೆ ಶಾಸನಾತ್ಮಕ ಅಧಿಕಾರ ಬಳಸಿ ಆದೇಶವನ್ನು ಹೊರಡಿಸಲಿ. ಪ್ರಕರಣ ಈಗ ನವೆಂಬರ್ 17ಕ್ಕೆ ಏಕ ಸದಸ್ಯ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ ಎಂದು ಹಾರನಹಳ್ಳಿ ಹೇಳಿದ್ದಾರೆ. ಈ ಹಂತದಲ್ಲಿ ವಿಭಾಗೀಯ ಪೀಠವು ವಾದಗಳನ್ನು ಪರಿಗಣಿಸುವುದಾಗಿ ತಿಳಿಸಿದೆ.

ಈ ನಡುವೆ, ಉದ್ಯಾನವನಗಳು ಮತ್ತು ಆಟದ ಮೈದಾನಗಳಲ್ಲಿ ಜನರಿಗೆ ಆಟವಾಡಲು ಅವಕಾಶವಿದೆ. ಆದರೆ, ಅರ್ಜಿದಾರರು ವಿಚಾರ ಸಂಕಿರಣ, ಮಾತುಕತೆ ಮತ್ತು ಭಾಷಣವನ್ನು ನಡೆಸಲು ಬಯಸುತ್ತಿದ್ದಾರೆ ಎಂದು ಎಜಿ ಹೇಳಿದ್ದಾರೆ. ಮಧ್ಯಂತರ ಆದೇಶವು ಅಂತಿಮ ಆದೇಶದ ಸ್ವರೂಪದಲ್ಲಿದೆ ಎಂದಿದ್ದಾರೆ.

ಆಗ “ಸಾಮಾನ್ಯವಾಗಿ ಮೇಲ್ಮನವಿ ವಿಚಾರಣೆಗೆ ಅರ್ಹವಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರು ಯಾವುದೇ ಮಾತುಕತೆ ಇತ್ಯಾದಿಗಳನ್ನು ನಡೆಸಲು ಬಯಸಿದರೆ, ಅವರು ಅರ್ಜಿಯನ್ನು ಸಲ್ಲಿಸಲಿ. ಅದು ತಿರಸ್ಕೃತವಾದರೆ ಅವರು ನ್ಯಾಯಾಲಯದ ಮೊರೆ ಹೋಗಬಹುದು ಎಂದ ಎಜಿ, ಈಗ ಕ್ರಮ ಕೈಗೊಳ್ಳಲು ಯಾವುದೇ ಕಾರಣವಿಲ್ಲ ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲು ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

Courtesy: livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...