Homeಮುಖಪುಟದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

ದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

  • ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌

ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

  • ಭನಾನಿಪುರ್‌ – ಬಿಜೆಪಿ
  • ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಮರಿಯಾನಿ – ಬಿಜೆಪಿ
  • ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಥೌರಾ – ಬಿಜೆಪಿ

ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

  • ಕುಶೇಶ್ವರ ಆಸ್ಥಾನ – JDU
  • ತಾರಾಪುರ – JDU

ಕುಶೇಶ್ವರ ಆಸ್ಥಾನ ಕ್ಷೇತ್ರದಲ್ಲಿ ಜೆಡಿಯು ತನ್ನ ಕ್ಷೇತ್ರವನ್ನು ಉಳಿಕೊಂಡರೆ, ತಾರಾಪುರದಲ್ಲಿ ಕಳೆದುಕೊಂಡಿದೆ.

4. ಹರಿಯಾಣ

  • ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

  • ಅರ್ಕಿ – ಕಾಂಗ್ರೆಸ್
  • ಫತೇಪುರ್ – ಕಾಂಗ್ರೆಸ್
  • ಜುಟ್ಟಬ್ – ಕಾಂಗ್ರೆಸ್

ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

  • ಹಾನಗಲ್‌ – ಕಾಂಗ್ರೆಸ್
  • ಸಿಂದಗಿ – ಬಿಜೆಪಿ

ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

7. ಮಧ್ಯಪ್ರದೇಶ

  • ಜೋಬತ್ – ಬಿಜೆಪಿ
  • ಪೃಥ್ವಿಪುರ – ಬಿಜೆಪಿ
  • ರಾಯಗಾಂವ್ – ಕಾಂಗ್ರೆಸ್

ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

  • ದೆಗ್ಲೂರ್ – ಕಾಂಗ್ರೆಸ್

ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಕೊಂಡಿದೆ.

9. ಮೇಘಾಲಯ

  • ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

  • ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್

ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

11. ನಾಗಾಲ್ಯಾಂಡ್

  • ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ

ಅವಿರೋಧ ಆಯ್ಕೆ!

12. ರಾಜಸ್ಥಾನ

  • ಧರಿಯಾವಾಡ – ಕಾಂಗ್ರೆಸ್
  • ವಲ್ಲಭನಗರ – ಕಾಂಗ್ರೆಸ್

ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

  • ಹುಜೂರಾಬಾದ್ – ಬಿಜೆಪಿ

ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

  • ದೀನ್‌ಹಟಾ – ಟಿಎಂಸಿ
  • ಗೋಸಾಬ – ಟಿಎಂಸಿ
  • ಖಾರ್ದಹೊ – ಟಿಎಂಸಿ
  • ಶಾಂತಿಪುರ – ಟಿಎಂಸಿ

ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಇದನ್ನೂ ಓದಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...