Homeಮುಖಪುಟದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

ದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

  • ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌

ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

  • ಭನಾನಿಪುರ್‌ – ಬಿಜೆಪಿ
  • ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಮರಿಯಾನಿ – ಬಿಜೆಪಿ
  • ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಥೌರಾ – ಬಿಜೆಪಿ

ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

  • ಕುಶೇಶ್ವರ ಆಸ್ಥಾನ – JDU
  • ತಾರಾಪುರ – JDU

ಕುಶೇಶ್ವರ ಆಸ್ಥಾನ ಕ್ಷೇತ್ರದಲ್ಲಿ ಜೆಡಿಯು ತನ್ನ ಕ್ಷೇತ್ರವನ್ನು ಉಳಿಕೊಂಡರೆ, ತಾರಾಪುರದಲ್ಲಿ ಕಳೆದುಕೊಂಡಿದೆ.

4. ಹರಿಯಾಣ

  • ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

  • ಅರ್ಕಿ – ಕಾಂಗ್ರೆಸ್
  • ಫತೇಪುರ್ – ಕಾಂಗ್ರೆಸ್
  • ಜುಟ್ಟಬ್ – ಕಾಂಗ್ರೆಸ್

ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

  • ಹಾನಗಲ್‌ – ಕಾಂಗ್ರೆಸ್
  • ಸಿಂದಗಿ – ಬಿಜೆಪಿ

ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

7. ಮಧ್ಯಪ್ರದೇಶ

  • ಜೋಬತ್ – ಬಿಜೆಪಿ
  • ಪೃಥ್ವಿಪುರ – ಬಿಜೆಪಿ
  • ರಾಯಗಾಂವ್ – ಕಾಂಗ್ರೆಸ್

ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

  • ದೆಗ್ಲೂರ್ – ಕಾಂಗ್ರೆಸ್

ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಕೊಂಡಿದೆ.

9. ಮೇಘಾಲಯ

  • ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

  • ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್

ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

11. ನಾಗಾಲ್ಯಾಂಡ್

  • ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ

ಅವಿರೋಧ ಆಯ್ಕೆ!

12. ರಾಜಸ್ಥಾನ

  • ಧರಿಯಾವಾಡ – ಕಾಂಗ್ರೆಸ್
  • ವಲ್ಲಭನಗರ – ಕಾಂಗ್ರೆಸ್

ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

  • ಹುಜೂರಾಬಾದ್ – ಬಿಜೆಪಿ

ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

  • ದೀನ್‌ಹಟಾ – ಟಿಎಂಸಿ
  • ಗೋಸಾಬ – ಟಿಎಂಸಿ
  • ಖಾರ್ದಹೊ – ಟಿಎಂಸಿ
  • ಶಾಂತಿಪುರ – ಟಿಎಂಸಿ

ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಇದನ್ನೂ ಓದಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...