Homeಮುಖಪುಟಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಮಾಜಿ ಶಾಸಕ ಸೇರಿ ಮೂವರ ಬಂಧನ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಮಾಜಿ ಶಾಸಕ ಸೇರಿ ಮೂವರ ಬಂಧನ

- Advertisement -
- Advertisement -

ಇಂಫಾಲ್‌ನ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಮನೆಗಳಿಗೆ ಬೆಂಕಿ ಹಚ್ಚಿದ ನಂತರ ಮತ್ತೆ ಸೋಮವಾರ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.

ನ್ಯೂ ಚೆಕ್ಕಾನ್ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊಸ ಹಿಂಸಾಚಾರವು ನಡೆದಿದೆ. ಈ ಪ್ರದೇಶದಲ್ಲಿ ಕುಕಿಗಳು, ಮೈತಿಗಳು ಮತ್ತು ಇತರ ಜನಾಂಗೀಯ ಗುಂಪುಗಳು ನೆಲೆಸುತ್ತಾರೆ.

ಸೋಮವಾರ ಬೆಳಿಗ್ಗೆ, ಕರ್ಫ್ಯೂ ಸಡಿಲಗೊಂಡಿದ್ದರಿಂದ, ಮಾಜಿ ಶಾಸಕರ ನೇತೃತ್ವದ ತಂಡ ಬಂದೂಕುಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದು ವ್ಯಾಪಾರಸ್ಥರಿಗೆ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಹೇಳದ್ದಾರೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಮಾಜಿ ಶಾಸಕರೊಬ್ಬರು ಈ ಪಿತೂರಿಯಲ್ಲಿ ಭಾಗಿಯಾಗಿರುವುದು ಅತ್ಯಂತ ದುರದೃಷ್ಟಕರ. ಸಿಂಗಲ್ ಬ್ಯಾರೆಲ್ ಬಂದೂಕುಗಳನ್ನು ಹೊತ್ತ ಇಬ್ಬರು ಶಸ್ತ್ರಸಜ್ಜಿತ ಸಿಬ್ಬಂದಿ ಮಾರಾಟಗಾರರನ್ನು ಬೆದರಿಸಿ ಪ್ರದೇಶವನ್ನು ಖಾಲಿ ಮಾಡುವಂತೆ ಕೇಳಿಕೊಂಡರು. ಈ ಇಬ್ಬರನ್ನು ಮತ್ತು ಮಾಜಿ ಶಾಸಕರನ್ನು ವ್ಯಾಪಾರಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು.

”ಈ ಪ್ರದೇಶದಲ್ಲಿ ಚರ್ಚ್ ಕಾಂಪೌಂಡ್ ಒಳಗೆ ಮನೆಗಳು ಇವೆ, ಹಿಂದೆ ಹಿಂಸಾಚಾರ ನಡೆದಾಗ ಅಲ್ಲಿದ್ದವರು ಮನೆ ಬಿಟ್ಟು ಸ್ಥಳಾಂತರಗೊಂಡಿದ್ದಾರೆ. ಇಲ್ಲಿ ಸೇನೆಯನ್ನು ನಿಯೋಜಿಸಲಾಗಿದ್ದರೂ, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಕೆಲವು ಕಡೆಗಳಲ್ಲಿ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಇತ್ತೀಚೆಗೆ ಯಾವುದೇ ದೊಡ್ಡ ಮಟ್ಟದ ಹಿಂಸಾಚಾರ ಅಥವಾ ಜೀವಹಾನಿಯಾಗಿಲ್ಲ. ರಾಜ್ಯದಲ್ಲಿ ಈಗಾಗಲೇ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಒಂದುವೇಳೆ ಅಹಿತಕರ ಘಟನೆಗಳು ನಡೆದರೆ, ಈ ಸ್ಥಳಗಳಿಗೆ ತಲುಪಿ, ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುತ್ತವೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಸೋಮವಾರ ನಡೆದ ಘಟನೆಯಿಂದ ಕರ್ಫ್ಯೂ ಸಡಿಲಿಕೆಯ ಸಮಯವನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಕ್ಕೆ ರಾಜ್ಯ ಸರ್ಕಾರವು ಇಳಿಸಿದೆ. ಮೊದಲು ವಿಶ್ರಾಂತಿ ಅವಧಿಯು ಬೆಳಿಗ್ಗೆ 6 ರಿಂದ ಸಂಜೆ 4 ರವರೆಗೆ ಇತ್ತು.

ಭಾನುವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ ಇಂಫಾಲ್ ಪಶ್ಚಿಮದಲ್ಲಿ ಮೂವರು ಗಾಯಗೊಂಡಿದ್ದಾರೆ. ”ಡಬಲ್ ಬ್ಯಾರೆಲ್ ಗನ್‌ಗಳೊಂದಿಗೆ ಸುತ್ತಾಡುತ್ತಿರುವವರನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಸಿಂಗ್ ಹೇಳಿದರು.

ಕಳೆದ 10 ದಿನಗಳಲ್ಲಿ ಮಣಿಪುರದಲ್ಲಿ ಪರಿಸ್ಥಿತಿ ಹೆಚ್ಚಾಗಿ ಶಾಂತಿಯುತವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು ಮತ್ತು ನಿವಾಸಿಗಳು ಶಾಂತವಾಗಿರಲು ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಲು ಒತ್ತಾಯಿಸಿದರು.

ಭಾನುವಾರ, ಮಣಿಪುರ ಗೃಹ ಇಲಾಖೆಯು, ಸಾಮಾಜಿಕ ಮಾಧ್ಯಮವನ್ನು ದ್ವೇಷ ಭಾಷಣಕ್ಕಾಗಿ ಬಳಸಬಹುದೆಂಬ ಆತಂಕವನ್ನು ಉಲ್ಲೇಖಿಸಿ, ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮೇ 26 ರವರೆಗೆ ವಿಸ್ತರಿಸಿತು.

ಘಟನೆಯ ಹಿನ್ನೆಲೆ

ಮೇ 3 ರಂದು ಮಣಿಪುರ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಮೇ 3 ರಂದು ನಡೆದ ಪ್ರತಿಭಟನೆಯು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಲು ಮೈತಿ ಸಮುದಾಯದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮೈತಿ ಸಮುದಾಯ ರಾಜ್ಯದ ಜನಸಂಖ್ಯೆಯ 60% ರಷ್ಟಿದೆ ಮತ್ತು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ಮೈತಿ ಸಮುದಾಯಗಳಿಗೆ ಅವಕಾಶವಿಲ್ಲ.

ಮತ್ತೊಂದೆಡೆ, ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ ಎಂದು ಕೆಲವು ಬುಡಕಟ್ಟು ಸಮುದಾಯದವರು ಭಯಪಡುತ್ತಾರೆ.

ಮೇ 3ರಂದು ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು, ಬಹುಸಂಖ್ಯಾತ ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಆ ಬಳಿಕ ಈಶಾನ್ಯ ರಾಜ್ಯದಲ್ಲಿ ಮೊದಲು ಹಿಂಸಾಚಾರ ಪ್ರಾರಂಭವಾಯಿತು.

ಈ ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಈ ಹಿಂದೆ ನಡೆದ ಘರ್ಷಣೆಯಲ್ಲಿ ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಮತ್ತು 35,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...