Homeಕರ್ನಾಟಕಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ : ಸರ್ಕಾರದ ಮೇಲ್ಮನವಿ ಕುರಿತ ಆದೇಶ...

ಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ : ಸರ್ಕಾರದ ಮೇಲ್ಮನವಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ರಸ್ತೆ, ಉದ್ಯಾನವನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕಿಂತ ಹೆಚ್ಚು ಜನರು ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ಹೊರಡಿಸಲಾಗಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಕುರಿತ ಆದೇಶವನ್ನು ಧಾರವಾಡದ ಹೈಕೋರ್ಟ್‌ ಪೀಠ ಮಂಗಳವಾರ (ನ.4) ಕಾಯ್ದಿರಿಸಿದೆ.

ಸರ್ಕಾರದ ಆದೇಶಕ್ಕೆ ಅಕ್ಟೋಬರ್ 28ರಂದು ತಡೆ ನೀಡಿದ್ದ ಏಕಸದಸ್ಯ ಪೀಠದ ನ್ಯಾಯಾಧೀಶರು, ಆದೇಶ ಮೇಲ್ನೋಟಕ್ಕೆ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಇಂದು ನ್ಯಾಯಮೂರ್ತಿಗಳಾದ ಎಸ್‌.ಜಿ ಪಂಡಿತ್ ಮತ್ತು ಗೀತಾ ಕೆ.ಬಿ ಅವರ ದ್ವಿಸದಸ್ಯ ಪೀಠದ ಮುಂದೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರಿ ಆಸ್ತಿಯ ಮೇಲೆ ಅತಿಕ್ರಮಣ ಮಾಡಿದರೆ ಅದು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧವಾಗುತ್ತದೆ ಎಂದು ಮಾತ್ರ ಸರ್ಕಾರದ ಆದೇಶ ಹೇಳುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, 10ಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರುವುದು ಅಪರಾಧವೇ? ಒಂದು ವೇಳೆ ಜನರು ಒಟ್ಟಿಗೆ ನಡೆಯಲು ಬಯಸಿದರೆ ಅದರಲ್ಲಿ ತಪ್ಪೇನು? ನೀವು ಈ ಬಗ್ಗೆ ಏಕಸದಸ್ಯ ಪೀಠದ ಮುಂದೆ ಹೋಗಿ ಸ್ಪಷ್ಟ ತೀರ್ಪು ಕೇಳದಂತೆ ನಿಮ್ಮನ್ನು ತಡೆಯುತ್ತಿರುವುದು ಏನು? ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಅಡ್ವೊಕೇಟ್ ಜನರಲ್, ನಾವು ಮೆರವಣಿಗೆ, ರ‍್ಯಾಲಿಗಳ ಬಗ್ಗೆ ಮಾತ್ರ ಹೇಳುತ್ತಿದ್ದೇವೆ. ಅದನ್ನು ಪಾರ್ಕ್‌ನಲ್ಲಿ ಜನರು ಒಟ್ಟಿಗೆ ನಡೆಯುವುದು ಎಂದು ತಿಳಿಯಬಾರದು. ಅರ್ಜಿದಾರರು ಪಾರ್ಕ್‌ನಲ್ಲಿ ಧರ್ಮ ಪ್ರಚಾರ ಮಾಡಲು ಬಯಸುತ್ತಾರೆ, ಅದಕ್ಕೆ ಅನುಮತಿ ಇಲ್ಲ. ಮೊದಲು ಅವರು ಏನು ಮಾಡಲು ಬಯಸುತ್ತಾರೆ ನೋಡಿ, ನಂತರ ಸರ್ಕಾರದ ಆದೇಶ ಪರಿಶೀಲಿಸಿ ಎಂದು ಹೇಳಿದ್ದಾರೆ.

ಅರ್ಜಿದಾರರು ಹಾಲ್‌ಗಳನ್ನು ಬಾಡಿಗೆಗೆ ತೆಗೆದುಕೊಂಡು ಸಿಂಪೋಸಿಯಂಗಳನ್ನು ನಡೆಸಬಹುದು ಎಂದು ಇದೇ ವೇಳೆ ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.

ನಾಳೆ 30 ಸಂಘಟನೆಗಳು ಬಂದು ಪಾರ್ಕ್‌ನಲ್ಲಿ ಕುಳಿತುಕೊಂಡರೆ ಅದಕ್ಕೆ ಅನುಮತಿ ಇದೆಯೇ? ನಾವು ಅರ್ಜಿದಾರರು ಮಾಡುತ್ತಿರುವ ಕೆಲಸವನ್ನು ಅಥವಾ ಕಾರ್ಯಕ್ರಮವನ್ನು ವಿರೋಧಿಸುತ್ತಿಲ್ಲ. ಆದರೆ, ಅವರು ಅದನ್ನು ಸಾರ್ವಜನಿಕ ಪಾರ್ಕ್‌ಗಳಲ್ಲಿ ಮಾಡಬಾರದು. ಕಬ್ಬನ್ ಪಾರ್ಕ್‌ನಲ್ಲಿಯೂ ನಾವು ನಿರ್ಬಂಧಗಳನ್ನು ಹೇರಿದ್ದೇವೆ ಎಂದು ವಿವರಿಸಿದ್ದಾರೆ.

ನ್ಯಾಯಾಲಯ ಪ್ರತಿಭಟನೆಯನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿದೆ. ಕಂಠೀರವ ಕ್ರೀಡಾಂಗಣವನ್ನು ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಸಬೇಕೆಂದು ನಿರ್ದೇಶಿಸಿದೆ. ಅರ್ಜಿ ಸಲ್ಲಿಸಿದರೆ ನಾವು ಪರಿಗಣಿಸಿ ಅನುಮತಿ ನೀಡುತ್ತೇವೆ. ಈ ಆದೇಶವು ಸಕಾರಾತ್ಮಕ ಅರ್ಥದಲ್ಲಿ ಹೊರಡಿಸಲಾಗಿದೆ. ಇದರಿಂದ ಸರ್ಕಾರಿ ಆಸ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಯಾಗುತ್ತದೆ. ನಾಗರಿಕರ ಯಾವುದೇ ಹಕ್ಕುಗಳಿಗೆ ಧಕ್ಕೆಯಾಗುವುದಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಅರ್ಜಿದಾರರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಅಡ್ವೊಕೇಟ್ ಜನರಲ್ ಹೇಳಿದ್ದಾರೆ.

ಸರ್ಕಾರದ ಆದೇಶವು ಸಭೆ ಸೇರುವುದನ್ನು ನಿಷೇಧಿಸುತ್ತಿಲ್ಲ. ಆದರೆ, ಸಭೆ ಸೇರಲು ಬಯಸುವ ವ್ಯಕ್ತಿಗಳು ಅನುಮತಿ ಪಡೆಯಬೇಕೆಂದು ಹೇಳುತ್ತಿದೆ ಎಂದು ಅಡ್ವೊಕೇಟ್ ಜನರಲ್ ಸ್ಪಷ್ಟಪಡಿಸಿದ್ದಾರೆ.

ಅರ್ಜಿದಾರರ (ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಪುನಶ್ಚೇತನ ಸೇವಾ ಸಂಸ್ಥೆ) ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಸರ್ಕಾರ ಏಕ ಸದಸ್ಯ ಪೀಠದ ಮುಂದೆ ಹೋಗಿ ಸ್ಪಷ್ಟೀಕರಣ ಪಡೆಯಲು ಆಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮಧ್ಯಂತರ ಆದೇಶ ಹೊರಡಿಸಿದಾಗ ರಿಟ್ ಮೇಲ್ಮನವಿ ಸಲ್ಲಿಸುವುದು ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.

ಶಾಂತಿಯುತವಾಗಿ ಸಭೆ ಸೇರುವ ಹಕ್ಕನ್ನು 19 (ಬಿ) ವಿಧಿಯ ಅಡಿಯಲ್ಲಿ ನೀಡಲಾಗಿದೆ. ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಮಸ್ಯೆಯಿದ್ದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ಹಾರನಹಳ್ಳಿ ವಾದಿಸಿದ್ದಾರೆ.

ಒಂದು ಗುಂಪು ಆಟದ ಮೈದಾನದಲ್ಲಿ ಕ್ರಿಕೆಟ್ ಆಡಲು ಬಯಸಿದರೆ ಅವರು ಪ್ರತಿದಿನ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಸರ್ಕಾರದ ಆದೇಶದದಲ್ಲಿ ಏನು ಸಕಾರಾತ್ಮಕವಾಗಿದೆ ಎಂದು ನನಗೆ ಗೊತ್ತಿಲ್ಲ. ಇದಕ್ಕಿಂತ ಸ್ಪಷ್ಟವಾಗಿ ಅನಿಯಂತ್ರಿತ ಆದೇಶ ಇನ್ನೊಂದಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

10 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು ಕಾನೂನುಬಾಹಿರ ಎಂದು ರಾಜ್ಯ ಹೇಳುತ್ತಿದೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮಾತ್ರ ಪತ್ತೆ ಹಚ್ಚಿ ಅಗತ್ಯ ಆದೇಶ ಹೊರಡಿಸಬಹುದು ಎಂದು ಹಾರನಹಳ್ಳಿ ವಾದ ಮಂಡಿಸಿದ್ದಾರೆ.

ರಸ್ತೆಗಳು ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿವೆ. ಅದನ್ನು ನಿಯಂತ್ರಿಸುವುದು ಅವರ ಕೆಲಸ. ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ. ಅವರು ಹಾಗೆ ಮಾಡಲು ಬಯಸಿದರೆ ಶಾಸನಾತ್ಮಕ ಅಧಿಕಾರ ಬಳಸಿ ಆದೇಶವನ್ನು ಹೊರಡಿಸಲಿ. ಪ್ರಕರಣ ಈಗ ನವೆಂಬರ್ 17ಕ್ಕೆ ಏಕ ಸದಸ್ಯ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ ಎಂದು ಹಾರನಹಳ್ಳಿ ಹೇಳಿದ್ದಾರೆ. ಈ ಹಂತದಲ್ಲಿ ವಿಭಾಗೀಯ ಪೀಠವು ವಾದಗಳನ್ನು ಪರಿಗಣಿಸುವುದಾಗಿ ತಿಳಿಸಿದೆ.

ಈ ನಡುವೆ, ಉದ್ಯಾನವನಗಳು ಮತ್ತು ಆಟದ ಮೈದಾನಗಳಲ್ಲಿ ಜನರಿಗೆ ಆಟವಾಡಲು ಅವಕಾಶವಿದೆ. ಆದರೆ, ಅರ್ಜಿದಾರರು ವಿಚಾರ ಸಂಕಿರಣ, ಮಾತುಕತೆ ಮತ್ತು ಭಾಷಣವನ್ನು ನಡೆಸಲು ಬಯಸುತ್ತಿದ್ದಾರೆ ಎಂದು ಎಜಿ ಹೇಳಿದ್ದಾರೆ. ಮಧ್ಯಂತರ ಆದೇಶವು ಅಂತಿಮ ಆದೇಶದ ಸ್ವರೂಪದಲ್ಲಿದೆ ಎಂದಿದ್ದಾರೆ.

ಆಗ “ಸಾಮಾನ್ಯವಾಗಿ ಮೇಲ್ಮನವಿ ವಿಚಾರಣೆಗೆ ಅರ್ಹವಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರು ಯಾವುದೇ ಮಾತುಕತೆ ಇತ್ಯಾದಿಗಳನ್ನು ನಡೆಸಲು ಬಯಸಿದರೆ, ಅವರು ಅರ್ಜಿಯನ್ನು ಸಲ್ಲಿಸಲಿ. ಅದು ತಿರಸ್ಕೃತವಾದರೆ ಅವರು ನ್ಯಾಯಾಲಯದ ಮೊರೆ ಹೋಗಬಹುದು ಎಂದ ಎಜಿ, ಈಗ ಕ್ರಮ ಕೈಗೊಳ್ಳಲು ಯಾವುದೇ ಕಾರಣವಿಲ್ಲ ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲು ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

Courtesy: livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...