Homeಮುಖಪುಟಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಮಾಜಿ ಶಾಸಕ ಸೇರಿ ಮೂವರ ಬಂಧನ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಮಾಜಿ ಶಾಸಕ ಸೇರಿ ಮೂವರ ಬಂಧನ

- Advertisement -
- Advertisement -

ಇಂಫಾಲ್‌ನ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಮನೆಗಳಿಗೆ ಬೆಂಕಿ ಹಚ್ಚಿದ ನಂತರ ಮತ್ತೆ ಸೋಮವಾರ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.

ನ್ಯೂ ಚೆಕ್ಕಾನ್ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊಸ ಹಿಂಸಾಚಾರವು ನಡೆದಿದೆ. ಈ ಪ್ರದೇಶದಲ್ಲಿ ಕುಕಿಗಳು, ಮೈತಿಗಳು ಮತ್ತು ಇತರ ಜನಾಂಗೀಯ ಗುಂಪುಗಳು ನೆಲೆಸುತ್ತಾರೆ.

ಸೋಮವಾರ ಬೆಳಿಗ್ಗೆ, ಕರ್ಫ್ಯೂ ಸಡಿಲಗೊಂಡಿದ್ದರಿಂದ, ಮಾಜಿ ಶಾಸಕರ ನೇತೃತ್ವದ ತಂಡ ಬಂದೂಕುಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದು ವ್ಯಾಪಾರಸ್ಥರಿಗೆ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಹೇಳದ್ದಾರೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಮಾಜಿ ಶಾಸಕರೊಬ್ಬರು ಈ ಪಿತೂರಿಯಲ್ಲಿ ಭಾಗಿಯಾಗಿರುವುದು ಅತ್ಯಂತ ದುರದೃಷ್ಟಕರ. ಸಿಂಗಲ್ ಬ್ಯಾರೆಲ್ ಬಂದೂಕುಗಳನ್ನು ಹೊತ್ತ ಇಬ್ಬರು ಶಸ್ತ್ರಸಜ್ಜಿತ ಸಿಬ್ಬಂದಿ ಮಾರಾಟಗಾರರನ್ನು ಬೆದರಿಸಿ ಪ್ರದೇಶವನ್ನು ಖಾಲಿ ಮಾಡುವಂತೆ ಕೇಳಿಕೊಂಡರು. ಈ ಇಬ್ಬರನ್ನು ಮತ್ತು ಮಾಜಿ ಶಾಸಕರನ್ನು ವ್ಯಾಪಾರಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು.

”ಈ ಪ್ರದೇಶದಲ್ಲಿ ಚರ್ಚ್ ಕಾಂಪೌಂಡ್ ಒಳಗೆ ಮನೆಗಳು ಇವೆ, ಹಿಂದೆ ಹಿಂಸಾಚಾರ ನಡೆದಾಗ ಅಲ್ಲಿದ್ದವರು ಮನೆ ಬಿಟ್ಟು ಸ್ಥಳಾಂತರಗೊಂಡಿದ್ದಾರೆ. ಇಲ್ಲಿ ಸೇನೆಯನ್ನು ನಿಯೋಜಿಸಲಾಗಿದ್ದರೂ, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಕೆಲವು ಕಡೆಗಳಲ್ಲಿ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಇತ್ತೀಚೆಗೆ ಯಾವುದೇ ದೊಡ್ಡ ಮಟ್ಟದ ಹಿಂಸಾಚಾರ ಅಥವಾ ಜೀವಹಾನಿಯಾಗಿಲ್ಲ. ರಾಜ್ಯದಲ್ಲಿ ಈಗಾಗಲೇ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಒಂದುವೇಳೆ ಅಹಿತಕರ ಘಟನೆಗಳು ನಡೆದರೆ, ಈ ಸ್ಥಳಗಳಿಗೆ ತಲುಪಿ, ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುತ್ತವೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಸೋಮವಾರ ನಡೆದ ಘಟನೆಯಿಂದ ಕರ್ಫ್ಯೂ ಸಡಿಲಿಕೆಯ ಸಮಯವನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಕ್ಕೆ ರಾಜ್ಯ ಸರ್ಕಾರವು ಇಳಿಸಿದೆ. ಮೊದಲು ವಿಶ್ರಾಂತಿ ಅವಧಿಯು ಬೆಳಿಗ್ಗೆ 6 ರಿಂದ ಸಂಜೆ 4 ರವರೆಗೆ ಇತ್ತು.

ಭಾನುವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ ಇಂಫಾಲ್ ಪಶ್ಚಿಮದಲ್ಲಿ ಮೂವರು ಗಾಯಗೊಂಡಿದ್ದಾರೆ. ”ಡಬಲ್ ಬ್ಯಾರೆಲ್ ಗನ್‌ಗಳೊಂದಿಗೆ ಸುತ್ತಾಡುತ್ತಿರುವವರನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಸಿಂಗ್ ಹೇಳಿದರು.

ಕಳೆದ 10 ದಿನಗಳಲ್ಲಿ ಮಣಿಪುರದಲ್ಲಿ ಪರಿಸ್ಥಿತಿ ಹೆಚ್ಚಾಗಿ ಶಾಂತಿಯುತವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು ಮತ್ತು ನಿವಾಸಿಗಳು ಶಾಂತವಾಗಿರಲು ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಲು ಒತ್ತಾಯಿಸಿದರು.

ಭಾನುವಾರ, ಮಣಿಪುರ ಗೃಹ ಇಲಾಖೆಯು, ಸಾಮಾಜಿಕ ಮಾಧ್ಯಮವನ್ನು ದ್ವೇಷ ಭಾಷಣಕ್ಕಾಗಿ ಬಳಸಬಹುದೆಂಬ ಆತಂಕವನ್ನು ಉಲ್ಲೇಖಿಸಿ, ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮೇ 26 ರವರೆಗೆ ವಿಸ್ತರಿಸಿತು.

ಘಟನೆಯ ಹಿನ್ನೆಲೆ

ಮೇ 3 ರಂದು ಮಣಿಪುರ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಮೇ 3 ರಂದು ನಡೆದ ಪ್ರತಿಭಟನೆಯು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಲು ಮೈತಿ ಸಮುದಾಯದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮೈತಿ ಸಮುದಾಯ ರಾಜ್ಯದ ಜನಸಂಖ್ಯೆಯ 60% ರಷ್ಟಿದೆ ಮತ್ತು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ಮೈತಿ ಸಮುದಾಯಗಳಿಗೆ ಅವಕಾಶವಿಲ್ಲ.

ಮತ್ತೊಂದೆಡೆ, ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ ಎಂದು ಕೆಲವು ಬುಡಕಟ್ಟು ಸಮುದಾಯದವರು ಭಯಪಡುತ್ತಾರೆ.

ಮೇ 3ರಂದು ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು, ಬಹುಸಂಖ್ಯಾತ ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಆ ಬಳಿಕ ಈಶಾನ್ಯ ರಾಜ್ಯದಲ್ಲಿ ಮೊದಲು ಹಿಂಸಾಚಾರ ಪ್ರಾರಂಭವಾಯಿತು.

ಈ ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಈ ಹಿಂದೆ ನಡೆದ ಘರ್ಷಣೆಯಲ್ಲಿ ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಮತ್ತು 35,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...